ಈ ಕಾನೂನಿನ ಕರಡು ಪ್ರತಿ ಮೇಲಿನ ಸಭೆಯ ನಂತರ ಸುಖು ಮಾತನಾಡಿ, ‘ಯುವ ಪೀಳಿಗೆ ಮೊಬೈಲ್ ಫೋನ್ಗಳಿಗೆ ಅಂಟಿಕೊಂಡಿದೆ. ಇದು ಅವರನ್ನು ಮಾದಕ ವ್ಯಸನಕ್ಕೆ ಆಕರ್ಷಣೆಗೊಳ್ಳಲು ಕಾರಣವಾಗುತ್ತಿದೆ’ ಎಂದರು.
‘ಯುವಕರು ಮಾದಕ ವ್ಯಸನಕ್ಕೆ ಬಲಿಯಾಗುವುದನ್ನು ತಪ್ಪಿಸಲು ನಮ್ಮ ಸರಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿದ್ದು, ರಾಷ್ಟ್ರೀಯ ಸಂಸ್ಥೆಯ ಬೆಂಬಲದೊಂದಿಗೆ ಅತ್ಯಾಧುನಿಕ ಮಾದಕ ವ್ಯಸನ ಮುಕ್ತಿ ಮತ್ತು ಪುನರ್ವಸತಿ ಕೇಂದ್ರಗಳನ್ನು ಸ್ಥಾಪಿಸಲಾಗುವುದು‘ ಎಂದು ಹೇಳಿದರು.
ಈ ಗುರಿಯನ್ನು ಸಾಧಿಸಲು ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನಗಳ ಕೇಂದ್ರಕ್ಕಾಗಿ ಅಂದಾಜು ಭೂಮಿಯನ್ನು ಗುರುತಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಮಾದಕ ವ್ಯಸನಿಗಳಿಗಷ್ಟೇ ಅಲ್ಲದೆ, ಕೈದಿಗಳಿಗೆ ಕೂಡ ವೃತ್ತಿಪರ ತರಬೇತಿ ನೀಡುವ ಉದ್ದೇಶದಿಂದ ಈ ಕೇಂದ್ರ ಕಾರ್ಯ ನಿರ್ವಹಿಸುತ್ತದೆ ಎಂದರು.
ಈ ಮೂಲಕ ವ್ಯಸನಿಗಳ ಕಳೆದುಹೋದ ಆತ್ಮವಿಶ್ವಾಸವನ್ನು ಹೆಚ್ಚಿಸುವ ಕಾರ್ಯವಾಗುತ್ತದೆ. ಇಲ್ಲಿ ಜೀವನದ ಪ್ರಗತಿಗೆ ಮಾರ್ಗದರ್ಶನ ನೀಡಲಾಗುತ್ತದೆ. ಇದರಿಂದ ಆ ವ್ಯಕ್ತಿಗಳು ಸಾಮಾನ್ಯ ಜೀವನಕ್ಕೆ ಮರಳಲು ಹಾಗೂ ಸಮಾಜದೊಂದಿಗೆ ಸಂಪರ್ಕಿಸಲು ಸಾಧ್ಯವಾಗುತ್ತದೆ‘ ಎಂಬ ಆಶಯವನ್ನು ಸುಖು ವ್ಯಕ್ತಪಡಿಸಿದರು.