<p><strong>ಶಿಮ್ಲಾ(ಹಿಮಾಚಲ ಪ್ರದೇಶ):</strong> ಭಾನುವಾರ ಇಡೀ ದಿನ ಸುರಿದ ಭಾರಿ ಮಳೆಗೆ ಹಿಮಾಚಲ ಪ್ರದೇಶದಲ್ಲಿ ಹಠಾತ್ ಪ್ರವಾಹ ಉಂಟಾಗಿದ್ದು, ಅಲ್ಲಲ್ಲಿ ಭೂಕುಸಿತ ಸಂಭವಿಸಿದೆ. ಮಳೆಗೆ ನಾಲ್ಕು ಹೆದ್ದಾರಿಗಳು ಸೇರಿದಂತೆ 338 ರಸ್ತೆಗಳು ಜಲಾವೃತವಾಗಿ ಸಂಚಾರ ಸ್ಥಗಿತಗೊಂಡಿದೆ.</p><p>‘ಶಿಮ್ಲಾ ಜಿಲ್ಲೆಯಲ್ಲಿ 104 ರಸ್ತೆಗಳು, ಮಂಡಿಯಲ್ಲಿ 71, ಸಿರ್ಮೌರ್ 58, ಚಂಬಾದಲ್ಲಿ 55, ಕುಲ್ಲು ಜಿಲ್ಲೆಯಲ್ಲಿ 26, ಸೋಲಾನ್, ಲಾಹೌಲ್ ಮತ್ತು ಸ್ಪಿತಿಯಲ್ಲಿ ತಲಾ 7, ಕಿನ್ನೌರದಲ್ಲಿ 5, ಬಿಲಾಸ್ಪುರ್ನಲ್ಲಿ 1 ಹಾಗೂ ಕಾಂಗ್ರಾ ಜಿಲ್ಲೆಯ 4 ರಸ್ತೆಗಳಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದೆ’ ಎಂದು ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರ ತಿಳಿಸಿದೆ.</p><p>‘ಜೂನ್ 27ರಿಂದ ಆಗಸ್ಟ್ 9 ರವರೆಗೆ ಮಳೆ ಸಂಬಂಧಿತ ಅವಘಡಗಳಲ್ಲಿ ಸುಮಾರು 100 ಜನ ಮೃತಪಟ್ಟಿದ್ದು, ಅಂದಾಜು ₹842 ಕೋಟಿ ನಷ್ಟವಾಗಿದೆ’ ಎಂದು ಅಧಿಕಾರಿಗಳು ತಿಳಿಸಿದರು.</p><p>‘ನಿನ್ನೆ ಮಳೆಗೆ ಚಂಬಾ, ಮಂಡಿ, ಕಿನ್ನೌರ್, ಶಿಮ್ಲಾ, ಸಿರ್ಮೌರ್ ಮತ್ತು ಸೋಲನ್ ಜಿಲ್ಲೆಗಳಲ್ಲಿ ಭೂಕುಸಿತ ಮತ್ತು ಹಠಾತ್ ಪ್ರವಾಹ ವರದಿಯಾಗಿದೆ’ ಎಂದು ಅವರು ಹೇಳಿದರು.</p><p>ಶನಿವಾರದವರೆಗೆ ರಾಜ್ಯದ ಕೆಲವು ಪ್ರದೇಶಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಯೆಲ್ಲೋ ಅಲರ್ಟ್ ಘೋಷಿಸಿ ಪ್ರಾದೇಶಿಕ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಚಂಬಾ, ಕಿನ್ನೌರ್, ಸಿರ್ಮೌರ್ ಮತ್ತು ಶಿಮ್ಲಾ ಜಿಲ್ಲೆಗಳಲ್ಲಿ ಹಠಾತ್ ಪ್ರವಾಹ ಸಂಭವಿಸುವ ಸಾಧ್ಯತೆಯ ಬಗ್ಗೆಯೂ ಎಚ್ಚರಿಕೆ ನೀಡಿದೆ.</p><p><strong>28 ಮೃತದೇಹ ಪತ್ತೆ</strong></p><p>ಕುಲ್ಲು, ಮಂಡಿ ಮತ್ತು ಶಿಮ್ಲಾ ಜಿಲ್ಲೆಗಳಲ್ಲಿ ಜುಲೈ 31ರಂದು ಸಂಭವಿಸಿದ ಹಠಾತ್ ಪ್ರವಾಹದಲ್ಲಿ ಸುಮಾರು 30 ಜನರು ನಾಪತ್ತೆಯಾಗಿದ್ದು, ಅವರ ಪತ್ತೆಗಾಗಿ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಇಲ್ಲಿಯವರೆಗೆ 28 ಜನರ ಮೃತದೇಹ ಪತ್ತೆಯಾಗಿವೆ ಎಂದು ಅಧಿಕಾರಿಗಳು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿಮ್ಲಾ(ಹಿಮಾಚಲ ಪ್ರದೇಶ):</strong> ಭಾನುವಾರ ಇಡೀ ದಿನ ಸುರಿದ ಭಾರಿ ಮಳೆಗೆ ಹಿಮಾಚಲ ಪ್ರದೇಶದಲ್ಲಿ ಹಠಾತ್ ಪ್ರವಾಹ ಉಂಟಾಗಿದ್ದು, ಅಲ್ಲಲ್ಲಿ ಭೂಕುಸಿತ ಸಂಭವಿಸಿದೆ. ಮಳೆಗೆ ನಾಲ್ಕು ಹೆದ್ದಾರಿಗಳು ಸೇರಿದಂತೆ 338 ರಸ್ತೆಗಳು ಜಲಾವೃತವಾಗಿ ಸಂಚಾರ ಸ್ಥಗಿತಗೊಂಡಿದೆ.</p><p>‘ಶಿಮ್ಲಾ ಜಿಲ್ಲೆಯಲ್ಲಿ 104 ರಸ್ತೆಗಳು, ಮಂಡಿಯಲ್ಲಿ 71, ಸಿರ್ಮೌರ್ 58, ಚಂಬಾದಲ್ಲಿ 55, ಕುಲ್ಲು ಜಿಲ್ಲೆಯಲ್ಲಿ 26, ಸೋಲಾನ್, ಲಾಹೌಲ್ ಮತ್ತು ಸ್ಪಿತಿಯಲ್ಲಿ ತಲಾ 7, ಕಿನ್ನೌರದಲ್ಲಿ 5, ಬಿಲಾಸ್ಪುರ್ನಲ್ಲಿ 1 ಹಾಗೂ ಕಾಂಗ್ರಾ ಜಿಲ್ಲೆಯ 4 ರಸ್ತೆಗಳಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದೆ’ ಎಂದು ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರ ತಿಳಿಸಿದೆ.</p><p>‘ಜೂನ್ 27ರಿಂದ ಆಗಸ್ಟ್ 9 ರವರೆಗೆ ಮಳೆ ಸಂಬಂಧಿತ ಅವಘಡಗಳಲ್ಲಿ ಸುಮಾರು 100 ಜನ ಮೃತಪಟ್ಟಿದ್ದು, ಅಂದಾಜು ₹842 ಕೋಟಿ ನಷ್ಟವಾಗಿದೆ’ ಎಂದು ಅಧಿಕಾರಿಗಳು ತಿಳಿಸಿದರು.</p><p>‘ನಿನ್ನೆ ಮಳೆಗೆ ಚಂಬಾ, ಮಂಡಿ, ಕಿನ್ನೌರ್, ಶಿಮ್ಲಾ, ಸಿರ್ಮೌರ್ ಮತ್ತು ಸೋಲನ್ ಜಿಲ್ಲೆಗಳಲ್ಲಿ ಭೂಕುಸಿತ ಮತ್ತು ಹಠಾತ್ ಪ್ರವಾಹ ವರದಿಯಾಗಿದೆ’ ಎಂದು ಅವರು ಹೇಳಿದರು.</p><p>ಶನಿವಾರದವರೆಗೆ ರಾಜ್ಯದ ಕೆಲವು ಪ್ರದೇಶಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಯೆಲ್ಲೋ ಅಲರ್ಟ್ ಘೋಷಿಸಿ ಪ್ರಾದೇಶಿಕ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಚಂಬಾ, ಕಿನ್ನೌರ್, ಸಿರ್ಮೌರ್ ಮತ್ತು ಶಿಮ್ಲಾ ಜಿಲ್ಲೆಗಳಲ್ಲಿ ಹಠಾತ್ ಪ್ರವಾಹ ಸಂಭವಿಸುವ ಸಾಧ್ಯತೆಯ ಬಗ್ಗೆಯೂ ಎಚ್ಚರಿಕೆ ನೀಡಿದೆ.</p><p><strong>28 ಮೃತದೇಹ ಪತ್ತೆ</strong></p><p>ಕುಲ್ಲು, ಮಂಡಿ ಮತ್ತು ಶಿಮ್ಲಾ ಜಿಲ್ಲೆಗಳಲ್ಲಿ ಜುಲೈ 31ರಂದು ಸಂಭವಿಸಿದ ಹಠಾತ್ ಪ್ರವಾಹದಲ್ಲಿ ಸುಮಾರು 30 ಜನರು ನಾಪತ್ತೆಯಾಗಿದ್ದು, ಅವರ ಪತ್ತೆಗಾಗಿ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಇಲ್ಲಿಯವರೆಗೆ 28 ಜನರ ಮೃತದೇಹ ಪತ್ತೆಯಾಗಿವೆ ಎಂದು ಅಧಿಕಾರಿಗಳು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>