<p><strong>ನಾಗ್ಪುರ</strong>: ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವದಲ್ಲಿ 'ಆರೋಗ್ಯ ಮೂಲಸೌಕರ್ಯ'ಕ್ಕೆ ಭಾರಿ ಉತ್ತೇಜನ ನೀಡಲಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಹೇಳಿದರು. </p><p>ಸೋಮವಾರ ನಾಗ್ಪುರದ ರಾಷ್ಟ್ರೀಯ ಕ್ಯಾನ್ಸರ್ ಚಿಕಿತ್ಸಾ ಸಂಸ್ಥೆಯ ಆವರಣದಲ್ಲಿ ಕ್ಯಾನ್ಸರ್ ರೋಗಿಗಳು ಮತ್ತು ಆರೈಕೆದಾರರಿಗಾಗಿ ನಿರ್ಮಾಣವಾಗುತ್ತಿರುವ 'ಸ್ವಸ್ತಿ ನಿವಾಸ' ವಸತಿ ಸಮುಚ್ಚಯದ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು. </p><p>ಕ್ಯಾನ್ಸರ್ ಪೀಡಿತರ ಕಷ್ಟವು ಹೇಳಿಕೊಳ್ಳಲು ಅಸಾಧ್ಯ, ಇದರಿಂದ ಅವರ ಕುಟುಂಬವು ಕೂಡ ಸಂಕಷ್ಟವನ್ನು ಅನುಭವಿಸುವಂತಾಗುತ್ತದೆ. ಅವರ ಕಣ್ಣೀರು ಒರೆಸುವ ಕೆಲಸವನ್ನು ಈ ಸಂಸ್ಥೆ ಮಾಡಲಿದೆ ಎಂದರು.</p><p>ಮೋದಿ ಸರ್ಕಾರದ ಅವಧಿಯಲ್ಲಿ ಆರೋಗ್ಯ ವಲಯಕ್ಕಾಗಿ ಬಜೆಟ್ನಲ್ಲಿ ₹1.35 ಲಕ್ಷಕೋಟಿ ಮೀಸಲಿಡಲಾಗಿದೆ. 60 ಕೋಟಿ ಬಡ ಜನರು ₹5 ಲಕ್ಷದವರೆಗೆ ಉಚಿತ ಚಿಕಿತ್ಸೆಯ ಸೌಲಭ್ಯವನ್ನು ಪಡೆದಿದ್ದಾರೆ ಎಂದು ತಿಳಿಸಿದರು. </p><p>ಸ್ವಾತಂತ್ರ್ಯ ಬಂದ ನಂತರದಿಂದ ದೇಶದಲ್ಲಿ ಕೇವಲ 7 ಅಖಿಲ ಭಾರತೀಯ ವೈದ್ಯಕೀಯ ವಿಜ್ಞಾನ ಸಂಸ್ಥೆ (ಎಐಐಎಂಎಸ್)ಗಳಿದ್ದವು. ಇದೀಗ ಆ ಸಂಖ್ಯೆ 23ಕ್ಕೆ ಏರಿದೆ ಎಂದರು.</p><p>ಖಾಸಗಿ ವೈದ್ಯಕೀಯ ಸಂಸ್ಥೆಗಳು ಕೂಡ ಸರ್ಕಾರದ ಜನಪರ ಯೋಜನೆಗಳ ಜೊತೆಗೆ ಕೈ ಜೋಡಿಸಿರುವುದರಿಂದ ಆರೋಗ್ಯ ವಲಯದಲ್ಲಿ ಮಹತ್ವದ ಬೆಳವಣಿಗೆಯಾಗುತ್ತಿದೆ ಎಂದು ಶ್ಲಾಘಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಾಗ್ಪುರ</strong>: ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವದಲ್ಲಿ 'ಆರೋಗ್ಯ ಮೂಲಸೌಕರ್ಯ'ಕ್ಕೆ ಭಾರಿ ಉತ್ತೇಜನ ನೀಡಲಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಹೇಳಿದರು. </p><p>ಸೋಮವಾರ ನಾಗ್ಪುರದ ರಾಷ್ಟ್ರೀಯ ಕ್ಯಾನ್ಸರ್ ಚಿಕಿತ್ಸಾ ಸಂಸ್ಥೆಯ ಆವರಣದಲ್ಲಿ ಕ್ಯಾನ್ಸರ್ ರೋಗಿಗಳು ಮತ್ತು ಆರೈಕೆದಾರರಿಗಾಗಿ ನಿರ್ಮಾಣವಾಗುತ್ತಿರುವ 'ಸ್ವಸ್ತಿ ನಿವಾಸ' ವಸತಿ ಸಮುಚ್ಚಯದ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು. </p><p>ಕ್ಯಾನ್ಸರ್ ಪೀಡಿತರ ಕಷ್ಟವು ಹೇಳಿಕೊಳ್ಳಲು ಅಸಾಧ್ಯ, ಇದರಿಂದ ಅವರ ಕುಟುಂಬವು ಕೂಡ ಸಂಕಷ್ಟವನ್ನು ಅನುಭವಿಸುವಂತಾಗುತ್ತದೆ. ಅವರ ಕಣ್ಣೀರು ಒರೆಸುವ ಕೆಲಸವನ್ನು ಈ ಸಂಸ್ಥೆ ಮಾಡಲಿದೆ ಎಂದರು.</p><p>ಮೋದಿ ಸರ್ಕಾರದ ಅವಧಿಯಲ್ಲಿ ಆರೋಗ್ಯ ವಲಯಕ್ಕಾಗಿ ಬಜೆಟ್ನಲ್ಲಿ ₹1.35 ಲಕ್ಷಕೋಟಿ ಮೀಸಲಿಡಲಾಗಿದೆ. 60 ಕೋಟಿ ಬಡ ಜನರು ₹5 ಲಕ್ಷದವರೆಗೆ ಉಚಿತ ಚಿಕಿತ್ಸೆಯ ಸೌಲಭ್ಯವನ್ನು ಪಡೆದಿದ್ದಾರೆ ಎಂದು ತಿಳಿಸಿದರು. </p><p>ಸ್ವಾತಂತ್ರ್ಯ ಬಂದ ನಂತರದಿಂದ ದೇಶದಲ್ಲಿ ಕೇವಲ 7 ಅಖಿಲ ಭಾರತೀಯ ವೈದ್ಯಕೀಯ ವಿಜ್ಞಾನ ಸಂಸ್ಥೆ (ಎಐಐಎಂಎಸ್)ಗಳಿದ್ದವು. ಇದೀಗ ಆ ಸಂಖ್ಯೆ 23ಕ್ಕೆ ಏರಿದೆ ಎಂದರು.</p><p>ಖಾಸಗಿ ವೈದ್ಯಕೀಯ ಸಂಸ್ಥೆಗಳು ಕೂಡ ಸರ್ಕಾರದ ಜನಪರ ಯೋಜನೆಗಳ ಜೊತೆಗೆ ಕೈ ಜೋಡಿಸಿರುವುದರಿಂದ ಆರೋಗ್ಯ ವಲಯದಲ್ಲಿ ಮಹತ್ವದ ಬೆಳವಣಿಗೆಯಾಗುತ್ತಿದೆ ಎಂದು ಶ್ಲಾಘಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>