<p><strong>ಶಿಮ್ಲಾ</strong>: ಹಿಮಾಚಲ ಪ್ರದೇಶದ ಬಿಲಾಸ್ಪುರ ಜಿಲ್ಲೆಯಲ್ಲಿ ಖಾಸಗಿ ಬಸ್ ಮೇಲೆ ಭಾರಿ ಭೂಕುಸಿತ ಸಂಭವಿಸಿದ್ದು, ಕನಿಷ್ಠ 15 ಪ್ರಯಾಣಿಕರು ಸಾವಿಗೀಡಾಗಿದ್ದಾರೆ. ಕೆಲವು ಮಂದಿ ಮಣ್ಣಿನಡಿ ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. </p><p>ಮಂಗಳವಾರ ಸಂಜೆ 6.40ರ ಸುಮಾರಿಗೆ ಬರ್ಥಿನ್ ಬಳಿಯ ಭಾಲುಘಾಟ್ ಪ್ರದೇಶದಲ್ಲಿ ಪರ್ವತದ ದೊಡ್ಡ ಭಾಗವು ಕುಸಿದು ಸುಮಾರು 25 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ಮೇಲೆ ಬಿದ್ದು ಈ ದುರಂತ ಸಂಭವಿಸಿದೆ. ಬಸ್ ಮರೋಟನ್ನಿಂದ ಘುಮಾರ್ವಿನ್ಗೆ ತೆರಳುತ್ತಿತ್ತು ಎಂದು ಅವರು ಹೇಳಿದ್ದಾರೆ.</p><p>ಇಲ್ಲಿಯವರೆಗೆ ಹದಿನೈದು ಶವಗಳನ್ನು ಹೊರತೆಗೆಯಲಾಗಿದೆ. ಒಂದು ಮಗು ಸೇರಿದಂತೆ ಕೆಲವು ಜನರು ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ಅವರು ಬದುಕುಳಿದಿರುವ ಭರವಸೆ ಕ್ಷೀಣಿಸುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. </p><p>ಮೃತರನ್ನು ನಕ್ಷ್, ಆರವ್, ಸಂಜೀವ್, ವಿಮ್ಲಾ, ಕಮಲೇಶ್, ಕಾಂತಾ ದೇವಿ, ಅಂಜನಾ, ಬಕ್ಷಿ ರಾಮ್, ನರೇಂದ್ರ ಶರ್ಮಾ, ಕ್ರಿಶನ್ ಲಾಲ್, ಚುನಿ ಲಾಲ್, ರಜನೀಶ್, ಸೋನು, ಷರೀಫ್ ಖಾನ್ ಮತ್ತು ಪ್ರವೀಣ್ ಕುಮಾರ್ ಎಂದು ಗುರುತಿಸಲಾಗಿದೆ.</p><p>ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ. ಗಾಯಾಳುಗಳು ಬಿಲಾಸ್ಪುರದ ಏಮ್ಸ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p><p>ಕುಲ್ಲು ದಸರಾದಲ್ಲಿ ಭಾಗವಹಿಸಿದ್ದ ಉಪಮುಖ್ಯಮಂತ್ರಿ ಮುಖೇಶ್ ಅಗ್ನಿಹೋತ್ರಿ, ತಡರಾತ್ರಿ ಕುಲ್ಲುವಿನಿಂದ ಬಿಲಾಸ್ಪುರಕ್ಕೆ ತಲುಪಿ ಅಪಘಾತ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆಗಳನ್ನು ಪರಿಶೀಲಿಸಿದರು.</p><p>ಕಳೆದ ಎರಡು ದಿನಗಳಿಂದ ಮಳೆಯಾಗುತ್ತಿದ್ದು, ಮಳೆಯ ನಂತರ ಪರ್ವತ ಕುಸಿದು ಈ ಅಪಘಾತ ಸಂಭವಿಸಿರುವುದು ಸ್ಪಷ್ಟವಾಗಿದೆ. ಆದರೆ, ಘಟನೆಯ ಬಗ್ಗೆ ಮ್ಯಾಜಿಸ್ಟೀರಿಯಲ್ ತನಿಖೆಗೆ ಆದೇಶಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಹೇಳಿದರು.</p><p>ಹಿಮಾಚಲವು ಗುಡ್ಡಗಾಡು ರಾಜ್ಯವಾಗಿದ್ದು, ದೊಡ್ಡ ರಸ್ತೆಗಳು, ಸೇತುವೆಗಳು ಮತ್ತು ಸುರಂಗಗಳ ನಿರ್ಮಾಣ ನಡೆಯುತ್ತಿದೆ. ಪ್ರಸ್ತುತ ಅಭಿವೃದ್ಧಿ ಮಾದರಿ ಸುಸ್ಥಿರವಾಗಿದೆಯೇ ಅಥವಾ ಇಲ್ಲವೇ ಎಂಬುದನ್ನು ಪರಿಶೀಲಿಸುವ ಅವಶ್ಯಕತೆಯಿದೆ ಎಂದು ಅವರು ಹೇಳಿದರು.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿಮ್ಲಾ</strong>: ಹಿಮಾಚಲ ಪ್ರದೇಶದ ಬಿಲಾಸ್ಪುರ ಜಿಲ್ಲೆಯಲ್ಲಿ ಖಾಸಗಿ ಬಸ್ ಮೇಲೆ ಭಾರಿ ಭೂಕುಸಿತ ಸಂಭವಿಸಿದ್ದು, ಕನಿಷ್ಠ 15 ಪ್ರಯಾಣಿಕರು ಸಾವಿಗೀಡಾಗಿದ್ದಾರೆ. ಕೆಲವು ಮಂದಿ ಮಣ್ಣಿನಡಿ ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. </p><p>ಮಂಗಳವಾರ ಸಂಜೆ 6.40ರ ಸುಮಾರಿಗೆ ಬರ್ಥಿನ್ ಬಳಿಯ ಭಾಲುಘಾಟ್ ಪ್ರದೇಶದಲ್ಲಿ ಪರ್ವತದ ದೊಡ್ಡ ಭಾಗವು ಕುಸಿದು ಸುಮಾರು 25 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ಮೇಲೆ ಬಿದ್ದು ಈ ದುರಂತ ಸಂಭವಿಸಿದೆ. ಬಸ್ ಮರೋಟನ್ನಿಂದ ಘುಮಾರ್ವಿನ್ಗೆ ತೆರಳುತ್ತಿತ್ತು ಎಂದು ಅವರು ಹೇಳಿದ್ದಾರೆ.</p><p>ಇಲ್ಲಿಯವರೆಗೆ ಹದಿನೈದು ಶವಗಳನ್ನು ಹೊರತೆಗೆಯಲಾಗಿದೆ. ಒಂದು ಮಗು ಸೇರಿದಂತೆ ಕೆಲವು ಜನರು ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ಅವರು ಬದುಕುಳಿದಿರುವ ಭರವಸೆ ಕ್ಷೀಣಿಸುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. </p><p>ಮೃತರನ್ನು ನಕ್ಷ್, ಆರವ್, ಸಂಜೀವ್, ವಿಮ್ಲಾ, ಕಮಲೇಶ್, ಕಾಂತಾ ದೇವಿ, ಅಂಜನಾ, ಬಕ್ಷಿ ರಾಮ್, ನರೇಂದ್ರ ಶರ್ಮಾ, ಕ್ರಿಶನ್ ಲಾಲ್, ಚುನಿ ಲಾಲ್, ರಜನೀಶ್, ಸೋನು, ಷರೀಫ್ ಖಾನ್ ಮತ್ತು ಪ್ರವೀಣ್ ಕುಮಾರ್ ಎಂದು ಗುರುತಿಸಲಾಗಿದೆ.</p><p>ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ. ಗಾಯಾಳುಗಳು ಬಿಲಾಸ್ಪುರದ ಏಮ್ಸ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p><p>ಕುಲ್ಲು ದಸರಾದಲ್ಲಿ ಭಾಗವಹಿಸಿದ್ದ ಉಪಮುಖ್ಯಮಂತ್ರಿ ಮುಖೇಶ್ ಅಗ್ನಿಹೋತ್ರಿ, ತಡರಾತ್ರಿ ಕುಲ್ಲುವಿನಿಂದ ಬಿಲಾಸ್ಪುರಕ್ಕೆ ತಲುಪಿ ಅಪಘಾತ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆಗಳನ್ನು ಪರಿಶೀಲಿಸಿದರು.</p><p>ಕಳೆದ ಎರಡು ದಿನಗಳಿಂದ ಮಳೆಯಾಗುತ್ತಿದ್ದು, ಮಳೆಯ ನಂತರ ಪರ್ವತ ಕುಸಿದು ಈ ಅಪಘಾತ ಸಂಭವಿಸಿರುವುದು ಸ್ಪಷ್ಟವಾಗಿದೆ. ಆದರೆ, ಘಟನೆಯ ಬಗ್ಗೆ ಮ್ಯಾಜಿಸ್ಟೀರಿಯಲ್ ತನಿಖೆಗೆ ಆದೇಶಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಹೇಳಿದರು.</p><p>ಹಿಮಾಚಲವು ಗುಡ್ಡಗಾಡು ರಾಜ್ಯವಾಗಿದ್ದು, ದೊಡ್ಡ ರಸ್ತೆಗಳು, ಸೇತುವೆಗಳು ಮತ್ತು ಸುರಂಗಗಳ ನಿರ್ಮಾಣ ನಡೆಯುತ್ತಿದೆ. ಪ್ರಸ್ತುತ ಅಭಿವೃದ್ಧಿ ಮಾದರಿ ಸುಸ್ಥಿರವಾಗಿದೆಯೇ ಅಥವಾ ಇಲ್ಲವೇ ಎಂಬುದನ್ನು ಪರಿಶೀಲಿಸುವ ಅವಶ್ಯಕತೆಯಿದೆ ಎಂದು ಅವರು ಹೇಳಿದರು.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>