<p><strong>ಮುಂಬೈ:</strong> ‘ಭಾರತದ ಸಂವಿಧಾನವು ಎಲ್ಲ ಸಮುದಾಯಗಳ ಜನರಿಗೆ ಸಮಾನ ಸ್ಥಾನಮಾನವನ್ನು ನೀಡಿದ್ದು, ಮುಂದೊಂದು ದಿನ ಹಿಜಾಬ್ ಧರಿಸಿದ ಮಹಿಳೆ ಈ ದೇಶದ ಪ್ರಧಾನಮಂತ್ರಿ ಆಗುತ್ತಾರೆ’ ಎಂದು ಎಐಎಂಐಎಂ ಮುಖ್ಯಸ್ಥ ಅಸಾಸುದ್ದೀನ್ ಒವೈಸಿ ಪ್ರತಿಪಾದಿಸಿದರು.</p>.<p>‘ಇದನ್ನು ನೋಡಲು ನಾನು ಜೀವಂತವಾಗಿ ಇರದಿರಬಹುದು. ಆದರೆ ಭವಿಷ್ಯದಲ್ಲಿ ಹಿಜಾಬ್ ಧರಿಸಿದ ಮಹಿಳೆ ಭಾರತದ ಪ್ರಧಾನಿಯಾಗುವ ದಿನ ಬಂದೇ ಬರುತ್ತದೆ ’ ಎಂದು ಅವರು ಹೇಳಿದರು.</p>.<p>ಸ್ಥಳೀಯ ಸಂಸ್ಥೆಗಳ ಚುನಾವಣೆಯ ಅಂಗವಾಗಿ ಸೋಲಾಪುರದಲ್ಲಿ ಶುಕ್ರವಾರ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ‘ಭಾರತದ ಸಂವಿಧಾನವು ಎಲ್ಲಾ ಸಮುದಾಯಗಳಿಗೆ ಸಮಾನ ಸ್ಥಾನಮಾನ ನೀಡಿದೆ. ಆದರೆ, ಪಾಕಿಸ್ತಾನದ ಸಂವಿಧಾನ, ಆ ದೇಶದ ಉನ್ನತ ಸಾಂವಿಧಾನಿಕ ಹುದ್ದೆಗಳನ್ನು ಒಂದೇ ಸಮುದಾಯದ ಸದಸ್ಯರಿಗಷ್ಟೇ ನಿರ್ಬಂಧಿಸಿದೆ’ ಎಂದು ಹೇಳಿದರು. </p>.<p>ಒವೈಸಿ ಅವರ ಈ ಹೇಳಿಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಬಿಜೆಪಿ ಸಂಸದ ಅನಿಲ್ ಬೋಂಡೆ, ‘ಒವೈಸಿ ಬೇಜವಾದ್ದಾರಿತನದ ಹೇಳಿಕೆ ನೀಡಿದ್ದಾರೆ. ಇರಾನ್ನಲ್ಲಿ ಮಹಿಳೆಯರು ಹಿಜಾಬ್ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ. ಇದೊಂದು ಬಲವಂತದ ಹೇರಿಕೆ. ಆದ್ದರಿಂದ ಮುಸ್ಲಿಂ ಮಹಿಳೆಯರೂ ಹಿಜಾಬ್ ಅನ್ನು ವಿರೋಧಿಸುತ್ತಾರೆ’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ‘ಭಾರತದ ಸಂವಿಧಾನವು ಎಲ್ಲ ಸಮುದಾಯಗಳ ಜನರಿಗೆ ಸಮಾನ ಸ್ಥಾನಮಾನವನ್ನು ನೀಡಿದ್ದು, ಮುಂದೊಂದು ದಿನ ಹಿಜಾಬ್ ಧರಿಸಿದ ಮಹಿಳೆ ಈ ದೇಶದ ಪ್ರಧಾನಮಂತ್ರಿ ಆಗುತ್ತಾರೆ’ ಎಂದು ಎಐಎಂಐಎಂ ಮುಖ್ಯಸ್ಥ ಅಸಾಸುದ್ದೀನ್ ಒವೈಸಿ ಪ್ರತಿಪಾದಿಸಿದರು.</p>.<p>‘ಇದನ್ನು ನೋಡಲು ನಾನು ಜೀವಂತವಾಗಿ ಇರದಿರಬಹುದು. ಆದರೆ ಭವಿಷ್ಯದಲ್ಲಿ ಹಿಜಾಬ್ ಧರಿಸಿದ ಮಹಿಳೆ ಭಾರತದ ಪ್ರಧಾನಿಯಾಗುವ ದಿನ ಬಂದೇ ಬರುತ್ತದೆ ’ ಎಂದು ಅವರು ಹೇಳಿದರು.</p>.<p>ಸ್ಥಳೀಯ ಸಂಸ್ಥೆಗಳ ಚುನಾವಣೆಯ ಅಂಗವಾಗಿ ಸೋಲಾಪುರದಲ್ಲಿ ಶುಕ್ರವಾರ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ‘ಭಾರತದ ಸಂವಿಧಾನವು ಎಲ್ಲಾ ಸಮುದಾಯಗಳಿಗೆ ಸಮಾನ ಸ್ಥಾನಮಾನ ನೀಡಿದೆ. ಆದರೆ, ಪಾಕಿಸ್ತಾನದ ಸಂವಿಧಾನ, ಆ ದೇಶದ ಉನ್ನತ ಸಾಂವಿಧಾನಿಕ ಹುದ್ದೆಗಳನ್ನು ಒಂದೇ ಸಮುದಾಯದ ಸದಸ್ಯರಿಗಷ್ಟೇ ನಿರ್ಬಂಧಿಸಿದೆ’ ಎಂದು ಹೇಳಿದರು. </p>.<p>ಒವೈಸಿ ಅವರ ಈ ಹೇಳಿಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಬಿಜೆಪಿ ಸಂಸದ ಅನಿಲ್ ಬೋಂಡೆ, ‘ಒವೈಸಿ ಬೇಜವಾದ್ದಾರಿತನದ ಹೇಳಿಕೆ ನೀಡಿದ್ದಾರೆ. ಇರಾನ್ನಲ್ಲಿ ಮಹಿಳೆಯರು ಹಿಜಾಬ್ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ. ಇದೊಂದು ಬಲವಂತದ ಹೇರಿಕೆ. ಆದ್ದರಿಂದ ಮುಸ್ಲಿಂ ಮಹಿಳೆಯರೂ ಹಿಜಾಬ್ ಅನ್ನು ವಿರೋಧಿಸುತ್ತಾರೆ’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>