<p><strong>ಲಖನೌ:</strong> ಹೆದ್ದಾರಿಗಳಲ್ಲಿ ಟ್ರಕ್ ಚಾಲಕರನ್ನು ಕೊಂದು ದರೋಡೆ ಮಾಡಿದ್ದ ಆರೋಪಿಯೊಬ್ಬ ಉತ್ತರ ಪ್ರದೇಶದ ಬಾಗ್ಪತ್ನಲ್ಲಿ ನಡೆಸಿದ ಎನ್ಕೌಂಟರ್ನಲ್ಲಿ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಹರಿಯಾಣದ ರೋಹ್ಟಕ್ ನಿವಾಸಿ ಸಂದೀಪ್ ಎನ್ಕೌಂಟರ್ನಲ್ಲಿ ಸಾವಿಗೀಡಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>‘ಹೆದ್ದಾರಿಯಲ್ಲಿ ಸರಕುಗಳನ್ನು ತುಂಬಿದ್ದ ಟ್ರಕ್ಗಳನ್ನು ತಡೆದು ಚಾಲಕರನ್ನು ಕೊಂದು ಲೂಟಿ ಮಾಡುತ್ತಿದ್ದ ಗುಂಪಿನ ಮೇಲೆ ನೋಯ್ಡಾದ ಎಸ್ಟಿಎಫ್ ಘಟಕ ಮತ್ತು ಬಾಗ್ಪತ್ ಪೊಲೀಸರು ಎನ್ಕೌಂಟರ್ ನಡೆಸಿತ್ತು. ಈ ವೇಳೆ ಗುಂಡೇಟಿನಿಂದ ಗಾಯಗೊಂಡಿದ್ದ ಸಂದೀಪ್ನನ್ನು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾನೆ’ ಎಂದು ಎಸ್ಟಿಎಫ್ನ ಎಡಿಜಿ ಅಮಿತಾಭ್ ಯಶ್ ತಿಳಿಸಿದ್ದಾರೆ.</p><p>ಕಾನ್ಪುರದಿಂದ ಸುಮಾರು ₹4 ಕೋಟಿ ಮೌಲ್ಯದ ನಿಕ್ಕಲ್ ಪ್ಲೇಟ್ಗಳನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ಲೂಟಿ ಮಾಡಿದ್ದ ಪ್ರಕರಣದಲ್ಲಿ ಸಂದೀಪ್ ಪ್ರಮುಖ ಆರೋಪಿಯಾಗಿದ್ದ. ಈತನ ಬಗ್ಗೆ ಸುಳಿವು ನೀಡಿದವರಿಗೆ ₹1 ಲಕ್ಷ ಬಹುಮಾನ ನೀಡುವುದಾಗಿ ಘೋಷಿಸಲಾಗಿತ್ತು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. </p><p>ಸಂದೀಪ್ ಮೇಲೆ ಐದು ಟ್ರಕ್ ಚಾಲಕರನ್ನು ಕೊಲೆ ಮಾಡಿ ಬಳಿಕ ಸರಕುಗಳು ಸೇರಿದಂತೆ ನಗದನ್ನು ದರೋಡೆ ಮಾಡಿದ ಆರೋಪವಿದೆ. ಜತೆಗೆ, ಆತನ ವಿರುದ್ಧ ಉತ್ತರ ಪ್ರದೇಶ, ಮಹಾರಾಷ್ಟ್ರ ಮತ್ತು ಹರಿಯಾಣದಲ್ಲಿ 16ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ:</strong> ಹೆದ್ದಾರಿಗಳಲ್ಲಿ ಟ್ರಕ್ ಚಾಲಕರನ್ನು ಕೊಂದು ದರೋಡೆ ಮಾಡಿದ್ದ ಆರೋಪಿಯೊಬ್ಬ ಉತ್ತರ ಪ್ರದೇಶದ ಬಾಗ್ಪತ್ನಲ್ಲಿ ನಡೆಸಿದ ಎನ್ಕೌಂಟರ್ನಲ್ಲಿ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಹರಿಯಾಣದ ರೋಹ್ಟಕ್ ನಿವಾಸಿ ಸಂದೀಪ್ ಎನ್ಕೌಂಟರ್ನಲ್ಲಿ ಸಾವಿಗೀಡಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>‘ಹೆದ್ದಾರಿಯಲ್ಲಿ ಸರಕುಗಳನ್ನು ತುಂಬಿದ್ದ ಟ್ರಕ್ಗಳನ್ನು ತಡೆದು ಚಾಲಕರನ್ನು ಕೊಂದು ಲೂಟಿ ಮಾಡುತ್ತಿದ್ದ ಗುಂಪಿನ ಮೇಲೆ ನೋಯ್ಡಾದ ಎಸ್ಟಿಎಫ್ ಘಟಕ ಮತ್ತು ಬಾಗ್ಪತ್ ಪೊಲೀಸರು ಎನ್ಕೌಂಟರ್ ನಡೆಸಿತ್ತು. ಈ ವೇಳೆ ಗುಂಡೇಟಿನಿಂದ ಗಾಯಗೊಂಡಿದ್ದ ಸಂದೀಪ್ನನ್ನು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾನೆ’ ಎಂದು ಎಸ್ಟಿಎಫ್ನ ಎಡಿಜಿ ಅಮಿತಾಭ್ ಯಶ್ ತಿಳಿಸಿದ್ದಾರೆ.</p><p>ಕಾನ್ಪುರದಿಂದ ಸುಮಾರು ₹4 ಕೋಟಿ ಮೌಲ್ಯದ ನಿಕ್ಕಲ್ ಪ್ಲೇಟ್ಗಳನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ಲೂಟಿ ಮಾಡಿದ್ದ ಪ್ರಕರಣದಲ್ಲಿ ಸಂದೀಪ್ ಪ್ರಮುಖ ಆರೋಪಿಯಾಗಿದ್ದ. ಈತನ ಬಗ್ಗೆ ಸುಳಿವು ನೀಡಿದವರಿಗೆ ₹1 ಲಕ್ಷ ಬಹುಮಾನ ನೀಡುವುದಾಗಿ ಘೋಷಿಸಲಾಗಿತ್ತು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. </p><p>ಸಂದೀಪ್ ಮೇಲೆ ಐದು ಟ್ರಕ್ ಚಾಲಕರನ್ನು ಕೊಲೆ ಮಾಡಿ ಬಳಿಕ ಸರಕುಗಳು ಸೇರಿದಂತೆ ನಗದನ್ನು ದರೋಡೆ ಮಾಡಿದ ಆರೋಪವಿದೆ. ಜತೆಗೆ, ಆತನ ವಿರುದ್ಧ ಉತ್ತರ ಪ್ರದೇಶ, ಮಹಾರಾಷ್ಟ್ರ ಮತ್ತು ಹರಿಯಾಣದಲ್ಲಿ 16ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>