<p><strong>ಚೆನ್ನೈ</strong>: ಎಐಎಡಿಎಂಕೆ ಪಕ್ಷದಲ್ಲಿ ಭಿನ್ನಮತ ತಾರಕಕ್ಕೇರಿರುವ ಹಿನ್ನೆಲೆ ಪಕ್ಷದ ಪ್ರಧಾನ ಕಚೇರಿಯ ಬಳಿ ಗುರುವಾರ ಭಾರಿ ಪೊಲೀಸ್ ಭದ್ರತೆಯನ್ನು ನಿಯೋಜಿಸಲಾಗಿದೆ.</p><p>2022ರಲ್ಲಿ ಎದುರಾಳಿ ಬಣಗಳ ನಡುವೆ ನಡೆದ ಹಿಂಸಾತ್ಮಕ ಘರ್ಷಣೆಗಳು ಮರುಕಳಿಸದಂತೆ ತಡೆಯಲು ಮುನ್ನೆಚ್ಚರಿಕೆ ಕ್ರಮವಾಗಿ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಆಗ ನಡೆದ ಹಿಂಸಾಚಾರದಲ್ಲಿ ಕಚೇರಿ ಆವರಣವನ್ನು ಧ್ವಂಸಗೊಳಿಸಲಾಗಿತ್ತು.</p><p>ಪಕ್ಷವು ಪ್ರಸ್ತುತ ತೀವ್ರ ಆಂತರಿಕ ಸಂಘರ್ಷವನ್ನು ಎದುರಿಸುತ್ತಿದೆ. ಒಂದು ಬಣದ ನೇತೃತ್ವವನ್ನು ಪಕ್ಷದ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ. ಪಳನಿಸ್ವಾಮಿ ವಹಿಸಿದ್ದರೆ, ಮತ್ತೊಂದು ಬಣದ ನೇತೃತ್ವವನ್ನು ಸಿ. ವಿ. ಷಣ್ಮುಗಂ ಮತ್ತು ಎಸ್. ಪಿ. ವೇಲುಮಣಿ ವಹಿಸಿದ್ದಾರೆ.</p><p>ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ವಿಶ್ವಾಸಮತ ಪರೀಕ್ಷೆಯ ನಂತರ ಈ ಭಿನ್ನಮತ ಸ್ಪಷ್ಟವಾಗಿ ಗೋಚರಿಸಿದೆ. ವೇಲುಮಣಿ-ಷಣ್ಮುಗಂ ಬಣದೊಂದಿಗೆ ಗುರುತಿಸಿಕೊಂಡಿದ್ದ 25 ಮಂದಿ ಎಐಎಡಿಎಂಕೆ ಬಂಡಾಯ ಶಾಸಕರು ಆಡಳಿತಾರೂಢ ಟಿವಿಕೆ ಪರವಾಗಿ ಮತ ಚಲಾಯಿಸಿದ್ದರು.</p><p>ಇದಾದ ಬೆನ್ನಲ್ಲೇ ಪಳನಿಸ್ವಾಮಿ ಅವರು ವೇಲುಮಣಿ, ಷಣ್ಮುಗಂ, ನತ್ತಮ್ ಆರ್. ವಿಶ್ವನಾಥನ್ ಸೇರಿದಂತೆ 25 ಶಾಸಕರನ್ನು ಪಕ್ಷದ ವಿವಿಧ ಹುದ್ದೆಗಳಿಂದ ವಜಾಗೊಳಿಸಿದ್ದಾರೆ.</p><p>ಬಂಡಾಯ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿ ಪಕ್ಷದ ಪರ ವಕೀಲ ಐ. ಎಸ್. ಇನ್ಬಾದುರೈ ಅವರು ವಿಧಾನಸಭಾ ಸ್ಪೀಕರ್ ಜೆಸಿಡಿ ಪ್ರಭಾಕರ್ ಅವರನ್ನು ಭೇಟಿ ಮಾಡಿ ಅಧಿಕೃತ ದೂರು ಸಲ್ಲಿಸುವ ಸಾಧ್ಯತೆಯಿದೆ ಎಂದು ಎಐಎಡಿಎಂಕೆ ಹಿರಿಯ ನಾಯಕರೊಬ್ಬರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ</strong>: ಎಐಎಡಿಎಂಕೆ ಪಕ್ಷದಲ್ಲಿ ಭಿನ್ನಮತ ತಾರಕಕ್ಕೇರಿರುವ ಹಿನ್ನೆಲೆ ಪಕ್ಷದ ಪ್ರಧಾನ ಕಚೇರಿಯ ಬಳಿ ಗುರುವಾರ ಭಾರಿ ಪೊಲೀಸ್ ಭದ್ರತೆಯನ್ನು ನಿಯೋಜಿಸಲಾಗಿದೆ.</p><p>2022ರಲ್ಲಿ ಎದುರಾಳಿ ಬಣಗಳ ನಡುವೆ ನಡೆದ ಹಿಂಸಾತ್ಮಕ ಘರ್ಷಣೆಗಳು ಮರುಕಳಿಸದಂತೆ ತಡೆಯಲು ಮುನ್ನೆಚ್ಚರಿಕೆ ಕ್ರಮವಾಗಿ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಆಗ ನಡೆದ ಹಿಂಸಾಚಾರದಲ್ಲಿ ಕಚೇರಿ ಆವರಣವನ್ನು ಧ್ವಂಸಗೊಳಿಸಲಾಗಿತ್ತು.</p><p>ಪಕ್ಷವು ಪ್ರಸ್ತುತ ತೀವ್ರ ಆಂತರಿಕ ಸಂಘರ್ಷವನ್ನು ಎದುರಿಸುತ್ತಿದೆ. ಒಂದು ಬಣದ ನೇತೃತ್ವವನ್ನು ಪಕ್ಷದ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ. ಪಳನಿಸ್ವಾಮಿ ವಹಿಸಿದ್ದರೆ, ಮತ್ತೊಂದು ಬಣದ ನೇತೃತ್ವವನ್ನು ಸಿ. ವಿ. ಷಣ್ಮುಗಂ ಮತ್ತು ಎಸ್. ಪಿ. ವೇಲುಮಣಿ ವಹಿಸಿದ್ದಾರೆ.</p><p>ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ವಿಶ್ವಾಸಮತ ಪರೀಕ್ಷೆಯ ನಂತರ ಈ ಭಿನ್ನಮತ ಸ್ಪಷ್ಟವಾಗಿ ಗೋಚರಿಸಿದೆ. ವೇಲುಮಣಿ-ಷಣ್ಮುಗಂ ಬಣದೊಂದಿಗೆ ಗುರುತಿಸಿಕೊಂಡಿದ್ದ 25 ಮಂದಿ ಎಐಎಡಿಎಂಕೆ ಬಂಡಾಯ ಶಾಸಕರು ಆಡಳಿತಾರೂಢ ಟಿವಿಕೆ ಪರವಾಗಿ ಮತ ಚಲಾಯಿಸಿದ್ದರು.</p><p>ಇದಾದ ಬೆನ್ನಲ್ಲೇ ಪಳನಿಸ್ವಾಮಿ ಅವರು ವೇಲುಮಣಿ, ಷಣ್ಮುಗಂ, ನತ್ತಮ್ ಆರ್. ವಿಶ್ವನಾಥನ್ ಸೇರಿದಂತೆ 25 ಶಾಸಕರನ್ನು ಪಕ್ಷದ ವಿವಿಧ ಹುದ್ದೆಗಳಿಂದ ವಜಾಗೊಳಿಸಿದ್ದಾರೆ.</p><p>ಬಂಡಾಯ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿ ಪಕ್ಷದ ಪರ ವಕೀಲ ಐ. ಎಸ್. ಇನ್ಬಾದುರೈ ಅವರು ವಿಧಾನಸಭಾ ಸ್ಪೀಕರ್ ಜೆಸಿಡಿ ಪ್ರಭಾಕರ್ ಅವರನ್ನು ಭೇಟಿ ಮಾಡಿ ಅಧಿಕೃತ ದೂರು ಸಲ್ಲಿಸುವ ಸಾಧ್ಯತೆಯಿದೆ ಎಂದು ಎಐಎಡಿಎಂಕೆ ಹಿರಿಯ ನಾಯಕರೊಬ್ಬರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>