ಉತ್ತರ ಪ್ರದೇಶದ ಸುನ್ನಿ ಸೆಂಟ್ರಲ್ ವಕ್ಫ್ ಮಂಡಳಿ, ಶಾಹಿ ಮಸೀದಿ ಈದ್ಗಾ ಟ್ರಸ್ಟ್, ಶ್ರೀಕೃಷ್ಣ ಜನ್ಮಭೂಮಿ ಟ್ರಸ್ಟ್, ಶ್ರೀಕೃಷ್ಣ ಜನ್ಮಸ್ಥಳ ಸೇವಾ ಸಂಸ್ಥಾನ ಅವರನ್ನು ಪ್ರತಿವಾದಿಗಳಾಗಿ ಅರ್ಜಿಯಲ್ಲಿ ಹೆಸರಿಸಲಾಗಿದೆ. ಅತಿಕ್ರಮಣ ಮಾಡಿ ಕಟ್ಟಲಾಗಿರುವ ಮಸೀದಿಯನ್ನು ತೆರವುಗೊಳಿಸಲು ಮಸೀದಿಯ ವ್ಯವಸ್ಥಾಪನ ಸಮಿತಿಗೆ ಆದೇಶಿಸಬೇಕು ಎಂದು ಕೋರಲಾಗಿದೆ.