<p><strong>ಗುವಾಹಟಿ/ ಇಟಾನಗರ</strong>: ಮಳೆ ಸಂಬಂಧಿತ ಅವಘಡಗಳಿಂದಾಗಿ ಅರುಣಾಚಲ ಪ್ರದೇಶ ಮತ್ತು ಅಸ್ಸಾಂನಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದ್ದು, 14 ಮಂದಿ ಮೃತಪಟ್ಟಿದ್ದಾರೆ.</p>.<p>ಅಸ್ಸಾಂನಲ್ಲಿ 24 ತಾಸಿನಲ್ಲಿ ಸುರಿದ ಧಾರಾಕಾರ ಮಳೆಯಿಂದಾಗಿ ಸಂಭವಿಸಿದ ಭೂಕುಸಿತದಲ್ಲಿ ಸಿಲುಕಿ ಐವರು ಮೃತಪಟ್ಟಿದ್ದಾರೆ. ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅಧಿಕೃತ ಪ್ರಕಟಣೆಯಲ್ಲಿ ಶನಿವಾರ ತಿಳಿಸಲಾಗಿದೆ.</p>.<p>10,000ಕ್ಕೂ ಅಧಿಕ ಮಂದಿ ಸಂಕಷ್ಟಕ್ಕೆ ಸಿಲುಕಿದ್ದು, ಸಂತ್ರಸ್ತರಿಗಾಗಿ ಎರಡು ಶಿಬಿರಗಳು ಮತ್ತು ಒಂದು ಪರಿಹಾರ ಸಾಮಗ್ರಿ ವಿತರಣಾ ಕೇಂದ್ರವನ್ನು ತೆರೆಯಲಾಗಿದೆ.</p>.<p>ಅಸ್ಸಾಂ ರಾಜ್ಯ ವಿಪತ್ತು ನಿರ್ವಹಣೆ ಪ್ರಾಧಿಕಾರವು, ‘ಕಾಮರೂಪ್ ಮೆಟ್ರೊಪಾಲಿಟನ್ ಜಿಲ್ಲೆಯಲ್ಲಿ ಈ ಸಾವುಗಳು ಸಂಭವಿಸಿವೆ’ ಎಂದು ತಿಳಿಸಿದೆ.</p>.<p>ಎನ್ಡಿಆರ್ಎಫ್ ಮತ್ತು ಎಸ್ಡಿಆರ್ಎಫ್ ಸಿಬ್ಬಂದಿ ಸಂಕಷ್ಟದಲ್ಲಿ ಸಿಲುಕಿರುವ ಜನರ ಸ್ಥಳಾಂತರ ಮಾಡುವ ಕಾರ್ಯದಲ್ಲಿ ನಿರತರಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.</p>.<h2><strong>ಸರ್ಕಾರಿ ನೌಕರರಿಗೆ ರಜೆ: </strong></h2><p>ಕಾಮರೂಪ್ ಮತ್ತು ಕಾಮರೂಪ್ ಮೆಟ್ರೊಪಾಲಿಟನ್ ಜಿಲ್ಲೆಗಳ ಸರ್ಕಾರಿ ನೌಕರರಿಗೆ ಶನಿವಾರ ವಿಶೇಷ ಸಾಂದರ್ಭಿಕ ರಜೆ ನೀಡಲಾಗಿದೆ. ಎರಡು ಜಿಲ್ಲೆಗಳ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ.</p>.<p>ಭಾರಿ ಮಳೆ ಮತ್ತು ಗಾಳಿಯಿಂದಾಗಿ ಶುಕ್ರವಾರ ಗುವಾಹಟಿ ವಿಮಾನ ನಿಲ್ದಾಣದಲ್ಲಿ ವಿಮಾನ ಸೇವೆಯಲ್ಲಿ ವ್ಯತ್ಯಯ ಉಂಟಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<h2><strong>ಅರುಣಾಚಲದಲ್ಲಿ 9 ಮಂದಿ ಸಾವು: </strong></h2><p>ಕಳೆದ ಕೆಲವು ದಿನಗಳಿಂದ ಅರುಣಾಚಲ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿದ್ದು, ಇದರಿಂದ ಸಂಭವಿಸಿದ ಪ್ರವಾಹ ಮತ್ತು ಭೂಕುಸಿತದಲ್ಲಿ ಒಂಬತ್ತು ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. </p>.<p>ಪೂರ್ವ ಕಮೆಂಗ್ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ ದಿಢೀರ್ ಭೂಕುಸಿತದಿಂದಾಗಿ ವಾಹನವು ರಸ್ತೆಯಿಂದ ಉರುಳಿ ಕಂದಕಕ್ಕೆ ಬಿದ್ದ ಪರಿಣಾಮ ಎರಡು ಕುಟುಂಬದ ಏಳು ಮಂದಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಕೆಳಗಿನ ಸುಬನ್ಸಿರಿ ಜಿಲ್ಲೆಯಲ್ಲಿ ಗುರುವಾರ ತಡರಾತ್ರಿ ಸಂಭವಿಸಿದ ಭೂಕುಸಿತದಲ್ಲಿ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದಾರೆ ಎಂದು ಹೇಳಿದ್ದಾರೆ.</p>.<p>ಜಿಲ್ಲೆಯ ಪ್ರಮುಖ ಮೂಲಸೌಕರ್ಯಗಳು ಸೇರಿದಂತೆ ಕನಿಷ್ಠ 117 ಮನೆಗಳಿಗೆಹಾನಿಯಾಗಿದೆ. ಪೊಲೀಸರು, ವಿಪತ್ತು ನಿರ್ವಹಣಾ ಪ್ರಾಧಿಕಾರ ಸೇರಿದಂತೆ ಸಂಬಂಧಿಸಿದ ಎಲ್ಲ ಇಲಾಖೆಗಳ ಸಿಬ್ಬಂದಿ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ.</p>.<p>ಮೇಲಿನ ಸುಬನ್ಸಿರಿ ಜಿಲ್ಲೆಯ ಪ್ರವಾಹದ ನೀರಿನಿಂದಾಗಿ ಜಿಲ್ಲಾ ಕೇಂದ್ರವಾದ ದಾಪೋರಿಜೋದಲ್ಲಿ ಅಪಾರ ಪ್ರಮಾಣದ ಹಾನಿಯಾಗಿದೆ. ಸಿಗಿನ್ ನದಿಯು ಉಕ್ಕಿ ಹರಿದ ಪರಿಣಾಮ ತಗ್ಗು ಪ್ರದೇಶಗಳು ನೀರಿನಿಂದ ಆವೃತವಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಸಿಕ್ಕಿಂ ರಾಜಧಾನಿ ಗ್ಯಾಂಗ್ಟಕ್ ನಲ್ಲಿ ಪ್ರವಾಸಕ್ಕೆ ಬಂದಿದ್ದ 500ಕ್ಕೂ ಹೆಚ್ಚಿನ ಪ್ರವಾಸಿಗರು ಪ್ರವಾಹದಿಂದ ಸಂಕಷ್ಟದಲ್ಲಿ ಸಿಲುಕಿಕೊಂಡಿದ್ದಾರೆ.</p> .<div><blockquote>ಅರುಣಾಚಲಪ್ರದೇಶ ಮೇಘಾಲಯದಲ್ಲೂ ಭಾರಿ ಮಳೆಯಾಗುತ್ತಿರುವುದು ಅಸ್ಸಾಂನಲ್ಲಿ ಅದರಲ್ಲೂ ಗುವಾಹಟಿಯಲ್ಲಿ ಪರಿಸ್ಥಿತಿಯನ್ನು ಇನ್ನಷ್ಟು ಹದಗೆಡಿಸಿದೆ.</blockquote><span class="attribution">– ಹಿಮಂತ್ ಬಿಸ್ವಾ ಶರ್ಮಾ, ಮುಖ್ಯಮಂತ್ರಿ </span></div>.<h2><strong>ಕೇರಳ: ನೂರಾರು ಜನರ ಸ್ಥಳಾಂತರ</strong></h2><h2></h2><p><strong>ತಿರುವನಂತಪುರ</strong>: ಕೇರಳದಲ್ಲಿ ಮಳೆಯ ಅಬ್ಬರ ಜೋರಾಗಿದ್ದು ತಗ್ಗು ಪ್ರದೇಶಗಳ ನೂರಾರು ಜನರನ್ನು ಆಶ್ರಯ ಕೇಂದ್ರಗಳಿಗೆ ಸ್ಥಳಾಂತರಿಸಲಾಗಿದೆ. ಕಾಸರಗೋಡಿನಲ್ಲಿ ಮಧುವಾಹಿನಿ ನದಿಯು ತುಂಬಿ ಹರಿಯುತ್ತಿದ್ದು ಹಲವು ಪ್ರದೇಶಗಳ ರಸ್ತೆಗಳು ಮನೆಗಳು ಜಲಾವೃತವಾಗಿವೆ.</p><p>ಮನೆಗಳ ನೆಲಮಹಡಿಗೆ ನೀರು ನುಗ್ಗುತ್ತಿದ್ದಂತೆಯೇ ಕೆಲವು ಜನರು ಮೊದಲ ಮಹಡಿಗೆ ಸ್ಥಳಾಂತರಗೊಂಡಿದ್ದಾರೆ. ಕಣ್ಣೂರಿನಲ್ಲಿ ಹಲವು ಮನೆಗಳ ಮುಂಭಾಗ ಮರದ ಕಂಟ್ರಿ ಬೋಟ್ ಮತ್ತು ಫೈಬರ್ ಬೋಟ್ ಕಟ್ಟಿರುವುದು ಕಂಡುಬರುತ್ತಿದೆ. ಕೊಟ್ಟಾಯಂ ಜಿಲ್ಲೆಯಲ್ಲಿ 46 ಆಶ್ರಯ ಶಿಬಿರಗಳನ್ನು ತೆರೆಯಲಾಗಿದೆ.</p><p>1136 ಮಂದಿ ಇಲ್ಲಿ ನೆಲಸಿದ್ದಾರೆ ಎಂದು ಜಿಲ್ಲೆಯ ಅಧಿಕಾರಿಗಳು ತಿಳಿಸಿದ್ದಾರೆ. ಆಲಪ್ಪುಳದಲ್ಲಿ 26 ಶಿಬಿರಗಳನ್ನು ತೆರೆಯಲಾಗಿದ್ದು 851 ಮಂದಿ ಆಶ್ರಯ ಪಡೆದಿದ್ದಾರೆ. ಇಲ್ಲಿ ಶುಕ್ರವಾರ ಒಂದೇ ದಿನ 19 ಮನೆಗಳು ಕುಸಿದುಬಿದ್ದಿದ್ದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುವಾಹಟಿ/ ಇಟಾನಗರ</strong>: ಮಳೆ ಸಂಬಂಧಿತ ಅವಘಡಗಳಿಂದಾಗಿ ಅರುಣಾಚಲ ಪ್ರದೇಶ ಮತ್ತು ಅಸ್ಸಾಂನಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದ್ದು, 14 ಮಂದಿ ಮೃತಪಟ್ಟಿದ್ದಾರೆ.</p>.<p>ಅಸ್ಸಾಂನಲ್ಲಿ 24 ತಾಸಿನಲ್ಲಿ ಸುರಿದ ಧಾರಾಕಾರ ಮಳೆಯಿಂದಾಗಿ ಸಂಭವಿಸಿದ ಭೂಕುಸಿತದಲ್ಲಿ ಸಿಲುಕಿ ಐವರು ಮೃತಪಟ್ಟಿದ್ದಾರೆ. ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅಧಿಕೃತ ಪ್ರಕಟಣೆಯಲ್ಲಿ ಶನಿವಾರ ತಿಳಿಸಲಾಗಿದೆ.</p>.<p>10,000ಕ್ಕೂ ಅಧಿಕ ಮಂದಿ ಸಂಕಷ್ಟಕ್ಕೆ ಸಿಲುಕಿದ್ದು, ಸಂತ್ರಸ್ತರಿಗಾಗಿ ಎರಡು ಶಿಬಿರಗಳು ಮತ್ತು ಒಂದು ಪರಿಹಾರ ಸಾಮಗ್ರಿ ವಿತರಣಾ ಕೇಂದ್ರವನ್ನು ತೆರೆಯಲಾಗಿದೆ.</p>.<p>ಅಸ್ಸಾಂ ರಾಜ್ಯ ವಿಪತ್ತು ನಿರ್ವಹಣೆ ಪ್ರಾಧಿಕಾರವು, ‘ಕಾಮರೂಪ್ ಮೆಟ್ರೊಪಾಲಿಟನ್ ಜಿಲ್ಲೆಯಲ್ಲಿ ಈ ಸಾವುಗಳು ಸಂಭವಿಸಿವೆ’ ಎಂದು ತಿಳಿಸಿದೆ.</p>.<p>ಎನ್ಡಿಆರ್ಎಫ್ ಮತ್ತು ಎಸ್ಡಿಆರ್ಎಫ್ ಸಿಬ್ಬಂದಿ ಸಂಕಷ್ಟದಲ್ಲಿ ಸಿಲುಕಿರುವ ಜನರ ಸ್ಥಳಾಂತರ ಮಾಡುವ ಕಾರ್ಯದಲ್ಲಿ ನಿರತರಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.</p>.<h2><strong>ಸರ್ಕಾರಿ ನೌಕರರಿಗೆ ರಜೆ: </strong></h2><p>ಕಾಮರೂಪ್ ಮತ್ತು ಕಾಮರೂಪ್ ಮೆಟ್ರೊಪಾಲಿಟನ್ ಜಿಲ್ಲೆಗಳ ಸರ್ಕಾರಿ ನೌಕರರಿಗೆ ಶನಿವಾರ ವಿಶೇಷ ಸಾಂದರ್ಭಿಕ ರಜೆ ನೀಡಲಾಗಿದೆ. ಎರಡು ಜಿಲ್ಲೆಗಳ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ.</p>.<p>ಭಾರಿ ಮಳೆ ಮತ್ತು ಗಾಳಿಯಿಂದಾಗಿ ಶುಕ್ರವಾರ ಗುವಾಹಟಿ ವಿಮಾನ ನಿಲ್ದಾಣದಲ್ಲಿ ವಿಮಾನ ಸೇವೆಯಲ್ಲಿ ವ್ಯತ್ಯಯ ಉಂಟಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<h2><strong>ಅರುಣಾಚಲದಲ್ಲಿ 9 ಮಂದಿ ಸಾವು: </strong></h2><p>ಕಳೆದ ಕೆಲವು ದಿನಗಳಿಂದ ಅರುಣಾಚಲ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿದ್ದು, ಇದರಿಂದ ಸಂಭವಿಸಿದ ಪ್ರವಾಹ ಮತ್ತು ಭೂಕುಸಿತದಲ್ಲಿ ಒಂಬತ್ತು ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. </p>.<p>ಪೂರ್ವ ಕಮೆಂಗ್ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ ದಿಢೀರ್ ಭೂಕುಸಿತದಿಂದಾಗಿ ವಾಹನವು ರಸ್ತೆಯಿಂದ ಉರುಳಿ ಕಂದಕಕ್ಕೆ ಬಿದ್ದ ಪರಿಣಾಮ ಎರಡು ಕುಟುಂಬದ ಏಳು ಮಂದಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಕೆಳಗಿನ ಸುಬನ್ಸಿರಿ ಜಿಲ್ಲೆಯಲ್ಲಿ ಗುರುವಾರ ತಡರಾತ್ರಿ ಸಂಭವಿಸಿದ ಭೂಕುಸಿತದಲ್ಲಿ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದಾರೆ ಎಂದು ಹೇಳಿದ್ದಾರೆ.</p>.<p>ಜಿಲ್ಲೆಯ ಪ್ರಮುಖ ಮೂಲಸೌಕರ್ಯಗಳು ಸೇರಿದಂತೆ ಕನಿಷ್ಠ 117 ಮನೆಗಳಿಗೆಹಾನಿಯಾಗಿದೆ. ಪೊಲೀಸರು, ವಿಪತ್ತು ನಿರ್ವಹಣಾ ಪ್ರಾಧಿಕಾರ ಸೇರಿದಂತೆ ಸಂಬಂಧಿಸಿದ ಎಲ್ಲ ಇಲಾಖೆಗಳ ಸಿಬ್ಬಂದಿ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ.</p>.<p>ಮೇಲಿನ ಸುಬನ್ಸಿರಿ ಜಿಲ್ಲೆಯ ಪ್ರವಾಹದ ನೀರಿನಿಂದಾಗಿ ಜಿಲ್ಲಾ ಕೇಂದ್ರವಾದ ದಾಪೋರಿಜೋದಲ್ಲಿ ಅಪಾರ ಪ್ರಮಾಣದ ಹಾನಿಯಾಗಿದೆ. ಸಿಗಿನ್ ನದಿಯು ಉಕ್ಕಿ ಹರಿದ ಪರಿಣಾಮ ತಗ್ಗು ಪ್ರದೇಶಗಳು ನೀರಿನಿಂದ ಆವೃತವಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಸಿಕ್ಕಿಂ ರಾಜಧಾನಿ ಗ್ಯಾಂಗ್ಟಕ್ ನಲ್ಲಿ ಪ್ರವಾಸಕ್ಕೆ ಬಂದಿದ್ದ 500ಕ್ಕೂ ಹೆಚ್ಚಿನ ಪ್ರವಾಸಿಗರು ಪ್ರವಾಹದಿಂದ ಸಂಕಷ್ಟದಲ್ಲಿ ಸಿಲುಕಿಕೊಂಡಿದ್ದಾರೆ.</p> .<div><blockquote>ಅರುಣಾಚಲಪ್ರದೇಶ ಮೇಘಾಲಯದಲ್ಲೂ ಭಾರಿ ಮಳೆಯಾಗುತ್ತಿರುವುದು ಅಸ್ಸಾಂನಲ್ಲಿ ಅದರಲ್ಲೂ ಗುವಾಹಟಿಯಲ್ಲಿ ಪರಿಸ್ಥಿತಿಯನ್ನು ಇನ್ನಷ್ಟು ಹದಗೆಡಿಸಿದೆ.</blockquote><span class="attribution">– ಹಿಮಂತ್ ಬಿಸ್ವಾ ಶರ್ಮಾ, ಮುಖ್ಯಮಂತ್ರಿ </span></div>.<h2><strong>ಕೇರಳ: ನೂರಾರು ಜನರ ಸ್ಥಳಾಂತರ</strong></h2><h2></h2><p><strong>ತಿರುವನಂತಪುರ</strong>: ಕೇರಳದಲ್ಲಿ ಮಳೆಯ ಅಬ್ಬರ ಜೋರಾಗಿದ್ದು ತಗ್ಗು ಪ್ರದೇಶಗಳ ನೂರಾರು ಜನರನ್ನು ಆಶ್ರಯ ಕೇಂದ್ರಗಳಿಗೆ ಸ್ಥಳಾಂತರಿಸಲಾಗಿದೆ. ಕಾಸರಗೋಡಿನಲ್ಲಿ ಮಧುವಾಹಿನಿ ನದಿಯು ತುಂಬಿ ಹರಿಯುತ್ತಿದ್ದು ಹಲವು ಪ್ರದೇಶಗಳ ರಸ್ತೆಗಳು ಮನೆಗಳು ಜಲಾವೃತವಾಗಿವೆ.</p><p>ಮನೆಗಳ ನೆಲಮಹಡಿಗೆ ನೀರು ನುಗ್ಗುತ್ತಿದ್ದಂತೆಯೇ ಕೆಲವು ಜನರು ಮೊದಲ ಮಹಡಿಗೆ ಸ್ಥಳಾಂತರಗೊಂಡಿದ್ದಾರೆ. ಕಣ್ಣೂರಿನಲ್ಲಿ ಹಲವು ಮನೆಗಳ ಮುಂಭಾಗ ಮರದ ಕಂಟ್ರಿ ಬೋಟ್ ಮತ್ತು ಫೈಬರ್ ಬೋಟ್ ಕಟ್ಟಿರುವುದು ಕಂಡುಬರುತ್ತಿದೆ. ಕೊಟ್ಟಾಯಂ ಜಿಲ್ಲೆಯಲ್ಲಿ 46 ಆಶ್ರಯ ಶಿಬಿರಗಳನ್ನು ತೆರೆಯಲಾಗಿದೆ.</p><p>1136 ಮಂದಿ ಇಲ್ಲಿ ನೆಲಸಿದ್ದಾರೆ ಎಂದು ಜಿಲ್ಲೆಯ ಅಧಿಕಾರಿಗಳು ತಿಳಿಸಿದ್ದಾರೆ. ಆಲಪ್ಪುಳದಲ್ಲಿ 26 ಶಿಬಿರಗಳನ್ನು ತೆರೆಯಲಾಗಿದ್ದು 851 ಮಂದಿ ಆಶ್ರಯ ಪಡೆದಿದ್ದಾರೆ. ಇಲ್ಲಿ ಶುಕ್ರವಾರ ಒಂದೇ ದಿನ 19 ಮನೆಗಳು ಕುಸಿದುಬಿದ್ದಿದ್ದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>