<p><strong>ತಿರುವನಂತಪುರಂ: </strong>ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ ಕೇರಳದ ಆರು ಜಿಲ್ಲೆಗಳಲ್ಲಿ ’ಆರೆಂಜ್ ಅಲರ್ಟ್’ ಘೋಷಿಸಿದೆ. ರಾಜ್ಯದ ವಿವಿಧೆಡೆ ಶುಕ್ರವಾರ ರಾತ್ರಿಯಿಂದ ನಿರಂತರ ಮಳೆ ಸುರಿಯುತ್ತಿದೆ. ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗಿ, ಕೆಲವೆಡೆ ಸಣ್ಣ ಪ್ರಮಾಣ ಭೂಕುಸಿತ ಉಂಟಾಗಿದೆ.</p>.<p>ತಿರುವನಂತಪುರಂ, ಕೊಲ್ಲಂ, ಪತ್ತನಂತಿಟ್ಟ,ಅಲಪ್ಪುಳ, ಕೊಟ್ಟಾಯಂ ಮತ್ತು ಇಡುಕ್ಕಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ ನೀಡಿದೆ. ಎರ್ನಾಕುಲಂ, ತ್ರಿಶೂರ್, ಪಾಲಕ್ಕಾಡ್, ಮಲಪ್ಪುರಂ, ಕೋಝಿಕ್ಕೋಡ್, ಕಣ್ಣೂರು, ವಯನಾಡ್ ಮತ್ತು ಕಾಸರಗೋಡು ಜಿಲ್ಲೆಗಳಿಗೆ 'ಯೆಲ್ಲೋ ಅಲರ್ಟ್' ಘೋಷಿಸಿದೆ.</p>.<p>ನವೆಂಬರ್ 16ರವರೆಗೆ ಗುಡುಗು ಸಹಿತ ಮಳೆಯಾಗಬಹುದು ಎಂದು ತಿಳಿಸಿದೆ. ನಿರಂತರ ಮಳೆಯಿಂದಾಗಿ ತಿರುವನಂತಪುರಂ ಜಿಲ್ಲೆಯಲ್ಲಿ ಭಾರಿ ನಷ್ಟ ಸಂಭವಿಸಿರುವುದಾಗಿ ವರದಿಯಾಗಿದೆ. ನಾಗರಿಕರಿಗೆ ಜಾಗ್ರತೆಯಿಂದ ಇರಲು ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.</p>.<p>ತಿರುವನಂತಪುರಂ–ನಾಗರಕೊಯಿಲ್ ರೈಲ್ವೆ ಹಳಿಗಳ ಮೇಲೆ ಮಣ್ಣು ಸುರಿದಿದೆ. ನೆಯ್ಯತ್ತಿನಕರದ ರಾಷ್ಟ್ರೀಯ ಹೆದ್ದಾರಿಯಲ್ಲಿನ ಸೇತುವೆ ಭಾಗಶಃ ಕೊಚ್ಚಿ ಹೋಗಿದೆ. ಕಾಲುವೆ ಉಕ್ಕಿ ಹರಿದಿದ್ದು, ವಿಝಿಂಜಂನ ಕರಾವಳಿ ತೀರದಲ್ಲಿ ಅಂಗಡಿಗಳಿಗೆ ನೀರು ನುಗ್ಗಿದೆ.</p>.<p>ನೀರಿನ ಹರಿವು ಹೆಚ್ಚಿದ್ದು, ಅರುವಿಕ್ಕರ ಮತ್ತು ಪೆಪ್ಪಾರ ಅಣೆಕಟ್ಟಿನಿಂದನೀರು ಹೊರಬಿಡಲಾಗುತ್ತಿದೆ ಎಂದು ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.ಅಣೆಕಟ್ಟುವಿನ ಅಚ್ಚುಕಟ್ಟು ಪ್ರದೇಶದಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರಂ: </strong>ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ ಕೇರಳದ ಆರು ಜಿಲ್ಲೆಗಳಲ್ಲಿ ’ಆರೆಂಜ್ ಅಲರ್ಟ್’ ಘೋಷಿಸಿದೆ. ರಾಜ್ಯದ ವಿವಿಧೆಡೆ ಶುಕ್ರವಾರ ರಾತ್ರಿಯಿಂದ ನಿರಂತರ ಮಳೆ ಸುರಿಯುತ್ತಿದೆ. ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗಿ, ಕೆಲವೆಡೆ ಸಣ್ಣ ಪ್ರಮಾಣ ಭೂಕುಸಿತ ಉಂಟಾಗಿದೆ.</p>.<p>ತಿರುವನಂತಪುರಂ, ಕೊಲ್ಲಂ, ಪತ್ತನಂತಿಟ್ಟ,ಅಲಪ್ಪುಳ, ಕೊಟ್ಟಾಯಂ ಮತ್ತು ಇಡುಕ್ಕಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ ನೀಡಿದೆ. ಎರ್ನಾಕುಲಂ, ತ್ರಿಶೂರ್, ಪಾಲಕ್ಕಾಡ್, ಮಲಪ್ಪುರಂ, ಕೋಝಿಕ್ಕೋಡ್, ಕಣ್ಣೂರು, ವಯನಾಡ್ ಮತ್ತು ಕಾಸರಗೋಡು ಜಿಲ್ಲೆಗಳಿಗೆ 'ಯೆಲ್ಲೋ ಅಲರ್ಟ್' ಘೋಷಿಸಿದೆ.</p>.<p>ನವೆಂಬರ್ 16ರವರೆಗೆ ಗುಡುಗು ಸಹಿತ ಮಳೆಯಾಗಬಹುದು ಎಂದು ತಿಳಿಸಿದೆ. ನಿರಂತರ ಮಳೆಯಿಂದಾಗಿ ತಿರುವನಂತಪುರಂ ಜಿಲ್ಲೆಯಲ್ಲಿ ಭಾರಿ ನಷ್ಟ ಸಂಭವಿಸಿರುವುದಾಗಿ ವರದಿಯಾಗಿದೆ. ನಾಗರಿಕರಿಗೆ ಜಾಗ್ರತೆಯಿಂದ ಇರಲು ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.</p>.<p>ತಿರುವನಂತಪುರಂ–ನಾಗರಕೊಯಿಲ್ ರೈಲ್ವೆ ಹಳಿಗಳ ಮೇಲೆ ಮಣ್ಣು ಸುರಿದಿದೆ. ನೆಯ್ಯತ್ತಿನಕರದ ರಾಷ್ಟ್ರೀಯ ಹೆದ್ದಾರಿಯಲ್ಲಿನ ಸೇತುವೆ ಭಾಗಶಃ ಕೊಚ್ಚಿ ಹೋಗಿದೆ. ಕಾಲುವೆ ಉಕ್ಕಿ ಹರಿದಿದ್ದು, ವಿಝಿಂಜಂನ ಕರಾವಳಿ ತೀರದಲ್ಲಿ ಅಂಗಡಿಗಳಿಗೆ ನೀರು ನುಗ್ಗಿದೆ.</p>.<p>ನೀರಿನ ಹರಿವು ಹೆಚ್ಚಿದ್ದು, ಅರುವಿಕ್ಕರ ಮತ್ತು ಪೆಪ್ಪಾರ ಅಣೆಕಟ್ಟಿನಿಂದನೀರು ಹೊರಬಿಡಲಾಗುತ್ತಿದೆ ಎಂದು ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.ಅಣೆಕಟ್ಟುವಿನ ಅಚ್ಚುಕಟ್ಟು ಪ್ರದೇಶದಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>