<p><strong>ಮಹಾರಾಷ್ಟ್ರ</strong>: ಮುಂಬೈ ನಗರದಲ್ಲಿ ಈ ಋತುವಿನ ಮೊದಲ ಮಳೆಯಾಗುತ್ತಿದ್ದಂತೆ, ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂದೆ ಅವರು ಪ್ರವಾಹವನ್ನು ತಡೆಗಟ್ಟಲು ನಗರದ ಮಿಲನ್ ಸುರಂಗ ಮಾರ್ಗದಲ್ಲಿ ಸ್ಥಾಪಿಸಲಾದ ಭೂಗತ ನೀರಿನ ಟ್ಯಾಂಕ್ನ ಕಾರ್ಯನಿರ್ವಹಣೆಯನ್ನು ಭಾನುವಾರ ಪರಿಶೀಲಿಸಿದರು.</p>.<p>ಮಿಲನ್ ಸುರಂಗಮಾರ್ಗ, ಹಿಂದ್ಮಾತಾ ಮತ್ತು ಮುಂಬೈನ ಇತರ ಕೆಲವು ಸ್ಥಳಗಳು ಪ್ರತಿ ವರ್ಷ ಮಳೆಯ ಸಮಯದಲ್ಲಿ ನೀರಿನಿಂದ ತುಂಬಿಕೊಳ್ಳುತ್ತವೆ. ಈ ಪ್ರದೇಶಗಳಲ್ಲಿ ಪ್ರವಾಹವನ್ನು ತಡೆಗಟ್ಟಲು ಬೃಹನ್ ಮುಂಬೈ ಮಹಾನಗರ ಪಾಲಿಕೆ (ಬಿಎಂಸಿ) ಭೂಗತ ನೀರಿನ ಟ್ಯಾಂಕ್ಗಳನ್ನು ನಿರ್ಮಿಸಿದೆ.</p><p>ಕಳೆದ 24 ಗಂಟೆಗಳಲ್ಲಿ ಮುಂಬೈ ಮತ್ತು ಅದರ ಉಪನಗರಗಳಲ್ಲಿ ಭಾರಿ ಮಳೆಯಾಗಿದೆ. ಇದರಿಂದಾಗಿ ವಿವಿಧ ಸ್ಥಳಗಳಲ್ಲಿ ನೀರು ನಿಂತಿದೆ ಮತ್ತು ಕೆಲವು ರಸ್ತೆಗಳಲ್ಲಿ ವಾಹನಗಳ ಸಂಚಾರಕ್ಕೆ ತೊಡಕಾಗಿದೆ.</p><p>‘ಮಿಲನ್ ಸುರಂಗಮಾರ್ಗದ ಪರಿಸ್ಥಿತಿಯನ್ನು ಪರಿಶೀಲಿಸಲು ನಾನು ಖುದ್ದಾಗಿ ಬಂದಿದ್ದೇನೆ. ಒಂದು ಗಂಟೆಯಲ್ಲಿ 70 ಮಿ.ಮೀ ಗಿಂತ ಹೆಚ್ಚು ಮಳೆಯಾಗಿದೆ ಎಂದು ವರದಿಯಾಗಿದೆ, ನಾವು ಅಭಿವೃದ್ಧಿ ಪಡಿಸಿರುವ ವ್ಯವಸ್ಥೆಯು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಸಾಬೀತಾಗಿದೆ ಎಂದು ಶಿಂದೆ ಸುದ್ದಿಗಾರರಿಗೆ ತಿಳಿಸಿದರು.</p><p>‘ಅಂತಹ ವಿಪರೀತ ಮಳೆಯ ಹೊರತಾಗಿಯೂ, ಮಿಲನ್ ಸುರಂಗಮಾರ್ಗವು ವಾಹನ ಸಂಚಾರಕ್ಕೆ ಮುಕ್ತವಾಗಿತ್ತು. ಇದೇ ರೀತಿಯ ವ್ಯವಸ್ಥೆಗಳು ಮುಂಬೈನ ಇತರ ಪ್ರದೇಶಗಳಲ್ಲಿಯೂ ಕಾರ್ಯನಿರ್ವಹಿಸುತ್ತವೆ’ ಎಂದು ಶಿಂದೆ ಹೇಳಿದರು.</p><p>ಮಳೆಯಿಂದಾಗಿ ರಸ್ತೆಗಳಲ್ಲಿ ನೀರು ನಿಂತು ವಾಹನ ಸಂಚಾರಕ್ಕೆ ಅಡ್ಡಿಯಾಗದಂತೆ ಕ್ರಮ ಕೈಗೊಳ್ಳಲು ಬಿಎಂಸಿ ಅಧಿಕಾರಿಗಳಿಗೆ ಸಿಎಂ ಆದೇಶಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಹಾರಾಷ್ಟ್ರ</strong>: ಮುಂಬೈ ನಗರದಲ್ಲಿ ಈ ಋತುವಿನ ಮೊದಲ ಮಳೆಯಾಗುತ್ತಿದ್ದಂತೆ, ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂದೆ ಅವರು ಪ್ರವಾಹವನ್ನು ತಡೆಗಟ್ಟಲು ನಗರದ ಮಿಲನ್ ಸುರಂಗ ಮಾರ್ಗದಲ್ಲಿ ಸ್ಥಾಪಿಸಲಾದ ಭೂಗತ ನೀರಿನ ಟ್ಯಾಂಕ್ನ ಕಾರ್ಯನಿರ್ವಹಣೆಯನ್ನು ಭಾನುವಾರ ಪರಿಶೀಲಿಸಿದರು.</p>.<p>ಮಿಲನ್ ಸುರಂಗಮಾರ್ಗ, ಹಿಂದ್ಮಾತಾ ಮತ್ತು ಮುಂಬೈನ ಇತರ ಕೆಲವು ಸ್ಥಳಗಳು ಪ್ರತಿ ವರ್ಷ ಮಳೆಯ ಸಮಯದಲ್ಲಿ ನೀರಿನಿಂದ ತುಂಬಿಕೊಳ್ಳುತ್ತವೆ. ಈ ಪ್ರದೇಶಗಳಲ್ಲಿ ಪ್ರವಾಹವನ್ನು ತಡೆಗಟ್ಟಲು ಬೃಹನ್ ಮುಂಬೈ ಮಹಾನಗರ ಪಾಲಿಕೆ (ಬಿಎಂಸಿ) ಭೂಗತ ನೀರಿನ ಟ್ಯಾಂಕ್ಗಳನ್ನು ನಿರ್ಮಿಸಿದೆ.</p><p>ಕಳೆದ 24 ಗಂಟೆಗಳಲ್ಲಿ ಮುಂಬೈ ಮತ್ತು ಅದರ ಉಪನಗರಗಳಲ್ಲಿ ಭಾರಿ ಮಳೆಯಾಗಿದೆ. ಇದರಿಂದಾಗಿ ವಿವಿಧ ಸ್ಥಳಗಳಲ್ಲಿ ನೀರು ನಿಂತಿದೆ ಮತ್ತು ಕೆಲವು ರಸ್ತೆಗಳಲ್ಲಿ ವಾಹನಗಳ ಸಂಚಾರಕ್ಕೆ ತೊಡಕಾಗಿದೆ.</p><p>‘ಮಿಲನ್ ಸುರಂಗಮಾರ್ಗದ ಪರಿಸ್ಥಿತಿಯನ್ನು ಪರಿಶೀಲಿಸಲು ನಾನು ಖುದ್ದಾಗಿ ಬಂದಿದ್ದೇನೆ. ಒಂದು ಗಂಟೆಯಲ್ಲಿ 70 ಮಿ.ಮೀ ಗಿಂತ ಹೆಚ್ಚು ಮಳೆಯಾಗಿದೆ ಎಂದು ವರದಿಯಾಗಿದೆ, ನಾವು ಅಭಿವೃದ್ಧಿ ಪಡಿಸಿರುವ ವ್ಯವಸ್ಥೆಯು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಸಾಬೀತಾಗಿದೆ ಎಂದು ಶಿಂದೆ ಸುದ್ದಿಗಾರರಿಗೆ ತಿಳಿಸಿದರು.</p><p>‘ಅಂತಹ ವಿಪರೀತ ಮಳೆಯ ಹೊರತಾಗಿಯೂ, ಮಿಲನ್ ಸುರಂಗಮಾರ್ಗವು ವಾಹನ ಸಂಚಾರಕ್ಕೆ ಮುಕ್ತವಾಗಿತ್ತು. ಇದೇ ರೀತಿಯ ವ್ಯವಸ್ಥೆಗಳು ಮುಂಬೈನ ಇತರ ಪ್ರದೇಶಗಳಲ್ಲಿಯೂ ಕಾರ್ಯನಿರ್ವಹಿಸುತ್ತವೆ’ ಎಂದು ಶಿಂದೆ ಹೇಳಿದರು.</p><p>ಮಳೆಯಿಂದಾಗಿ ರಸ್ತೆಗಳಲ್ಲಿ ನೀರು ನಿಂತು ವಾಹನ ಸಂಚಾರಕ್ಕೆ ಅಡ್ಡಿಯಾಗದಂತೆ ಕ್ರಮ ಕೈಗೊಳ್ಳಲು ಬಿಎಂಸಿ ಅಧಿಕಾರಿಗಳಿಗೆ ಸಿಎಂ ಆದೇಶಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>