<p><strong>ಶಿಮ್ಲಾ</strong>: ಹಿಮಾಚಲ ಪ್ರದೇಶದ ಮಂಡಿ ಜಿಲ್ಲೆಯಲ್ಲಿ ಭಾರಿ ಮಳೆಯಾಗಿದ್ದು, ದಿಢೀರ್ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಮಳೆ ಸಂಬಂಧಿತ ಅವಘಡಗಳಲ್ಲಿ ಮೂವರು ಮೃತಪಟ್ಟಿದ್ದು, ಹಲವರು ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.</p><p>ಮಂಡಿ ಜಿಲ್ಲೆಯಲ್ಲಿ ನದಿಗಳು ಉಕ್ಕಿ ಹರಿಯುತ್ತಿವೆ. ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಯಿಂದಾಗಿ ರಸ್ತೆಗಳು ಕೊಚ್ಚಿಹೋಗಿವೆ. ಸಂಚಾರ ಸೇರಿದಂತೆ ಜನಜೀವನ ಅಸ್ತವ್ಯಸ್ತವಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.</p>.ರಮ್ಯಾ ವಿರುದ್ಧ ಅಶ್ಲೀಲ ಸಂದೇಶ: ಗೃಹ ಸಚಿವ ಪರಮೇಶ್ವರ ಪ್ರತಿಕ್ರಿಯೆ ಏನು?.ರಾಜ್ಯ ರಾಜಕಾರಣಕ್ಕೆ ಖರ್ಗೆ ಬಂದರೆ ತಪ್ಪು ಭಾವಿಸುವ ಅಗತ್ಯ ಇಲ್ಲ: ಜಿ. ಪರಮೇಶ್ವರ. <p>ಮಳೆ ಸಂಬಂಧಿತ ಅವಘಡಗಳಲ್ಲಿ ಮೂವರು ಮೃತಪಟ್ಟಿದ್ದು ಒಬ್ಬರು ಗಾಯಗೊಂಡಿದ್ದಾರೆ. ಪ್ರವಾಹ ಪೀಡತ ಪ್ರದೇಶಗಳಲ್ಲಿ ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದ್ದು, ಜನರನ್ನು ಸುರಕ್ಷಿತ ಸ್ಥಳಗಳಿಗೆ ರವಾನಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ಏತನ್ಮಧ್ಯೆ, ನಿರಂತರ ಮಳೆಯಿಂದ ಶಿಮ್ಲಾ-ಮತೌರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿದೆ. ಹಳೆಯ ಕಾಂಗ್ರಾ ಘಾಟ್ನಲ್ಲಿ ಸಂಚಾರ ನಿರ್ಬಂಧಿಸಲಾಗಿದೆ. ರಾಜ್ಯದ ಹಲವಾರು ಭಾಗಗಳಲ್ಲಿ ಮರಗಳು ಮತ್ತು ವಿದ್ಯುತ್ ತಂತಿಗಳು ಉರುಳಿದ ಬಿದ್ದಿರುವ ವರದಿಗಳು ಬಂದಿವೆ ಎಂದು ಅಧಿಕಾರಿಗಳು ಹೇಳಿದ್ದಾರೆ.</p>.ಸಿಂಧೂರ ಚರ್ಚೆಗೆ ಸಿಗದ ಅವಕಾಶ: ಚಿತ್ರಗೀತೆಯ ಸಾಲು ಹಂಚಿಕೊಂಡ ಕಾಂಗ್ರೆಸ್ನ ಮನೀಶ್.ನಿಕೋಬಾರ್ ದ್ವೀಪದಲ್ಲಿ 6.5 ತೀವ್ರತೆಯ ಭೂಕಂಪ . <p>ಜೂನ್ 20ರಂದು ಮನ್ಸೂನ್ ಆರಂಭವಾಗಿದ್ದರಿಂದ ಜುಲೈ 28ರವರೆಗೆ ರಾಜ್ಯದಲ್ಲಿ ಮಳೆ ಸಂಬಂಧಿತ ಅವಘಡಗಳಲ್ಲಿ 90ಕ್ಕೂ ಜನರು ಮೃತಪಟ್ಟಿದ್ದು, 35ಕ್ಕೂ ಹೆಚ್ಚು ಮಂದಿ ಕಾಣೆಯಾಗಿದ್ದಾರೆ. ರಾಜ್ಯದ ಸಾವಿರಾರೂ ಮನೆಗಳು ಸಂಪೂರ್ಣವಾಗಿ ಹಾನಿಗೆ ಒಳಗಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.'ಆಪರೇಷನ್ ಸಿಂಧೂರ' ಮತ ಸೆಳೆಯುವ ತಂತ್ರವಷ್ಟೇ: ಕಾಂಗ್ರೆಸ್ ಸಂಸದೆ ಪ್ರಣಿತಿ .‘ಆಪರೇಷನ್ ಸಿಂಧೂರ’ ಚರ್ಚೆಯಲ್ಲಿ ಶಶಿ ತರೂರ್ ಮೌನ ವ್ರತ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿಮ್ಲಾ</strong>: ಹಿಮಾಚಲ ಪ್ರದೇಶದ ಮಂಡಿ ಜಿಲ್ಲೆಯಲ್ಲಿ ಭಾರಿ ಮಳೆಯಾಗಿದ್ದು, ದಿಢೀರ್ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಮಳೆ ಸಂಬಂಧಿತ ಅವಘಡಗಳಲ್ಲಿ ಮೂವರು ಮೃತಪಟ್ಟಿದ್ದು, ಹಲವರು ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.</p><p>ಮಂಡಿ ಜಿಲ್ಲೆಯಲ್ಲಿ ನದಿಗಳು ಉಕ್ಕಿ ಹರಿಯುತ್ತಿವೆ. ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಯಿಂದಾಗಿ ರಸ್ತೆಗಳು ಕೊಚ್ಚಿಹೋಗಿವೆ. ಸಂಚಾರ ಸೇರಿದಂತೆ ಜನಜೀವನ ಅಸ್ತವ್ಯಸ್ತವಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.</p>.ರಮ್ಯಾ ವಿರುದ್ಧ ಅಶ್ಲೀಲ ಸಂದೇಶ: ಗೃಹ ಸಚಿವ ಪರಮೇಶ್ವರ ಪ್ರತಿಕ್ರಿಯೆ ಏನು?.ರಾಜ್ಯ ರಾಜಕಾರಣಕ್ಕೆ ಖರ್ಗೆ ಬಂದರೆ ತಪ್ಪು ಭಾವಿಸುವ ಅಗತ್ಯ ಇಲ್ಲ: ಜಿ. ಪರಮೇಶ್ವರ. <p>ಮಳೆ ಸಂಬಂಧಿತ ಅವಘಡಗಳಲ್ಲಿ ಮೂವರು ಮೃತಪಟ್ಟಿದ್ದು ಒಬ್ಬರು ಗಾಯಗೊಂಡಿದ್ದಾರೆ. ಪ್ರವಾಹ ಪೀಡತ ಪ್ರದೇಶಗಳಲ್ಲಿ ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದ್ದು, ಜನರನ್ನು ಸುರಕ್ಷಿತ ಸ್ಥಳಗಳಿಗೆ ರವಾನಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ಏತನ್ಮಧ್ಯೆ, ನಿರಂತರ ಮಳೆಯಿಂದ ಶಿಮ್ಲಾ-ಮತೌರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿದೆ. ಹಳೆಯ ಕಾಂಗ್ರಾ ಘಾಟ್ನಲ್ಲಿ ಸಂಚಾರ ನಿರ್ಬಂಧಿಸಲಾಗಿದೆ. ರಾಜ್ಯದ ಹಲವಾರು ಭಾಗಗಳಲ್ಲಿ ಮರಗಳು ಮತ್ತು ವಿದ್ಯುತ್ ತಂತಿಗಳು ಉರುಳಿದ ಬಿದ್ದಿರುವ ವರದಿಗಳು ಬಂದಿವೆ ಎಂದು ಅಧಿಕಾರಿಗಳು ಹೇಳಿದ್ದಾರೆ.</p>.ಸಿಂಧೂರ ಚರ್ಚೆಗೆ ಸಿಗದ ಅವಕಾಶ: ಚಿತ್ರಗೀತೆಯ ಸಾಲು ಹಂಚಿಕೊಂಡ ಕಾಂಗ್ರೆಸ್ನ ಮನೀಶ್.ನಿಕೋಬಾರ್ ದ್ವೀಪದಲ್ಲಿ 6.5 ತೀವ್ರತೆಯ ಭೂಕಂಪ . <p>ಜೂನ್ 20ರಂದು ಮನ್ಸೂನ್ ಆರಂಭವಾಗಿದ್ದರಿಂದ ಜುಲೈ 28ರವರೆಗೆ ರಾಜ್ಯದಲ್ಲಿ ಮಳೆ ಸಂಬಂಧಿತ ಅವಘಡಗಳಲ್ಲಿ 90ಕ್ಕೂ ಜನರು ಮೃತಪಟ್ಟಿದ್ದು, 35ಕ್ಕೂ ಹೆಚ್ಚು ಮಂದಿ ಕಾಣೆಯಾಗಿದ್ದಾರೆ. ರಾಜ್ಯದ ಸಾವಿರಾರೂ ಮನೆಗಳು ಸಂಪೂರ್ಣವಾಗಿ ಹಾನಿಗೆ ಒಳಗಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.'ಆಪರೇಷನ್ ಸಿಂಧೂರ' ಮತ ಸೆಳೆಯುವ ತಂತ್ರವಷ್ಟೇ: ಕಾಂಗ್ರೆಸ್ ಸಂಸದೆ ಪ್ರಣಿತಿ .‘ಆಪರೇಷನ್ ಸಿಂಧೂರ’ ಚರ್ಚೆಯಲ್ಲಿ ಶಶಿ ತರೂರ್ ಮೌನ ವ್ರತ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>