<p><strong>ನವದೆಹಲಿ:</strong> ಜಿ–20 ಶೃಂಗಸಭೆಗೆ ದಿನಗಣನೆ ಆರಂಭವಾಗಿದೆ. ಹವಾಮಾನ ಬದಲಾವಣೆ, ಇಂಧನ ಕ್ಷೇತ್ರ ಸೇರಿದಂತೆ ಮಹತ್ವದ ವಿಷಯಗಳ ಕುರಿತು ಸದಸ್ಯ ರಾಷ್ಟ್ರಗಳ ನಡುವೆ ಒಮ್ಮತ ಮೂಡಿಸುವ ನಿಟ್ಟಿನಲ್ಲಿ ಸಂಘಟನೆಯ ಅಧ್ಯಕ್ಷ ಸ್ಥಾನದಲ್ಲಿರುವ ಭಾರತ ಆಶಾಭಾವ ಹೊಂದಿದೆ.</p>.<p>ಬಹುಪಕ್ಷೀಯ ಅಭಿವೃದ್ಧಿ ಬ್ಯಾಂಕ್ನಲ್ಲಿ (ಎಂಡಿಬಿ) ಸುಧಾರಣೆಗಳು, ಪಳೆಯುಳಿಕೆ ಇಂಧನಗಳ ಬಳಕೆಯನ್ನು ತಗ್ಗಿಸುವ ಕುರಿತು ಕೈಗೊಳ್ಳುವ ನಿಲುವುಗಳು ಭಾರತದ ನಾಯಕತ್ವಕ್ಕೆ ಮತ್ತಷ್ಟು ಬಲ ತುಂಬಲಿವೆ ಎಂದು ವಿಶ್ಲೇಷಿಸಲಾಗುತ್ತಿದೆ.</p>.<p>ಬ್ಯಾಂಕಿಂಗ್ ಕ್ಷೇತ್ರದ ಸುಧಾರಣೆಗಳು ಮತ್ತು ಇಂಧನ ಕುರಿತ ವಿಷಯಗಳು ಸಂಕೀರ್ಣವಾಗಿದ್ದರೂ, ಈ ವಿಷಯಗಳ ಕುರಿತು ಶೃಂಗಸಭೆಯಲ್ಲಿ ಪಾಲ್ಗೊಳ್ಳುವ ವಿಶ್ವ ನಾಯಕರಲ್ಲಿ ಒಮ್ಮತ ಮೂಡಲಿದೆ ಎಂಬ ವಿಶ್ವಾಸವನ್ನು ಭಾರತ ಹೊಂದಿದೆ.</p>.<p>ಇತ್ತೀಚೆಗೆ ನಡೆದಿದ್ದ ಜಿ–20 ಇಂಧನ ಸಚಿವರ ಸಭೆಯಲ್ಲಿ ಸೌದಿ ಅರೇಬಿಯಾ ಮತ್ತಿತರ ತೈಲ ಉತ್ಪಾದಿಸುವ ರಾಷ್ಟ್ರಗಳು ಪಳೆಯುಳಿಕೆ ಇಂಧನ ಬಳಕೆಯನ್ನು ತಗ್ಗಿಸುವ ಯತ್ನಗಳಿಗೆ ವಿರೋಧ ವ್ಯಕ್ತಪಡಿಸಿದ್ದವು. ಆದರೆ, ಜಿ–7 ಗುಂಪಿನ ರಾಷ್ಟ್ರಗಳು ಈ ಕಾರ್ಯಕ್ಕೆ ವೇಗ ನೀಡುವುದಕ್ಕೆ ಸಮ್ಮತಿ ಸೂಚಿಸಿವೆ.</p>.<p>ಜಗತ್ತಿನ ಒಟ್ಟು ಜಿಡಿಪಿಯಲ್ಲಿ ಜಿ–20 ರಾಷ್ಟ್ರಗಳ ಪಾಲು ಶೇ 85ರಷ್ಟಿದೆ. ಉಷ್ಣವರ್ಧಕ ಅನಿಲಗಳ ಹೊರಸೂಸುವಿಕೆಯಲ್ಲಿ ಈ ದೇಶಗಳ ಪಾಲು ಶೇ 80ರಷ್ಟು. ಹೀಗಾಗಿ, ಪಳೆಯುಳಿಕೆ ಇಂಧನಗಳ ಬಳಕೆಯನ್ನು ತಗ್ಗಿಸುವುದು ಹಾಗೂ ನವೀಕರಿಸಬಹುದಾದ ಇಂಧನ ಮೂಲಗಳಿಂದ ವಿದ್ಯುತ್ ಉತ್ಪಾದನೆಯನ್ನು 2030ರ ವೇಳೆಗೆ ಮೂರು ಪಟ್ಟು ಹೆಚ್ಚಿಸಬೇಕು ಎಂಬ ವಿಷಯ ಕುರಿತಂತೆಯೂ ಜಿ–20 ರಾಷ್ಟ್ರಗಳು ಒಮ್ಮತಕ್ಕೆ ಬರಲು ವಿಫಲವಾಗಿದ್ದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಜಿ–20 ಶೃಂಗಸಭೆಗೆ ದಿನಗಣನೆ ಆರಂಭವಾಗಿದೆ. ಹವಾಮಾನ ಬದಲಾವಣೆ, ಇಂಧನ ಕ್ಷೇತ್ರ ಸೇರಿದಂತೆ ಮಹತ್ವದ ವಿಷಯಗಳ ಕುರಿತು ಸದಸ್ಯ ರಾಷ್ಟ್ರಗಳ ನಡುವೆ ಒಮ್ಮತ ಮೂಡಿಸುವ ನಿಟ್ಟಿನಲ್ಲಿ ಸಂಘಟನೆಯ ಅಧ್ಯಕ್ಷ ಸ್ಥಾನದಲ್ಲಿರುವ ಭಾರತ ಆಶಾಭಾವ ಹೊಂದಿದೆ.</p>.<p>ಬಹುಪಕ್ಷೀಯ ಅಭಿವೃದ್ಧಿ ಬ್ಯಾಂಕ್ನಲ್ಲಿ (ಎಂಡಿಬಿ) ಸುಧಾರಣೆಗಳು, ಪಳೆಯುಳಿಕೆ ಇಂಧನಗಳ ಬಳಕೆಯನ್ನು ತಗ್ಗಿಸುವ ಕುರಿತು ಕೈಗೊಳ್ಳುವ ನಿಲುವುಗಳು ಭಾರತದ ನಾಯಕತ್ವಕ್ಕೆ ಮತ್ತಷ್ಟು ಬಲ ತುಂಬಲಿವೆ ಎಂದು ವಿಶ್ಲೇಷಿಸಲಾಗುತ್ತಿದೆ.</p>.<p>ಬ್ಯಾಂಕಿಂಗ್ ಕ್ಷೇತ್ರದ ಸುಧಾರಣೆಗಳು ಮತ್ತು ಇಂಧನ ಕುರಿತ ವಿಷಯಗಳು ಸಂಕೀರ್ಣವಾಗಿದ್ದರೂ, ಈ ವಿಷಯಗಳ ಕುರಿತು ಶೃಂಗಸಭೆಯಲ್ಲಿ ಪಾಲ್ಗೊಳ್ಳುವ ವಿಶ್ವ ನಾಯಕರಲ್ಲಿ ಒಮ್ಮತ ಮೂಡಲಿದೆ ಎಂಬ ವಿಶ್ವಾಸವನ್ನು ಭಾರತ ಹೊಂದಿದೆ.</p>.<p>ಇತ್ತೀಚೆಗೆ ನಡೆದಿದ್ದ ಜಿ–20 ಇಂಧನ ಸಚಿವರ ಸಭೆಯಲ್ಲಿ ಸೌದಿ ಅರೇಬಿಯಾ ಮತ್ತಿತರ ತೈಲ ಉತ್ಪಾದಿಸುವ ರಾಷ್ಟ್ರಗಳು ಪಳೆಯುಳಿಕೆ ಇಂಧನ ಬಳಕೆಯನ್ನು ತಗ್ಗಿಸುವ ಯತ್ನಗಳಿಗೆ ವಿರೋಧ ವ್ಯಕ್ತಪಡಿಸಿದ್ದವು. ಆದರೆ, ಜಿ–7 ಗುಂಪಿನ ರಾಷ್ಟ್ರಗಳು ಈ ಕಾರ್ಯಕ್ಕೆ ವೇಗ ನೀಡುವುದಕ್ಕೆ ಸಮ್ಮತಿ ಸೂಚಿಸಿವೆ.</p>.<p>ಜಗತ್ತಿನ ಒಟ್ಟು ಜಿಡಿಪಿಯಲ್ಲಿ ಜಿ–20 ರಾಷ್ಟ್ರಗಳ ಪಾಲು ಶೇ 85ರಷ್ಟಿದೆ. ಉಷ್ಣವರ್ಧಕ ಅನಿಲಗಳ ಹೊರಸೂಸುವಿಕೆಯಲ್ಲಿ ಈ ದೇಶಗಳ ಪಾಲು ಶೇ 80ರಷ್ಟು. ಹೀಗಾಗಿ, ಪಳೆಯುಳಿಕೆ ಇಂಧನಗಳ ಬಳಕೆಯನ್ನು ತಗ್ಗಿಸುವುದು ಹಾಗೂ ನವೀಕರಿಸಬಹುದಾದ ಇಂಧನ ಮೂಲಗಳಿಂದ ವಿದ್ಯುತ್ ಉತ್ಪಾದನೆಯನ್ನು 2030ರ ವೇಳೆಗೆ ಮೂರು ಪಟ್ಟು ಹೆಚ್ಚಿಸಬೇಕು ಎಂಬ ವಿಷಯ ಕುರಿತಂತೆಯೂ ಜಿ–20 ರಾಷ್ಟ್ರಗಳು ಒಮ್ಮತಕ್ಕೆ ಬರಲು ವಿಫಲವಾಗಿದ್ದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>