ಶುಕ್ರವಾರ, 4 ಜುಲೈ 2025
×
ADVERTISEMENT
ADVERTISEMENT

ಕೇರಳದಲ್ಲಿ ಭಾರಿ ಮಳೆ: 4 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಣೆ

Published : 15 ಅಕ್ಟೋಬರ್ 2023, 11:03 IST
Last Updated : 15 ಅಕ್ಟೋಬರ್ 2023, 11:03 IST
ಫಾಲೋ ಮಾಡಿ
Comments
ರಾಜಧಾನಿಯಲ್ಲಿ ಬಿಗಡಾಯಿಸಿದ ಪರಿಸ್ಥಿತಿ
ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ಶಿಕ್ಷಣ ಸಚಿವ ವಿ.ಶಿವನ್‌ಕುಟ್ಟಿ ತಿರುವನಂತಪುರ ನಗರದಲ್ಲಿ ಮಳೆಯು ಅಸಾಮಾನ್ಯ ಪರಿಸ್ಥಿತಿಯನ್ನು ಸೃಷ್ಟಿಸಿದೆ. ಹಲವೆಡೆ ಜಲಾವೃತವಾಗಿರುವುದು ಮತ್ತು ಹೆಚ್ಚುತ್ತಿರುವ ಸಮುದ್ರದ ನೀರಿನಮಟ್ಟದಿಂದ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಿದೆ. ಪ್ರವಾಹಪೀಡಿತ ಪ್ರದೇಶದಲ್ಲಿ ಜಿಲ್ಲಾಡಳಿತವು ಸಮರೋಪಾದಿಯಲ್ಲಿ ಪರಿಹಾರ ಕಾರ್ಯ ನಡೆಸುತ್ತಿದೆ ಎಂದು ಫೇಸ್‌ಬುಕ್‌ನಲ್ಲಿ ತಿಳಿಸಿದ್ದಾರೆ. ಪ್ರವಾಹ ಪರಿಸ್ಥಿತಿ ಕುರಿತು ನಡೆದ ಸಚಿವರ ಸಭೆಯ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕಂದಾಯ ಸಚಿವ ಕೆ.ರಾಜನ್‌  ತಿರುವನಂತಪುರದಲ್ಲಿ ಹಲವು ಭಾಗಗಳಲ್ಲಿ ಗಂಭೀರ ಹಾನಿ ಆಗಿದೆ. ಶನಿವಾರ ರಾತ್ರಿಯಿಂದ ರಾಜಧಾನಿಯಲ್ಲಿ 10 ಸೆಂ.ಮೀ ನಷ್ಟು ಮಳೆಯಾಗಿದೆ. ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಸುತ್ತಮುತ್ತಲಿನ ಪ್ರದೇಶದಲ್ಲಿ ದುಪ್ಪಟ್ಟು ಮಳೆಯಾಗಿದೆ. ಇದು ಕೂಡ ತಗ್ಗುಪ್ರದೇಶಗಳು ಜಲಾವೃತವಾಗಿ ಪ್ರವಾಹ ಸೃಷ್ಟಿಗೆ ಕಾರಣವಾಗಿದೆ ಎಂದು ತಿಳಿಸಿದರು.
ನಾಲ್ಕು ಜಿಲ್ಲೆಗಳಲ್ಲಿ ಆರೆಂಜ್‌ ಅಲರ್ಟ್‌
ತಿರುವನಂತಪುರ ಕೊಲ್ಲಂ ಪತ್ತನಂತಿಟ್ಟ ಮತ್ತು ಆಲಪ್ಪುಳ ಜಿಲ್ಲೆಗಳಲ್ಲಿ ಆರೆಂಜ್‌ ಅಲರ್ಟ್‌ ಮತ್ತು ಎಂಟು ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್‌ ಅನ್ನು ಭಾರತೀಯ ಹವಾಮಾನ ಇಲಾಖೆ ಘೋಷಿಸಿದೆ. ಹವಾಮಾನ ಮುನ್ಸೂಚನೆಯ ಪ್ರಕಾರ ಐದು ದಿನಗಳವರೆಗೆ ಭಾರಿ ಮಳೆ ಮುಂದುವರಿಯುವ ಸಾಧ್ಯತೆಯಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT