<p><strong>ತಿರುವನಂತಪುರ:</strong> ಕೇರಳದ ಹಲವು ಭಾಗಗಳಲ್ಲಿ ಭಾರಿ ಮಳೆ ಸುರಿದಿದ್ದು, ರಾಜ್ಯದ 5 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಶನಿವಾರ ‘ಆರೆಂಜ್ ಅಲರ್ಟ್’ ಘೋಷಿಸಿತ್ತು. </p>.<p>ಹಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಹಲವು ನದಿಗಳ ನೀರಿನ ಮಟ್ಟ ಏರಿಕೆಯಾಗಿದ್ದು, ತಗ್ಗು ಪ್ರದೇಶಗಳು ಜಲಾವೃತವಾಗಿವೆ. ನೂರಾರು ಜನರನ್ನು ಸ್ಥಳಾಂತರಿಸಲಾಗಿದೆ.</p>.<p>ಈಗಾಗಲೇ ವಯನಾಡ್ ಜಿಲ್ಲೆಯ ಬಾಣಸುರ ಸಾಗರ್ ಮತ್ತು ಪಟ್ಟಣಂತಿಟ್ಟ ಜಿಲ್ಲೆಯ ಮುಯಿಯಾರ್ ಅಣೆಕಟ್ಟಿನ ಗೇಟಗಳನ್ನು ತೆರೆಯಲಾಗಿದೆ. ಮಲಂಪುಳ ಸೇರಿದಂತೆ ಇನ್ನೂ ಹಲವಾರು ಅಣೆಕಟ್ಟುಗಳನ್ನು ಶನಿವಾರ ತೆರೆಯಲಾಗಿದೆ.</p>.<p>ನೀರಿನ ಮಟ್ಟ 136 ಅಡಿಗ ಏರಿಕೆಯಾದರೆ ಮುಲ್ಲಪೆರಿಯರ್ ಅಣೆಕಟ್ಟಿನಿಂದ ನೀರನ್ನು ಹೊರಬಿಡುವುದಾಗಿ ತಮಿಳುನಾಡಿನ ಅಧಿಕಾರಿಗಳು ಸೂಚಿಸಿರುವುದರಿಂದ ಕೇರಳದ ತಗ್ಗುಪ್ರದೇಶಗಳಲ್ಲಿನ 883 ಕುಟುಂಬಗಳ 3,220 ಜನರ ಸ್ಥಳಾಂತರಕ್ಕೆ ಸಿದ್ಧತೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ:</strong> ಕೇರಳದ ಹಲವು ಭಾಗಗಳಲ್ಲಿ ಭಾರಿ ಮಳೆ ಸುರಿದಿದ್ದು, ರಾಜ್ಯದ 5 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಶನಿವಾರ ‘ಆರೆಂಜ್ ಅಲರ್ಟ್’ ಘೋಷಿಸಿತ್ತು. </p>.<p>ಹಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಹಲವು ನದಿಗಳ ನೀರಿನ ಮಟ್ಟ ಏರಿಕೆಯಾಗಿದ್ದು, ತಗ್ಗು ಪ್ರದೇಶಗಳು ಜಲಾವೃತವಾಗಿವೆ. ನೂರಾರು ಜನರನ್ನು ಸ್ಥಳಾಂತರಿಸಲಾಗಿದೆ.</p>.<p>ಈಗಾಗಲೇ ವಯನಾಡ್ ಜಿಲ್ಲೆಯ ಬಾಣಸುರ ಸಾಗರ್ ಮತ್ತು ಪಟ್ಟಣಂತಿಟ್ಟ ಜಿಲ್ಲೆಯ ಮುಯಿಯಾರ್ ಅಣೆಕಟ್ಟಿನ ಗೇಟಗಳನ್ನು ತೆರೆಯಲಾಗಿದೆ. ಮಲಂಪುಳ ಸೇರಿದಂತೆ ಇನ್ನೂ ಹಲವಾರು ಅಣೆಕಟ್ಟುಗಳನ್ನು ಶನಿವಾರ ತೆರೆಯಲಾಗಿದೆ.</p>.<p>ನೀರಿನ ಮಟ್ಟ 136 ಅಡಿಗ ಏರಿಕೆಯಾದರೆ ಮುಲ್ಲಪೆರಿಯರ್ ಅಣೆಕಟ್ಟಿನಿಂದ ನೀರನ್ನು ಹೊರಬಿಡುವುದಾಗಿ ತಮಿಳುನಾಡಿನ ಅಧಿಕಾರಿಗಳು ಸೂಚಿಸಿರುವುದರಿಂದ ಕೇರಳದ ತಗ್ಗುಪ್ರದೇಶಗಳಲ್ಲಿನ 883 ಕುಟುಂಬಗಳ 3,220 ಜನರ ಸ್ಥಳಾಂತರಕ್ಕೆ ಸಿದ್ಧತೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>