<p><strong>ನವದೆಹಲಿ:</strong> ತಾಲಿಬಾನ್ ವಶದಿಂದ ತಪ್ಪಿಸಿಕೊಂಡು ಭಾರತಕ್ಕೆ ಸುರಕ್ಷಿತವಾಗಿ ವಾಪಸ್ ಬಂದಿಳಿದ ತನ್ನ ತಾಯಿ ಮತ್ತು ತಂಗಿಯನ್ನು ನೋಡಿದ ಅಕ್ಕನ ಕಣ್ಣಲ್ಲಿ ಆನಂದ ಬಾಷ್ಪ ಸುರಿಯುತ್ತಿದ್ದ ಹೃದಯಸ್ಪರ್ಶಿ ಸನ್ನಿವೇಶಕ್ಕೆ ಹಿಂಡನ್ ವಾಯುನೆಲೆ ಭಾನುವಾರ ಸಾಕ್ಷಿಯಾಯಿತು.</p>.<p>ಅಫ್ಗಾನಿಸ್ತಾನದ ಕಾಬೂಲ್ ವಿಮಾನ ನಿಲ್ದಾಣದಿಂದ ಭಾರತೀಯ ವಾಯುಪಡೆ ವಿಶೇಷ ವಿಮಾನದ ಮೂಲಕ 168 ಮಂದಿಯನ್ನು ದೇಶಕ್ಕೆ ಕರೆತರಲಾಗಿದೆ. ಇವರಲ್ಲಿ 107 ಮಂದಿ ಭಾರತೀಯರಿದ್ದಾರೆ.</p>.<p>ಈ ಕುರಿತು ಸುದ್ದಿ ಸಂಸ್ಥೆ ಎಎನ್ಐ ವಿಡಿಯೊವನ್ನು ಟ್ವಿಟರ್ನಲ್ಲಿ ಹಂಚಿಕೊಂಡಿದ್ದು, ತಾಯಿಯ ಮಡಿಲಲ್ಲಿ ಕುಳಿತಿರುವ ತಂಗಿಯನ್ನು ನೋಡಿದ ಅಕ್ಕ ಸಂತೋಷದಿಂದ ನಗುತ್ತಾ ಆಕೆಯನ್ನು ಚುಂಬಿಸುತ್ತಿರುವ ದೃಶ್ಯ ವಿಡಿಯೊದಲ್ಲಿ ಸೆರೆಯಾಗಿದೆ.</p>.<p><strong>ಓದಿ:</strong><a href="https://www.prajavani.net/india-news/evacuated-87-indians-from-kabul-chant-bharat-mata-ki-jai-859948.html" itemprop="url" target="_blank">ಆಫ್ಗನ್ನಿಂದ 87 ಭಾರತೀಯರು ಮರಳಿ ತಾಯ್ನಾಡಿಗೆ, ಭಾರತ್ ಮಾತಾ ಕಿ ಜೈ ಘೋಷಣೆ</a></p>.<p>‘ಅಫ್ಗಾನಿಸ್ತಾನದಲ್ಲಿ ಪರಿಸ್ಥಿತಿ ತುಂಬಾ ಹದಗೆಡುತ್ತಿದೆ. ತಾಲಿಬಾನಿಗಳು ನಮ್ಮ ಮನೆಗಳನ್ನು ಸುಟ್ಟುಹಾಕಿದ್ದಾರೆ. ಅನೇಕರು ಉದ್ಯೋಗ, ಮನೆಗಳನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದಾರೆ. ನಮಗೆ ಸಹಾಯ ಮಾಡಿದ್ದಕ್ಕಾಗಿ ನಾನು ಭಾರತಕ್ಕೆ ಧನ್ಯವಾದ ಹೇಳುತ್ತೇನೆ’ ಎಂದು ಮಹಿಳೆಯೊಬ್ಬರು ತಿಳಿಸಿರುವುದಾಗಿ ಎಎನ್ಐ ವರದಿ ಮಾಡಿದೆ.</p>.<p>ಅಫ್ಗಾನಿಸ್ತಾನದಲ್ಲಿ ನೆಲೆಸಿರುವ ಭಾರತೀಯರನ್ನು ವಾಪಸ್ ಕರೆತರಲು ಕೇಂದ್ರ ಸರ್ಕಾರ ಮುಂದಾಗಿದೆ. ಕಳೆದ 24 ಗಂಟೆಗಳಲ್ಲಿ ಕಾಬೂಲ್ನಿಂದ ಭಾರತ ಸುಮಾರು 400 ಜನರನ್ನು ಸ್ಥಳಾಂತರಗೊಳಿಸಿದೆ ಎಂದು ವಿದೇಶಾಂಗ ಸಚಿವಾಲಯ ಮಾಹಿತಿ ನೀಡಿದೆ.</p>.<p>ಅಫ್ಗಾನಿಸ್ತಾನದಲ್ಲಿ ನಿಯೋಜನೆಗೊಂಡಿದ್ದ ತನ್ನ ಭದ್ರತಾ ಪಡೆಗಳನ್ನು ಅಮೆರಿಕ ಹಿಂದಕ್ಕೆ ಪಡೆದಿದೆ. ಹೀಗಾಗಿ ದೇಶದಲ್ಲಿ ಮೇಲುಗೈ ಸಾಧಿಸಿರುವ ತಾಲಿಬಾನ್, ಅಲ್ಲಿನ ಸರ್ಕಾರವನ್ನು ಉರುಳಿಸಿ, ತನ್ನ ಆಡಳಿತ ಘೋಷಿಸಿಕೊಂಡಿದೆ. ಜತೆಗೆ, ಶರಿಯಾ ಕಾನೂನಿನ ಅಡಿಯಲ್ಲಿ ಹಲವು ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೆ ತಂದಿದೆ.</p>.<p><strong>ಇದನ್ನೂ ಓದಿ... <a href="https://www.prajavani.net/entertainment/cinema/sandalwood-rebel-star-ambareesh-gifted-rs-2-lakh-cash-prize-for-ms-dhoni-859998.html" target="_blank">ಧೋನಿಗೆ ₹2 ಲಕ್ಷ ನೀಡಿದ್ದ ಅಂಬರೀಷ್: ನೆನಪು ಮೆಲುಕು ಹಾಕಿದ ಸಂಸದೆ ಸುಮಲತಾ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ತಾಲಿಬಾನ್ ವಶದಿಂದ ತಪ್ಪಿಸಿಕೊಂಡು ಭಾರತಕ್ಕೆ ಸುರಕ್ಷಿತವಾಗಿ ವಾಪಸ್ ಬಂದಿಳಿದ ತನ್ನ ತಾಯಿ ಮತ್ತು ತಂಗಿಯನ್ನು ನೋಡಿದ ಅಕ್ಕನ ಕಣ್ಣಲ್ಲಿ ಆನಂದ ಬಾಷ್ಪ ಸುರಿಯುತ್ತಿದ್ದ ಹೃದಯಸ್ಪರ್ಶಿ ಸನ್ನಿವೇಶಕ್ಕೆ ಹಿಂಡನ್ ವಾಯುನೆಲೆ ಭಾನುವಾರ ಸಾಕ್ಷಿಯಾಯಿತು.</p>.<p>ಅಫ್ಗಾನಿಸ್ತಾನದ ಕಾಬೂಲ್ ವಿಮಾನ ನಿಲ್ದಾಣದಿಂದ ಭಾರತೀಯ ವಾಯುಪಡೆ ವಿಶೇಷ ವಿಮಾನದ ಮೂಲಕ 168 ಮಂದಿಯನ್ನು ದೇಶಕ್ಕೆ ಕರೆತರಲಾಗಿದೆ. ಇವರಲ್ಲಿ 107 ಮಂದಿ ಭಾರತೀಯರಿದ್ದಾರೆ.</p>.<p>ಈ ಕುರಿತು ಸುದ್ದಿ ಸಂಸ್ಥೆ ಎಎನ್ಐ ವಿಡಿಯೊವನ್ನು ಟ್ವಿಟರ್ನಲ್ಲಿ ಹಂಚಿಕೊಂಡಿದ್ದು, ತಾಯಿಯ ಮಡಿಲಲ್ಲಿ ಕುಳಿತಿರುವ ತಂಗಿಯನ್ನು ನೋಡಿದ ಅಕ್ಕ ಸಂತೋಷದಿಂದ ನಗುತ್ತಾ ಆಕೆಯನ್ನು ಚುಂಬಿಸುತ್ತಿರುವ ದೃಶ್ಯ ವಿಡಿಯೊದಲ್ಲಿ ಸೆರೆಯಾಗಿದೆ.</p>.<p><strong>ಓದಿ:</strong><a href="https://www.prajavani.net/india-news/evacuated-87-indians-from-kabul-chant-bharat-mata-ki-jai-859948.html" itemprop="url" target="_blank">ಆಫ್ಗನ್ನಿಂದ 87 ಭಾರತೀಯರು ಮರಳಿ ತಾಯ್ನಾಡಿಗೆ, ಭಾರತ್ ಮಾತಾ ಕಿ ಜೈ ಘೋಷಣೆ</a></p>.<p>‘ಅಫ್ಗಾನಿಸ್ತಾನದಲ್ಲಿ ಪರಿಸ್ಥಿತಿ ತುಂಬಾ ಹದಗೆಡುತ್ತಿದೆ. ತಾಲಿಬಾನಿಗಳು ನಮ್ಮ ಮನೆಗಳನ್ನು ಸುಟ್ಟುಹಾಕಿದ್ದಾರೆ. ಅನೇಕರು ಉದ್ಯೋಗ, ಮನೆಗಳನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದಾರೆ. ನಮಗೆ ಸಹಾಯ ಮಾಡಿದ್ದಕ್ಕಾಗಿ ನಾನು ಭಾರತಕ್ಕೆ ಧನ್ಯವಾದ ಹೇಳುತ್ತೇನೆ’ ಎಂದು ಮಹಿಳೆಯೊಬ್ಬರು ತಿಳಿಸಿರುವುದಾಗಿ ಎಎನ್ಐ ವರದಿ ಮಾಡಿದೆ.</p>.<p>ಅಫ್ಗಾನಿಸ್ತಾನದಲ್ಲಿ ನೆಲೆಸಿರುವ ಭಾರತೀಯರನ್ನು ವಾಪಸ್ ಕರೆತರಲು ಕೇಂದ್ರ ಸರ್ಕಾರ ಮುಂದಾಗಿದೆ. ಕಳೆದ 24 ಗಂಟೆಗಳಲ್ಲಿ ಕಾಬೂಲ್ನಿಂದ ಭಾರತ ಸುಮಾರು 400 ಜನರನ್ನು ಸ್ಥಳಾಂತರಗೊಳಿಸಿದೆ ಎಂದು ವಿದೇಶಾಂಗ ಸಚಿವಾಲಯ ಮಾಹಿತಿ ನೀಡಿದೆ.</p>.<p>ಅಫ್ಗಾನಿಸ್ತಾನದಲ್ಲಿ ನಿಯೋಜನೆಗೊಂಡಿದ್ದ ತನ್ನ ಭದ್ರತಾ ಪಡೆಗಳನ್ನು ಅಮೆರಿಕ ಹಿಂದಕ್ಕೆ ಪಡೆದಿದೆ. ಹೀಗಾಗಿ ದೇಶದಲ್ಲಿ ಮೇಲುಗೈ ಸಾಧಿಸಿರುವ ತಾಲಿಬಾನ್, ಅಲ್ಲಿನ ಸರ್ಕಾರವನ್ನು ಉರುಳಿಸಿ, ತನ್ನ ಆಡಳಿತ ಘೋಷಿಸಿಕೊಂಡಿದೆ. ಜತೆಗೆ, ಶರಿಯಾ ಕಾನೂನಿನ ಅಡಿಯಲ್ಲಿ ಹಲವು ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೆ ತಂದಿದೆ.</p>.<p><strong>ಇದನ್ನೂ ಓದಿ... <a href="https://www.prajavani.net/entertainment/cinema/sandalwood-rebel-star-ambareesh-gifted-rs-2-lakh-cash-prize-for-ms-dhoni-859998.html" target="_blank">ಧೋನಿಗೆ ₹2 ಲಕ್ಷ ನೀಡಿದ್ದ ಅಂಬರೀಷ್: ನೆನಪು ಮೆಲುಕು ಹಾಕಿದ ಸಂಸದೆ ಸುಮಲತಾ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>