<p><strong>ನವದೆಹಲಿ:</strong> ಕೋವಿಡ್– 19 ತಡೆಗೆ ಲಸಿಕೆ ಹಾಕುವ ಎರಡನೇ ಹಂತದ ಅಭಿಯಾನದಲ್ಲಿ ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಮತ್ತು ಅವರ ಪತ್ನಿ ಮಂಗಳವಾರ ದೆಹಲಿಯ ಹಾರ್ಟ್ ಅಂಡ್ ಲಂಗ್ ಇನ್ಸ್ಟಿಟ್ಯೂಟ್ನಲ್ಲಿ ಕೋವಿಡ್ ಲಸಿಕೆಯ ಮೊದಲ ಡೋಸ್ ಹಾಕಿಸಿಕೊಂಡರು.</p>.<p>ಸಚಿವರ ಪತ್ನಿ ನೂತನ್ ಗೋಯಲ್ ಅವರು ಮೊದಲು ಕೋವಿಡ್ ಲಸಿಕೆ ಹಾಕಿಸಿಕೊಂಡರು. ನಂತರ ಸಚಿವ ಹರ್ಷವರ್ಧನ್ ಲಸಿಕೆ ಹಾಕಿಸಿಕೊಂಡರು.</p>.<p>ಸೋಮವಾರದಿಂದ ಆರಂಭವಾಗಿರುವ ಎರಡನೇ ಹಂತದ ಅಭಿಯಾನದಲ್ಲಿ 60 ವರ್ಷ ಮೇಲ್ಪಟ್ಟವರಿಗೆ ಲಸಿಕೆ ಹಾಕಲಾಗುತ್ತದೆ. ಹಾಗೆಯೇ, ಗಂಭೀರ ಕಾಯಿಲೆಗಳಿರುವ 45 ರಿಂದ 59 ವರ್ಷದೊಳಗಿನ ವ್ಯಕ್ತಿಗಳಿಗೆ ಲಸಿಕೆ ಹಾಕಲಾಗುತ್ತದೆ.<br />ದೇಶದಲ್ಲಿ ಕೋವಿಡ್ ಲಸಿಕೆ ತೆಗೆದುಕೊಂಡ ಕಾರಣದಿಂದಾಗಿ ಯಾವುದೇ ಸಾವು ಸಂಭವಿಸಿಲ್ಲ. ಈ ಲಸಿಕೆ ಬಗ್ಗೆ ಯಾವುದೇ ಸಂದೇಹವಿಲ್ಲ ಎಂದು ಸಚಿವರು ಹೇಳಿದರು.</p>.<p>‘ಲಸಿಕೆ ಸ್ವೀಕರಿಸಿದ ಕೆಲವು ದಿನಗಳ ನಂತರ ಯಾವುದೇ ಸಾವು ಸಂಭವಿಸಿದಲ್ಲಿ, ಇದು ಲಸಿಕೆಯಿಂದಲೇ ಸಂಭವಿಸಿದೆ ಎಂದು ಹೇಳಲು ಸಾಧ್ಯವಿಲ್ಲ. ಏಕೆಂದರೆ, ಇಂಥ ಪ್ರಕರಣಗಳನ್ನು ವೈಜ್ಞಾನಿಕ ವಿಶ್ಲೇಷಣೆಗೆ ಒಳಪಡಿಸಲಾಗುತ್ತದೆ‘ ಎಂದು ಹರ್ಷವರ್ಧನ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಕೋವಿಡ್– 19 ತಡೆಗೆ ಲಸಿಕೆ ಹಾಕುವ ಎರಡನೇ ಹಂತದ ಅಭಿಯಾನದಲ್ಲಿ ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಮತ್ತು ಅವರ ಪತ್ನಿ ಮಂಗಳವಾರ ದೆಹಲಿಯ ಹಾರ್ಟ್ ಅಂಡ್ ಲಂಗ್ ಇನ್ಸ್ಟಿಟ್ಯೂಟ್ನಲ್ಲಿ ಕೋವಿಡ್ ಲಸಿಕೆಯ ಮೊದಲ ಡೋಸ್ ಹಾಕಿಸಿಕೊಂಡರು.</p>.<p>ಸಚಿವರ ಪತ್ನಿ ನೂತನ್ ಗೋಯಲ್ ಅವರು ಮೊದಲು ಕೋವಿಡ್ ಲಸಿಕೆ ಹಾಕಿಸಿಕೊಂಡರು. ನಂತರ ಸಚಿವ ಹರ್ಷವರ್ಧನ್ ಲಸಿಕೆ ಹಾಕಿಸಿಕೊಂಡರು.</p>.<p>ಸೋಮವಾರದಿಂದ ಆರಂಭವಾಗಿರುವ ಎರಡನೇ ಹಂತದ ಅಭಿಯಾನದಲ್ಲಿ 60 ವರ್ಷ ಮೇಲ್ಪಟ್ಟವರಿಗೆ ಲಸಿಕೆ ಹಾಕಲಾಗುತ್ತದೆ. ಹಾಗೆಯೇ, ಗಂಭೀರ ಕಾಯಿಲೆಗಳಿರುವ 45 ರಿಂದ 59 ವರ್ಷದೊಳಗಿನ ವ್ಯಕ್ತಿಗಳಿಗೆ ಲಸಿಕೆ ಹಾಕಲಾಗುತ್ತದೆ.<br />ದೇಶದಲ್ಲಿ ಕೋವಿಡ್ ಲಸಿಕೆ ತೆಗೆದುಕೊಂಡ ಕಾರಣದಿಂದಾಗಿ ಯಾವುದೇ ಸಾವು ಸಂಭವಿಸಿಲ್ಲ. ಈ ಲಸಿಕೆ ಬಗ್ಗೆ ಯಾವುದೇ ಸಂದೇಹವಿಲ್ಲ ಎಂದು ಸಚಿವರು ಹೇಳಿದರು.</p>.<p>‘ಲಸಿಕೆ ಸ್ವೀಕರಿಸಿದ ಕೆಲವು ದಿನಗಳ ನಂತರ ಯಾವುದೇ ಸಾವು ಸಂಭವಿಸಿದಲ್ಲಿ, ಇದು ಲಸಿಕೆಯಿಂದಲೇ ಸಂಭವಿಸಿದೆ ಎಂದು ಹೇಳಲು ಸಾಧ್ಯವಿಲ್ಲ. ಏಕೆಂದರೆ, ಇಂಥ ಪ್ರಕರಣಗಳನ್ನು ವೈಜ್ಞಾನಿಕ ವಿಶ್ಲೇಷಣೆಗೆ ಒಳಪಡಿಸಲಾಗುತ್ತದೆ‘ ಎಂದು ಹರ್ಷವರ್ಧನ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>