<p><strong>ಅಹಮದಾಬಾದ್:</strong> ಗುಜರಾತ್ನ ವಿವಿಧೆಡೆ ಬುಧವಾರ ಧಾರಾಕಾರ ಮಳೆಯಾಗಿದ್ದು, ದೇವಭೂಮಿ ದ್ವಾರಕಾ, ಬನಸ್ಕಾಂತ, ಕಚ್ ಮತ್ತು ರಾಜ್ಕೋಟ್ ಜಿಲ್ಲೆಗಳಲ್ಲಿ ಮಳೆಯಿಂದ ಸಂಭವಿಸಿದ ಅವಘಡಗಳಿಂದ ಎಂಟು ಜನ ಮೃತಪಟ್ಟಿದ್ದಾರೆ.</p>.<p>ರಾಜ್ಯದ ಹಲವು ನದಿಗಳ ಹರಿವು ಮತ್ತು ಜಲಾಶಯಗಳಲ್ಲಿ ನೀರಿನ ಮಟ್ಟ ಭಾರಿ ಪ್ರಮಾಣದಲ್ಲಿ ಏರಿದೆ.<br>ಇದರಿಂದಹಲವು ಗ್ರಾಮಗಳಿಗೆ ಸಂಪರ್ಕ ಕಡಿತಗೊಂಡಿದೆ. ನೂರಾರು ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರ ಮಾಡಲಾಗಿದೆ.</p>.<p>ಗುಜರಾತ್ನ ಸೂರತ್, ಭರೂಚ್ ಮತ್ತು ಆನಂದ್ ಜಿಲ್ಲೆಗಳಲ್ಲಿ ಬುಧವಾರ ಬೆಳಿಗ್ಗೆಯಿಂದಲೇ ಭಾರಿ ಮಳೆಯಾಗಿದೆ. ಹೀಗಾಗಿ, ಕೆಲವೆಡೆ ಶಾಲಾ ಮತ್ತು ಕಾಲೇಜುಗಳಿಗೆ ಬುಧವಾರ ರಜೆ ಘೋಷಿಸಲಾಗಿತ್ತು.</p> <p>ಕೆಲವು ಕಡೆಗಳಲ್ಲಿ ರೈಲು ಸೇವೆಗಳಲ್ಲೂ ವ್ಯತ್ಯಯವಾಗಿದೆ. </p><p>ಈ ಬಾರಿಯ ಮಳೆಗಾಲದಲ್ಲಿ ರಾಜ್ಯದಲ್ಲಿ ಇಲ್ಲಿಯವರೆಗೆ ಮೃತಪಟ್ಟವರ ಸಂಖ್ಯೆ 61ಕ್ಕೆ ಏರಿಕೆಯಾಗಿದೆ. ಈ ಮುಂಗಾರು ಹಂಗಾಮಿನಲ್ಲಿ ಬುಧವಾರದ ವೇಳೆಗೆ ರಾಜ್ಯ ಶೇ 51ರಷ್ಟು ಮಳೆಯನ್ನು ಪಡೆದಿದೆ. ಕಚ್ ಜಿಲ್ಲೆ, ಸೌರಾಷ್ಟ್ರ ವಲಯದಲ್ಲಿ ಕ್ರಮವಾಗಿ ಶೇ 75 ಮತ್ತು ಶೇ 73ರಷ್ಟು ಮಳೆ ಸುರಿದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.</p><p>ಆನಂದ್ ಜಿಲ್ಲೆಯ ಬೊರ್ಸಾದ್ ತಾಲ್ಲೂಕಿನಲ್ಲಿ ಬೆಳಿಗ್ಗೆ 8 ಗಂಟೆಯಿಂದ ನಾಲ್ಕು ಗಂಟೆಗಳಲ್ಲಿ 314 ಮಿಲಿ ಮೀಟರ್ನಷ್ಟು ಮಳೆ ದಾಖಲಾಗಿದೆ. </p><h2><br>ಕೊಲ್ಹಾಪುರದಲ್ಲಿ 81 ಬ್ಯಾರೇಜ್ಗಳು ಮುಳುಗಡೆ</h2><p>ಕೊಲ್ಹಾಪುರದಲ್ಲಿ ಭಾರಿ ಮಳೆಯ ಕಾರಣ, ಪಂಚಗಂಗಾ ನದಿ ಅಪಾಯದ ಮಟ್ಟ ಮೀರಲು ಕೆಲವು ಇಂಚುಗಳು ಮಾತ್ರ ಬಾಕಿ ಇದೆ.</p><p>ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿರುವ ಕಾರಣ 81 ಬ್ಯಾರೇಜ್ಗಳು ಮುಳುಗಡೆಯಾಗಿವೆ. ಕೃಷ್ಣ ನದಿ ತೀರದ ಪ್ರದೇಶಗಳಲ್ಲಿ ಅಗತ್ಯವಿರುವಷ್ಟು ಮಳೆಯಾಗಿದ್ದು, ಕರ್ನಾಟಕದ ಆಲಮಟ್ಟಿ ಜಲಾಶಯಕ್ಕೆ ನೀರಿನ ಹರಿಯುವಿಕೆ ಹೆಚ್ಚಳವಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಹಮದಾಬಾದ್:</strong> ಗುಜರಾತ್ನ ವಿವಿಧೆಡೆ ಬುಧವಾರ ಧಾರಾಕಾರ ಮಳೆಯಾಗಿದ್ದು, ದೇವಭೂಮಿ ದ್ವಾರಕಾ, ಬನಸ್ಕಾಂತ, ಕಚ್ ಮತ್ತು ರಾಜ್ಕೋಟ್ ಜಿಲ್ಲೆಗಳಲ್ಲಿ ಮಳೆಯಿಂದ ಸಂಭವಿಸಿದ ಅವಘಡಗಳಿಂದ ಎಂಟು ಜನ ಮೃತಪಟ್ಟಿದ್ದಾರೆ.</p>.<p>ರಾಜ್ಯದ ಹಲವು ನದಿಗಳ ಹರಿವು ಮತ್ತು ಜಲಾಶಯಗಳಲ್ಲಿ ನೀರಿನ ಮಟ್ಟ ಭಾರಿ ಪ್ರಮಾಣದಲ್ಲಿ ಏರಿದೆ.<br>ಇದರಿಂದಹಲವು ಗ್ರಾಮಗಳಿಗೆ ಸಂಪರ್ಕ ಕಡಿತಗೊಂಡಿದೆ. ನೂರಾರು ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರ ಮಾಡಲಾಗಿದೆ.</p>.<p>ಗುಜರಾತ್ನ ಸೂರತ್, ಭರೂಚ್ ಮತ್ತು ಆನಂದ್ ಜಿಲ್ಲೆಗಳಲ್ಲಿ ಬುಧವಾರ ಬೆಳಿಗ್ಗೆಯಿಂದಲೇ ಭಾರಿ ಮಳೆಯಾಗಿದೆ. ಹೀಗಾಗಿ, ಕೆಲವೆಡೆ ಶಾಲಾ ಮತ್ತು ಕಾಲೇಜುಗಳಿಗೆ ಬುಧವಾರ ರಜೆ ಘೋಷಿಸಲಾಗಿತ್ತು.</p> <p>ಕೆಲವು ಕಡೆಗಳಲ್ಲಿ ರೈಲು ಸೇವೆಗಳಲ್ಲೂ ವ್ಯತ್ಯಯವಾಗಿದೆ. </p><p>ಈ ಬಾರಿಯ ಮಳೆಗಾಲದಲ್ಲಿ ರಾಜ್ಯದಲ್ಲಿ ಇಲ್ಲಿಯವರೆಗೆ ಮೃತಪಟ್ಟವರ ಸಂಖ್ಯೆ 61ಕ್ಕೆ ಏರಿಕೆಯಾಗಿದೆ. ಈ ಮುಂಗಾರು ಹಂಗಾಮಿನಲ್ಲಿ ಬುಧವಾರದ ವೇಳೆಗೆ ರಾಜ್ಯ ಶೇ 51ರಷ್ಟು ಮಳೆಯನ್ನು ಪಡೆದಿದೆ. ಕಚ್ ಜಿಲ್ಲೆ, ಸೌರಾಷ್ಟ್ರ ವಲಯದಲ್ಲಿ ಕ್ರಮವಾಗಿ ಶೇ 75 ಮತ್ತು ಶೇ 73ರಷ್ಟು ಮಳೆ ಸುರಿದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.</p><p>ಆನಂದ್ ಜಿಲ್ಲೆಯ ಬೊರ್ಸಾದ್ ತಾಲ್ಲೂಕಿನಲ್ಲಿ ಬೆಳಿಗ್ಗೆ 8 ಗಂಟೆಯಿಂದ ನಾಲ್ಕು ಗಂಟೆಗಳಲ್ಲಿ 314 ಮಿಲಿ ಮೀಟರ್ನಷ್ಟು ಮಳೆ ದಾಖಲಾಗಿದೆ. </p><h2><br>ಕೊಲ್ಹಾಪುರದಲ್ಲಿ 81 ಬ್ಯಾರೇಜ್ಗಳು ಮುಳುಗಡೆ</h2><p>ಕೊಲ್ಹಾಪುರದಲ್ಲಿ ಭಾರಿ ಮಳೆಯ ಕಾರಣ, ಪಂಚಗಂಗಾ ನದಿ ಅಪಾಯದ ಮಟ್ಟ ಮೀರಲು ಕೆಲವು ಇಂಚುಗಳು ಮಾತ್ರ ಬಾಕಿ ಇದೆ.</p><p>ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿರುವ ಕಾರಣ 81 ಬ್ಯಾರೇಜ್ಗಳು ಮುಳುಗಡೆಯಾಗಿವೆ. ಕೃಷ್ಣ ನದಿ ತೀರದ ಪ್ರದೇಶಗಳಲ್ಲಿ ಅಗತ್ಯವಿರುವಷ್ಟು ಮಳೆಯಾಗಿದ್ದು, ಕರ್ನಾಟಕದ ಆಲಮಟ್ಟಿ ಜಲಾಶಯಕ್ಕೆ ನೀರಿನ ಹರಿಯುವಿಕೆ ಹೆಚ್ಚಳವಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>