ಪ್ರಜಾಸತ್ತಾತ್ಮಕ ಮೌಲ್ಯಗಳಾದ ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ ಹಾಗೂ ನ್ಯಾಯದ ಅನುಷ್ಠಾನದಲ್ಲಿ ಅಂಬೇಡ್ಕರ್ ‘ಚಾಂಪಿಯನ್’ ಆಗಿದ್ದಾರೆ. ದೇಶವನ್ನು ಸಾಮಾಜಿಕ ಹಾಗೂ ಆರ್ಥಿಕವಾಗಿ ಅಭಿವೃದ್ಧಿಪಡಿಸುವಲ್ಲಿ ಅವರಿಗಿದ್ದ ಬದ್ಧತೆ ನಮಗೆ ಅನುಕರಣೀಯ. ಜಾತಿ ಪದ್ಧತಿ, ಲಿಂಗ ಅಸಮಾನತೆಯ ನಿರ್ಮೂಲನೆಯಲ್ಲಿ ಅವರ ಶ್ರಮ ಎಲ್ಲರಿಗೂ ಮಾದರಿ ಎಂದು ಸ್ಮರಿಸಿದ್ದಾರೆ.