<p><strong>ನವದೆಹಲಿ: </strong>ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಶನಿವಾರ ಬೆಳಿಗ್ಗೆ ಭಾರಿ ಮಳೆಯಾಗಿದ್ದು, ನಗರದ ಮಿಂಟೋ ಸೇತುವೆ, ಮೂಲ್ಚಂದ್ ಅಂಡರ್ಪಾಸ್ ಮತ್ತು ಐಟಿಒ ಸೇರಿದಂತೆ ನಗರದ ಹಲವು ಭಾಗಗಳಲ್ಲಿ ನೀರು ನಿಂತಿದೆ.</p>.<p>ಹವಾಮಾನ ಇಲಾಖೆಯುದೆಹಲಿಗೆ ‘ಯಲ್ಲೋ ಅಲರ್ಟ್’ ಕೊಟ್ಟಿದ್ದು,ಮುಂದಿನ ಕೆಲ ದಿನಗಳ ವರೆಗೆ ಮಳೆ ಮುಂದುವರಿಯುವ ಸಾಧ್ಯತೆಗಳಿವೆ ಎಂದು ಮುನ್ನೆಚ್ಚರಿಕೆನೀಡಿದೆ.</p>.<p>ದೆಹಲಿಯ ಹಲವು ಭಾಗ ಜಲಾವೃತವಾಗಿರುವ ಹಿನ್ನೆಲೆಯಲ್ಲಿ ಸಂಚಾರ ಪೊಲೀಸರು ನಿರ್ಣಾಯಕ ಅಂಡರ್ಪಾಸ್ಗಳಲ್ಲಿ ಸಂಚಾರ ನಿರ್ಬಂಧಿಸಿದ್ದಾರೆ. ಸಾಮಾಜಿಕ ಮಾಧ್ಯಮಗಳ ಮೂಲಕ ನಾಗರಿಕರಿಗೆ ಮಾಹಿತಿ ನೀಡಿದ್ದಾರೆ.</p>.<p>ಜಲಾವೃತವಾಗಿರುವ ಪ್ರದೇಶಗಳ ಸಮಸ್ಯೆ, ದೂರುಗಳನ್ನು ಆದ್ಯತೆಯ ಮೇಲೆ ಪರಿಹರಿಸಲು ಅಧಿಕಾರಿಗಳನ್ನು ಸ್ಥಳಕ್ಕೆ ರವಾನಿಸಲಾಗಿದೆ ಎಂದು ಲೋಕೋಪಯೋಗಿ ಇಲಾಖೆ ತಿಳಿಸಿದೆ.</p>.<p>ಭಾರಿ ಮಳೆಯಿಂದಾಗಿ ಪುಲ್ ಪ್ರಹ್ಲಾದಪುರ ಅಂಡರ್ಪಾಸ್, ಲಜಪತ್ ನಗರ, ಜಂಗಪುರ, ಐಟಿಒ, ಪ್ರಗತಿ ಮೈದಾನದ ಸುತ್ತಲಿನ ರಸ್ತೆಗಳು, ಸಂಗಮ್ ವಿಹಾರ್, ರೋಹ್ಟಕ್ ರಸ್ತೆ, ಮಂಗೋಲ್ಪುರಿ, ಕಿರರಿ ಮತ್ತು ಮಾಳವೀಯ ನಗರಗಳಲ್ಲಿ ನೀರು ನಿಂತಿದೆ.</p>.<p>ದಕ್ಷಿಣ ದೆಹಲಿಯ ಮೆಹ್ರೌಲಿ-ಬದರಪುರ ರಸ್ತೆಯಲ್ಲಿ ನೀರು ನಿಂತಿರುವುದರಿಂದ ಸಂಚಾರವನ್ನು ನಿರ್ಬಂಧಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಶನಿವಾರ ಬೆಳಿಗ್ಗೆ ಭಾರಿ ಮಳೆಯಾಗಿದ್ದು, ನಗರದ ಮಿಂಟೋ ಸೇತುವೆ, ಮೂಲ್ಚಂದ್ ಅಂಡರ್ಪಾಸ್ ಮತ್ತು ಐಟಿಒ ಸೇರಿದಂತೆ ನಗರದ ಹಲವು ಭಾಗಗಳಲ್ಲಿ ನೀರು ನಿಂತಿದೆ.</p>.<p>ಹವಾಮಾನ ಇಲಾಖೆಯುದೆಹಲಿಗೆ ‘ಯಲ್ಲೋ ಅಲರ್ಟ್’ ಕೊಟ್ಟಿದ್ದು,ಮುಂದಿನ ಕೆಲ ದಿನಗಳ ವರೆಗೆ ಮಳೆ ಮುಂದುವರಿಯುವ ಸಾಧ್ಯತೆಗಳಿವೆ ಎಂದು ಮುನ್ನೆಚ್ಚರಿಕೆನೀಡಿದೆ.</p>.<p>ದೆಹಲಿಯ ಹಲವು ಭಾಗ ಜಲಾವೃತವಾಗಿರುವ ಹಿನ್ನೆಲೆಯಲ್ಲಿ ಸಂಚಾರ ಪೊಲೀಸರು ನಿರ್ಣಾಯಕ ಅಂಡರ್ಪಾಸ್ಗಳಲ್ಲಿ ಸಂಚಾರ ನಿರ್ಬಂಧಿಸಿದ್ದಾರೆ. ಸಾಮಾಜಿಕ ಮಾಧ್ಯಮಗಳ ಮೂಲಕ ನಾಗರಿಕರಿಗೆ ಮಾಹಿತಿ ನೀಡಿದ್ದಾರೆ.</p>.<p>ಜಲಾವೃತವಾಗಿರುವ ಪ್ರದೇಶಗಳ ಸಮಸ್ಯೆ, ದೂರುಗಳನ್ನು ಆದ್ಯತೆಯ ಮೇಲೆ ಪರಿಹರಿಸಲು ಅಧಿಕಾರಿಗಳನ್ನು ಸ್ಥಳಕ್ಕೆ ರವಾನಿಸಲಾಗಿದೆ ಎಂದು ಲೋಕೋಪಯೋಗಿ ಇಲಾಖೆ ತಿಳಿಸಿದೆ.</p>.<p>ಭಾರಿ ಮಳೆಯಿಂದಾಗಿ ಪುಲ್ ಪ್ರಹ್ಲಾದಪುರ ಅಂಡರ್ಪಾಸ್, ಲಜಪತ್ ನಗರ, ಜಂಗಪುರ, ಐಟಿಒ, ಪ್ರಗತಿ ಮೈದಾನದ ಸುತ್ತಲಿನ ರಸ್ತೆಗಳು, ಸಂಗಮ್ ವಿಹಾರ್, ರೋಹ್ಟಕ್ ರಸ್ತೆ, ಮಂಗೋಲ್ಪುರಿ, ಕಿರರಿ ಮತ್ತು ಮಾಳವೀಯ ನಗರಗಳಲ್ಲಿ ನೀರು ನಿಂತಿದೆ.</p>.<p>ದಕ್ಷಿಣ ದೆಹಲಿಯ ಮೆಹ್ರೌಲಿ-ಬದರಪುರ ರಸ್ತೆಯಲ್ಲಿ ನೀರು ನಿಂತಿರುವುದರಿಂದ ಸಂಚಾರವನ್ನು ನಿರ್ಬಂಧಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>