<p><strong>ರಾಂಚಿ:</strong> ಮಿತ್ರಪಕ್ಷಗಳ ಶಾಸಕರ ನಡುವೆ ಭಿನ್ನಾಭಿಪ್ರಾಯ ತಲೆದೂರಿರುವುದರಿಂದ ಜಾರ್ಖಂಡ್ ಮುಖ್ಯಮಂತ್ರಿಯಾಗಿ ಜೆಎಎಂ ಪಕ್ಷದ ಕಾರ್ಯಕಾರಿ ಅಧ್ಯಕ್ಷ ಹೇಮಂತ್ ಸೊರೇನ್ ಅವರು ಮತ್ತೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ಬುಧವಾರ ತಿಳಿಸಿವೆ.</p><p>ಮುಖ್ಯಮಂತ್ರಿ ಚಾಂಪೈ ಸೊರೇನ್ ಅವರ ನಿವಾಸದಲ್ಲಿ ನಡೆದ ಮೈತ್ರಿಕೂಟದ ನಾಯಕರ ಸಭೆಯಲ್ಲಿ, ಹೇಮಂತ್ ಸೊರೇನ್ ಅವರನ್ನು ಜೆಎಎಂನ ಶಾಸಕಾಂಗ ಪಕ್ಷದ ನಾಯಕನಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು ಎಂದು ಮೂಲಗಳಿಂದ ಗೊತ್ತಾಗಿದೆ.</p>.ಹಣ ಅಕ್ರಮ ವರ್ಗಾವಣೆ ಪ್ರಕರಣ: ಜಾರ್ಖಂಡ್ ಮಾಜಿ CM ಹೇಮಂತ್ ಸೊರೇನ್ಗೆ ಜಾಮೀನು.<p>ಚಾಂಪೈ ಸೊರೇನ್ ಅವರನ್ನು ಬದಲಾಯಿಸುವ ನಿರ್ಣಯವನ್ನು ಸಭೆಯಲ್ಲಿ ತೆಗೆದುಕೊಳ್ಳಲಾಯಿತು ಎಂದು ಸಭೆಯಲ್ಲಿ ಹಾಜರಿದ್ದ ಮುಖಂಡರೊಬ್ಬರು ಪಿಟಿಐ ಜೊತೆ ಹೇಳಿಕೊಂಡಿದ್ದಾರೆ.</p><p>ಒಂದು ವೇಳೆ ಸೊರೇನ್ ಮತ್ತೊಂದು ಅವಧಿಗೆ ಮುಖ್ಯಮಂತ್ರಿಯಾದರೆ, ಈ ಹುದ್ದೆಯನ್ನು ಮೂರನೇ ಬಾರಿಗೆ ಅಲಂಕರಿಸಿದಂತಾಗುತ್ತದೆ. ರಾಜ್ಯದ 13ನೇ ಮುಖ್ಯಮಂತ್ರಿಯಾಗಲಿದ್ದಾರೆ.</p>.ಇಂದು ಜಾರ್ಖಂಡ್ನ ಇಂಡಿಯಾ ಬಣದ ಶಾಸಕರ ಸಭೆ:ಮತ್ತೆ ಸಿಎಂ ಆಗ್ತಾರಾ ಹೇಮಂತ್ ಸೊರೇನ್?.<p>ಜಾರ್ಖಂಡ್ ಕಾಂಗ್ರೆಸ್ನ ಉಸ್ತುವಾರಿ ಗುಲಾಮ್ ಅಹಮದ್ ಮಿರ್, ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷ ರಾಜೇಶ್ ಠಾಕೂರ್, ಹೇಮಂತ್ ಸೊರೇನ್ ಸಹೋದರ ಬಸಂತ್ ಹಾಗೂ ಪತ್ನಿ ಕಲ್ಪನಾ ಅವರೂ ಸಭೆಯಲ್ಲಿ ಹಾಜರಿದ್ದರು.</p><p>ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧಿತರಾಗಿದ್ದ ಹೇಮಂತ್ ಸೊರೇನ್ ಅವರು ಐದು ತಿಂಗಳ ಬಳಿಕ ಜೂನ್ 28ರಂದು ಜೈಲಿನಿಂದ ಬಿಡುಗಡೆಯಾಗಿದ್ದರು, ಜನವರಿ 31ರಂದು ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿದ್ದರು.</p> .ಬಿಜೆಪಿ ಶವಪೆಟ್ಟಿಗೆಗೆ ಕೊನೆಯ ಮೊಳೆ ಹೊಡೆಯುವ ಸಮಯ ಬಂದಿದೆ: ಹೇಮಂತ್ ಸೊರೇನ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಂಚಿ:</strong> ಮಿತ್ರಪಕ್ಷಗಳ ಶಾಸಕರ ನಡುವೆ ಭಿನ್ನಾಭಿಪ್ರಾಯ ತಲೆದೂರಿರುವುದರಿಂದ ಜಾರ್ಖಂಡ್ ಮುಖ್ಯಮಂತ್ರಿಯಾಗಿ ಜೆಎಎಂ ಪಕ್ಷದ ಕಾರ್ಯಕಾರಿ ಅಧ್ಯಕ್ಷ ಹೇಮಂತ್ ಸೊರೇನ್ ಅವರು ಮತ್ತೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ಬುಧವಾರ ತಿಳಿಸಿವೆ.</p><p>ಮುಖ್ಯಮಂತ್ರಿ ಚಾಂಪೈ ಸೊರೇನ್ ಅವರ ನಿವಾಸದಲ್ಲಿ ನಡೆದ ಮೈತ್ರಿಕೂಟದ ನಾಯಕರ ಸಭೆಯಲ್ಲಿ, ಹೇಮಂತ್ ಸೊರೇನ್ ಅವರನ್ನು ಜೆಎಎಂನ ಶಾಸಕಾಂಗ ಪಕ್ಷದ ನಾಯಕನಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು ಎಂದು ಮೂಲಗಳಿಂದ ಗೊತ್ತಾಗಿದೆ.</p>.ಹಣ ಅಕ್ರಮ ವರ್ಗಾವಣೆ ಪ್ರಕರಣ: ಜಾರ್ಖಂಡ್ ಮಾಜಿ CM ಹೇಮಂತ್ ಸೊರೇನ್ಗೆ ಜಾಮೀನು.<p>ಚಾಂಪೈ ಸೊರೇನ್ ಅವರನ್ನು ಬದಲಾಯಿಸುವ ನಿರ್ಣಯವನ್ನು ಸಭೆಯಲ್ಲಿ ತೆಗೆದುಕೊಳ್ಳಲಾಯಿತು ಎಂದು ಸಭೆಯಲ್ಲಿ ಹಾಜರಿದ್ದ ಮುಖಂಡರೊಬ್ಬರು ಪಿಟಿಐ ಜೊತೆ ಹೇಳಿಕೊಂಡಿದ್ದಾರೆ.</p><p>ಒಂದು ವೇಳೆ ಸೊರೇನ್ ಮತ್ತೊಂದು ಅವಧಿಗೆ ಮುಖ್ಯಮಂತ್ರಿಯಾದರೆ, ಈ ಹುದ್ದೆಯನ್ನು ಮೂರನೇ ಬಾರಿಗೆ ಅಲಂಕರಿಸಿದಂತಾಗುತ್ತದೆ. ರಾಜ್ಯದ 13ನೇ ಮುಖ್ಯಮಂತ್ರಿಯಾಗಲಿದ್ದಾರೆ.</p>.ಇಂದು ಜಾರ್ಖಂಡ್ನ ಇಂಡಿಯಾ ಬಣದ ಶಾಸಕರ ಸಭೆ:ಮತ್ತೆ ಸಿಎಂ ಆಗ್ತಾರಾ ಹೇಮಂತ್ ಸೊರೇನ್?.<p>ಜಾರ್ಖಂಡ್ ಕಾಂಗ್ರೆಸ್ನ ಉಸ್ತುವಾರಿ ಗುಲಾಮ್ ಅಹಮದ್ ಮಿರ್, ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷ ರಾಜೇಶ್ ಠಾಕೂರ್, ಹೇಮಂತ್ ಸೊರೇನ್ ಸಹೋದರ ಬಸಂತ್ ಹಾಗೂ ಪತ್ನಿ ಕಲ್ಪನಾ ಅವರೂ ಸಭೆಯಲ್ಲಿ ಹಾಜರಿದ್ದರು.</p><p>ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧಿತರಾಗಿದ್ದ ಹೇಮಂತ್ ಸೊರೇನ್ ಅವರು ಐದು ತಿಂಗಳ ಬಳಿಕ ಜೂನ್ 28ರಂದು ಜೈಲಿನಿಂದ ಬಿಡುಗಡೆಯಾಗಿದ್ದರು, ಜನವರಿ 31ರಂದು ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿದ್ದರು.</p> .ಬಿಜೆಪಿ ಶವಪೆಟ್ಟಿಗೆಗೆ ಕೊನೆಯ ಮೊಳೆ ಹೊಡೆಯುವ ಸಮಯ ಬಂದಿದೆ: ಹೇಮಂತ್ ಸೊರೇನ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>