<p><strong>ಶಿಮ್ಲಾ</strong>: ಹಿಮಾಚಲ ಪ್ರದೇಶದ ಮಂಡಿ ಜಿಲ್ಲೆಯಲ್ಲಿ ಭಾರಿ ಮಳೆಯಾಗಿದ್ದು, ದಿಢೀರ್ ಪ್ರವಾಹದಿಂದ ಒಬ್ಬರು ಮೃತಪಟ್ಟಿದರೆ, 12 ಮಂದಿ ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.</p><p>ಸೋಮವಾರ ಸಂಜೆಯಿಂದ ಮಂಡಿಯಲ್ಲಿ 21.68 ಸೆಂ.ಮೀ ಮಳೆಯಾಗಿದ್ದು, 12 ಜನರು ಕಾಣೆಯಾಗಿದ್ದಾರೆ ಎಂದು ಮಂಡಿ ಜಿಲ್ಲಾಧಿಕಾರಿ ಅಪೂರ್ವ್ ದೇವಗನ್ ಮಾಹಿತಿ ನೀಡಿದ್ದಾರೆ.</p><p>ಜಿಲ್ಲೆಯ ಸಯಾಂಜ್ನಲ್ಲಿ ಎರಡು ಕುಟುಂಬಗಳಿಗೆ ಸೇರಿದ ಸುಮಾರು ಏಳು ಜನರು ನಾಪತ್ತೆಯಾಗಿದ್ದಾರೆ. ದಿಢೀರ್ ಪ್ರವಾಹಗಳಿಂದ ಜನ ಜೀವನ ಅಸ್ತವ್ಯಸ್ತವಾಗಿದೆ. ರೈಲು ಸೇರಿದಂತೆ ಸಂಚಾರ ವ್ಯವಸ್ಥೆಯಲ್ಲೂ ಅನಾನುಕೂಲ ಉಂಟಾಗಿದೆ ಎಂದು ದೇವಗನ್ ಹೇಳಿದ್ದಾರೆ.</p>.Doctor's Day | ವೈದ್ಯರಿಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ, ಸಿಎಂ ಸಿದ್ದರಾಮಯ್ಯ.ತಮಿಳುನಾಡು ಲಾಕಪ್ ಡೆತ್ ಪ್ರಕರಣ: ನ್ಯಾಯಾಂಗ ತನಿಖೆಗೆ ಹೈಕೋರ್ಟ್ ಆದೇಶ. <p>ಪ್ರವಾಹ ಪೀಡಿತ ಪ್ರದೇಶಗಳಿಂದ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗುತ್ತಿದೆ. ಮನೆಗಳು ಮತ್ತು ಕೃಷಿ ಭೂಮಿಗೆ ಅಪಾರ ಹಾನಿಯಾಗಿರುವುದರ ಬಗ್ಗೆ ವರದಿಯಾಗಿದ್ದು, ಗ್ರಾಮಗಳಲ್ಲಿ ಸಂಪರ್ಕ ಸೇತುವೆ, ರಸ್ತೆಗಳು ಕೊಚ್ಚಿಹೋಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ಜಿಲ್ಲೆಯ ಎಲ್ಲಾ ನದಿಗಳು ಉಕ್ಕಿ ಹರಿಯುತ್ತಿದ್ದು, ಬಿಯಾಸ್ ನದಿಯ ಪಾಂಡೋಹ್ ಅಣೆಕಟ್ಟಿನಿಂದ 1.5 ಲಕ್ಷ ಕ್ಯೂಸೆಕ್ಗೂ ಹೆಚ್ಚು ನೀರನ್ನು ಹೊರಕ್ಕೆ ಬಿಡಲಾಗಿದೆ.</p><p>ಇಂದು ಮಂಡಿ ಮತ್ತು ಹಮೀರ್ಪುರ ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಮುಂದಿನ 24 ಗಂಟೆಗಳಲ್ಲಿ ಚಂಬಾ, ಹಮೀರ್ಪುರ, ಮಂಡಿ , ಶಿಮ್ಲಾ, ಸಿರ್ಮೌರ್ ಮತ್ತು ಸೋಲನ್ನ ಆರು ಜಿಲ್ಲೆಗಳ ಕೆಲವು ಭಾಗಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.</p>.ಉತ್ತರ ಪ್ರದೇಶ | BSF ಯೋಧನ ಪತ್ನಿ ಮೇಲೆ ಮೈದುನರಿಂದ ಅತ್ಯಾಚಾರ, ಹಲ್ಲೆ.ವಿದ್ಯುತ್ ಶಾರ್ಟ್ ಸರ್ಕಿಟ್: ಮನೆಯೊಳಗೆ ಬೆಂಕಿ, ನಿದ್ರೆಯಲ್ಲಿದ್ದ ತಾಯಿ-ಮಗ ಸಾವು.ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಬೆಂಕಿ ಅವಘಡ: ರೋಗಿಗಳು ಸ್ಥಳಾಂತರ.ಜುಲೈ 7ರಂದು ಟ್ರಂಪ್-ನೆತನ್ಯಾಹು ಭೇಟಿ: ಕದನ ವಿರಾಮದ ಬಗ್ಗೆ ಮಾತುಕತೆ ಸಾಧ್ಯತೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿಮ್ಲಾ</strong>: ಹಿಮಾಚಲ ಪ್ರದೇಶದ ಮಂಡಿ ಜಿಲ್ಲೆಯಲ್ಲಿ ಭಾರಿ ಮಳೆಯಾಗಿದ್ದು, ದಿಢೀರ್ ಪ್ರವಾಹದಿಂದ ಒಬ್ಬರು ಮೃತಪಟ್ಟಿದರೆ, 12 ಮಂದಿ ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.</p><p>ಸೋಮವಾರ ಸಂಜೆಯಿಂದ ಮಂಡಿಯಲ್ಲಿ 21.68 ಸೆಂ.ಮೀ ಮಳೆಯಾಗಿದ್ದು, 12 ಜನರು ಕಾಣೆಯಾಗಿದ್ದಾರೆ ಎಂದು ಮಂಡಿ ಜಿಲ್ಲಾಧಿಕಾರಿ ಅಪೂರ್ವ್ ದೇವಗನ್ ಮಾಹಿತಿ ನೀಡಿದ್ದಾರೆ.</p><p>ಜಿಲ್ಲೆಯ ಸಯಾಂಜ್ನಲ್ಲಿ ಎರಡು ಕುಟುಂಬಗಳಿಗೆ ಸೇರಿದ ಸುಮಾರು ಏಳು ಜನರು ನಾಪತ್ತೆಯಾಗಿದ್ದಾರೆ. ದಿಢೀರ್ ಪ್ರವಾಹಗಳಿಂದ ಜನ ಜೀವನ ಅಸ್ತವ್ಯಸ್ತವಾಗಿದೆ. ರೈಲು ಸೇರಿದಂತೆ ಸಂಚಾರ ವ್ಯವಸ್ಥೆಯಲ್ಲೂ ಅನಾನುಕೂಲ ಉಂಟಾಗಿದೆ ಎಂದು ದೇವಗನ್ ಹೇಳಿದ್ದಾರೆ.</p>.Doctor's Day | ವೈದ್ಯರಿಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ, ಸಿಎಂ ಸಿದ್ದರಾಮಯ್ಯ.ತಮಿಳುನಾಡು ಲಾಕಪ್ ಡೆತ್ ಪ್ರಕರಣ: ನ್ಯಾಯಾಂಗ ತನಿಖೆಗೆ ಹೈಕೋರ್ಟ್ ಆದೇಶ. <p>ಪ್ರವಾಹ ಪೀಡಿತ ಪ್ರದೇಶಗಳಿಂದ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗುತ್ತಿದೆ. ಮನೆಗಳು ಮತ್ತು ಕೃಷಿ ಭೂಮಿಗೆ ಅಪಾರ ಹಾನಿಯಾಗಿರುವುದರ ಬಗ್ಗೆ ವರದಿಯಾಗಿದ್ದು, ಗ್ರಾಮಗಳಲ್ಲಿ ಸಂಪರ್ಕ ಸೇತುವೆ, ರಸ್ತೆಗಳು ಕೊಚ್ಚಿಹೋಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ಜಿಲ್ಲೆಯ ಎಲ್ಲಾ ನದಿಗಳು ಉಕ್ಕಿ ಹರಿಯುತ್ತಿದ್ದು, ಬಿಯಾಸ್ ನದಿಯ ಪಾಂಡೋಹ್ ಅಣೆಕಟ್ಟಿನಿಂದ 1.5 ಲಕ್ಷ ಕ್ಯೂಸೆಕ್ಗೂ ಹೆಚ್ಚು ನೀರನ್ನು ಹೊರಕ್ಕೆ ಬಿಡಲಾಗಿದೆ.</p><p>ಇಂದು ಮಂಡಿ ಮತ್ತು ಹಮೀರ್ಪುರ ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಮುಂದಿನ 24 ಗಂಟೆಗಳಲ್ಲಿ ಚಂಬಾ, ಹಮೀರ್ಪುರ, ಮಂಡಿ , ಶಿಮ್ಲಾ, ಸಿರ್ಮೌರ್ ಮತ್ತು ಸೋಲನ್ನ ಆರು ಜಿಲ್ಲೆಗಳ ಕೆಲವು ಭಾಗಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.</p>.ಉತ್ತರ ಪ್ರದೇಶ | BSF ಯೋಧನ ಪತ್ನಿ ಮೇಲೆ ಮೈದುನರಿಂದ ಅತ್ಯಾಚಾರ, ಹಲ್ಲೆ.ವಿದ್ಯುತ್ ಶಾರ್ಟ್ ಸರ್ಕಿಟ್: ಮನೆಯೊಳಗೆ ಬೆಂಕಿ, ನಿದ್ರೆಯಲ್ಲಿದ್ದ ತಾಯಿ-ಮಗ ಸಾವು.ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಬೆಂಕಿ ಅವಘಡ: ರೋಗಿಗಳು ಸ್ಥಳಾಂತರ.ಜುಲೈ 7ರಂದು ಟ್ರಂಪ್-ನೆತನ್ಯಾಹು ಭೇಟಿ: ಕದನ ವಿರಾಮದ ಬಗ್ಗೆ ಮಾತುಕತೆ ಸಾಧ್ಯತೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>