<p><strong>ಮುಂಬೈ: </strong>ಮುಂಬೈ, ಮುಂಬೈ ಉಪನಗರ ಹಾಗೂ ಉತ್ತರ ಕೊಂಕಣ ಪ್ರದೇಶಗಳಲ್ಲಿ ಸೋಮವಾರ ರಾತ್ರಿ ಭಾರಿ ಮಳೆಯಾಗಿದೆ. ಹಲವೆಡೆ ನೆರೆ ಉಂಟಾಗಿದ್ದು ರಸ್ತೆ ಮತ್ತು ರೈಲು ಸಂಚಾರಕ್ಕೆ ಅಡಚಣೆಯಾಗಿದೆ.</p>.<p>ಮುಂಬೈಯ ಕಿಂಗ್ಸ್ ಸರ್ಕಲ್, ಹಿಂದ್ಮಾತಾ, ಪೋಸ್ಟಲ್ ಕಾಲೋನಿ, ಅಂಧೇರಿ ಸಬ್ವೇ ಪ್ರದೇಶಗಳು ಬಹುತೇಕ ಜಲಾವೃತಗೊಂಡಿವೆ. ಪರಿಹಾರ ಕಾರ್ಯಾಚರಣೆ ಪ್ರಗತಿಯಲ್ಲಿದೆ. ಈ ಮಧ್ಯೆ, ಮುಂಬೈ ನಗರದಲ್ಲಿ ಭಾರಿ ಮಳೆ ಮುಂದುವರಿಯಲಿದೆ ಎಂದು ಹವಾಮಾನ ವರದಿ ತಿಳಿಸಿದೆ.</p>.<p>'ನಗರದಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ರೆಡ್ ಅಲರ್ಟ್ ಘೋಷಿಸಲಾಗಿದೆ' ಎಂದು ಹವಾಮಾನ ಇಲಾಖೆಯ ಉಪಪ್ರಧಾನ ನಿರ್ದೇಶಕ ಕೆ.ಎಸ್.ಹೊಸಾಲಿಕರ್ ತಿಳಿಸಿದ್ದಾರೆ.</p>.<p>ಥಾಣೆ, ಪಾಲ್ಘರ್, ರಾಯಗಡ ಜಿಲ್ಲೆಗಳಲ್ಲಿಯೂ ಭಾರಿ ಮಳೆಯಾಗಿದೆ. ಜನರು ಮನೆಯಲ್ಲಿಯೇ ಇರುವಂತೆ ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಸೂಚಿಸಿದೆ.</p>.<p>'ಹವಾಮಾನ ಇಲಾಖೆ ವರದಿ ಪ್ರಕಾರ, ಮುಂಬೈ ಮತ್ತು ಉಪನಗರಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ತೀರಾ ಅನಿವಾರ್ಯವಲ್ಲದ ಹೊರತು ನಗರವಾಸಿಗಳು ಮನೆಯಿಂದ ಹೊರಬರಬಾರದೆಂದು ಮನವಿ. ಜಲಾವೃತ ಪ್ರದೇಶಗಳಿಂದ ದೂರವಿರಿ' ಎಂದು ಬಿಎಂಸಿ ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ: </strong>ಮುಂಬೈ, ಮುಂಬೈ ಉಪನಗರ ಹಾಗೂ ಉತ್ತರ ಕೊಂಕಣ ಪ್ರದೇಶಗಳಲ್ಲಿ ಸೋಮವಾರ ರಾತ್ರಿ ಭಾರಿ ಮಳೆಯಾಗಿದೆ. ಹಲವೆಡೆ ನೆರೆ ಉಂಟಾಗಿದ್ದು ರಸ್ತೆ ಮತ್ತು ರೈಲು ಸಂಚಾರಕ್ಕೆ ಅಡಚಣೆಯಾಗಿದೆ.</p>.<p>ಮುಂಬೈಯ ಕಿಂಗ್ಸ್ ಸರ್ಕಲ್, ಹಿಂದ್ಮಾತಾ, ಪೋಸ್ಟಲ್ ಕಾಲೋನಿ, ಅಂಧೇರಿ ಸಬ್ವೇ ಪ್ರದೇಶಗಳು ಬಹುತೇಕ ಜಲಾವೃತಗೊಂಡಿವೆ. ಪರಿಹಾರ ಕಾರ್ಯಾಚರಣೆ ಪ್ರಗತಿಯಲ್ಲಿದೆ. ಈ ಮಧ್ಯೆ, ಮುಂಬೈ ನಗರದಲ್ಲಿ ಭಾರಿ ಮಳೆ ಮುಂದುವರಿಯಲಿದೆ ಎಂದು ಹವಾಮಾನ ವರದಿ ತಿಳಿಸಿದೆ.</p>.<p>'ನಗರದಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ರೆಡ್ ಅಲರ್ಟ್ ಘೋಷಿಸಲಾಗಿದೆ' ಎಂದು ಹವಾಮಾನ ಇಲಾಖೆಯ ಉಪಪ್ರಧಾನ ನಿರ್ದೇಶಕ ಕೆ.ಎಸ್.ಹೊಸಾಲಿಕರ್ ತಿಳಿಸಿದ್ದಾರೆ.</p>.<p>ಥಾಣೆ, ಪಾಲ್ಘರ್, ರಾಯಗಡ ಜಿಲ್ಲೆಗಳಲ್ಲಿಯೂ ಭಾರಿ ಮಳೆಯಾಗಿದೆ. ಜನರು ಮನೆಯಲ್ಲಿಯೇ ಇರುವಂತೆ ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಸೂಚಿಸಿದೆ.</p>.<p>'ಹವಾಮಾನ ಇಲಾಖೆ ವರದಿ ಪ್ರಕಾರ, ಮುಂಬೈ ಮತ್ತು ಉಪನಗರಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ತೀರಾ ಅನಿವಾರ್ಯವಲ್ಲದ ಹೊರತು ನಗರವಾಸಿಗಳು ಮನೆಯಿಂದ ಹೊರಬರಬಾರದೆಂದು ಮನವಿ. ಜಲಾವೃತ ಪ್ರದೇಶಗಳಿಂದ ದೂರವಿರಿ' ಎಂದು ಬಿಎಂಸಿ ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>