<p><strong>ಶಿಮ್ಲಾ</strong>: ಹಿಮಾಚಲ ಪ್ರದೇಶದ ಗ್ರಾಮೀಣ ಭಾಗದಲ್ಲಿ ನೀರಿನ ಉಚಿತ ಸೌಲಭ್ಯ ಪಡೆಯುತ್ತಿದ್ದ ನಿವಾಸಿಗಳಿಗೆ ಸರ್ಕಾರದ ಹೊಸ ಆದೇಶ ಬಿಸಿ ತಟ್ಟಿದೆ.</p>.<p>ವಾರ್ಷಿಕ ₹50 ಸಾವಿರ ಆದಾಯ ಹೊಂದಿದ್ದರೆ, ಮಾಸಿಕ ₹100 ನೀರಿನ ಶುಲ್ಕ ಪಾವತಿಸಬೇಕು ಎಂದು ಸರ್ಕಾರ ತಿಳಿಸಿದೆ. ವಾಣಿಜ್ಯ ವಹಿವಾಟು ನಡೆಸುವವರು ಕಿಲೋ ಲೀಟರ್ಗೆ ತಕ್ಕಂತೆ ಶುಲ್ಕ ಪಾವತಿಸಬೇಕು ಎಂದು ಸ್ಪಷ್ಟಪಡಿಸಿದೆ.</p>.<p>‘ಸಬ್ಸಿಡಿಯನ್ನು ಕಡಿತಗೊಳಿಸಿ, ಆದಾಯ ಹೆಚ್ಚಿಸುವ ನಿಟ್ಟಿನಲ್ಲಿ ರಾಜ್ಯ ಸಚಿವ ಸಂಪುಟವು ಈ ನಿರ್ಧಾರ ತೆಗೆದುಕೊಂಡಿದೆ. ಹೋಟೆಲ್, ಹೋಮ್ಸ್ಟೆ ಸೇರಿದಂತೆ ವಾಣಿಜ್ಯ ಸಂಸ್ಥೆಗಳಿಗೆ ಮೀಟರ್ ಅಳವಡಿಸಿ, ವಾಣಿಜ್ಯ ದರದಲ್ಲಿ ನೀರು ಪೂರೈಸಲಾಗುವುದು. ಜನರಿಂದ ಸಂಗ್ರಹವಾಗುವ ಹಣವನ್ನು ಗುಣಮಟ್ಟದ ಕುಡಿಯುವ ನೀರು ಪೂರೈಕೆಗೆ ಬಳಸಿಕೊಳ್ಳಲಾಗುವುದು’ ಎಂದು ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು ತಿಳಿಸಿದರು.</p>.<p>‘ವಿಧವೆಯರು, ಕಡುಬಡವರು, ಅಂಗವಿಕಲರು ಹಾಗೂ ಆರ್ಥಿಕವಾಗಿ ದುರ್ಬಲ ಸಮುದಾಯಗಳಿಗೆ ಉಚಿತ ಸೌಲಭ್ಯ ಮುಂದುವರಿಯಲಿದೆ’ ಎಂದು ವಿವರಿಸಿದರು.</p>.<p>‘2022ರ ಮೇ ತಿಂಗಳಲ್ಲಿ ಹಿಂದಿನ ಬಿಜೆಪಿ ಸರ್ಕಾರವು ಗ್ರಾಮೀಣ ಭಾಗದ ನಿವಾಸಿಗಳಿಗೆ ಉಚಿತವಾಗಿ ನೀರು ಪೂರೈಸಲು ಕ್ರಮ ಕೈಗೊಂಡಿತ್ತು. ಇದರಿಂದ ಸರ್ಕಾರಕ್ಕೆ ವಾರ್ಷಿಕ ₹800 ಕೋಟಿ ಆದಾಯ ನಷ್ಟ ಉಂಟಾಗುತ್ತಿತ್ತು’ ಎಂದು ಅಧಿಕಾರಿಯೊಬ್ಬರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿಮ್ಲಾ</strong>: ಹಿಮಾಚಲ ಪ್ರದೇಶದ ಗ್ರಾಮೀಣ ಭಾಗದಲ್ಲಿ ನೀರಿನ ಉಚಿತ ಸೌಲಭ್ಯ ಪಡೆಯುತ್ತಿದ್ದ ನಿವಾಸಿಗಳಿಗೆ ಸರ್ಕಾರದ ಹೊಸ ಆದೇಶ ಬಿಸಿ ತಟ್ಟಿದೆ.</p>.<p>ವಾರ್ಷಿಕ ₹50 ಸಾವಿರ ಆದಾಯ ಹೊಂದಿದ್ದರೆ, ಮಾಸಿಕ ₹100 ನೀರಿನ ಶುಲ್ಕ ಪಾವತಿಸಬೇಕು ಎಂದು ಸರ್ಕಾರ ತಿಳಿಸಿದೆ. ವಾಣಿಜ್ಯ ವಹಿವಾಟು ನಡೆಸುವವರು ಕಿಲೋ ಲೀಟರ್ಗೆ ತಕ್ಕಂತೆ ಶುಲ್ಕ ಪಾವತಿಸಬೇಕು ಎಂದು ಸ್ಪಷ್ಟಪಡಿಸಿದೆ.</p>.<p>‘ಸಬ್ಸಿಡಿಯನ್ನು ಕಡಿತಗೊಳಿಸಿ, ಆದಾಯ ಹೆಚ್ಚಿಸುವ ನಿಟ್ಟಿನಲ್ಲಿ ರಾಜ್ಯ ಸಚಿವ ಸಂಪುಟವು ಈ ನಿರ್ಧಾರ ತೆಗೆದುಕೊಂಡಿದೆ. ಹೋಟೆಲ್, ಹೋಮ್ಸ್ಟೆ ಸೇರಿದಂತೆ ವಾಣಿಜ್ಯ ಸಂಸ್ಥೆಗಳಿಗೆ ಮೀಟರ್ ಅಳವಡಿಸಿ, ವಾಣಿಜ್ಯ ದರದಲ್ಲಿ ನೀರು ಪೂರೈಸಲಾಗುವುದು. ಜನರಿಂದ ಸಂಗ್ರಹವಾಗುವ ಹಣವನ್ನು ಗುಣಮಟ್ಟದ ಕುಡಿಯುವ ನೀರು ಪೂರೈಕೆಗೆ ಬಳಸಿಕೊಳ್ಳಲಾಗುವುದು’ ಎಂದು ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು ತಿಳಿಸಿದರು.</p>.<p>‘ವಿಧವೆಯರು, ಕಡುಬಡವರು, ಅಂಗವಿಕಲರು ಹಾಗೂ ಆರ್ಥಿಕವಾಗಿ ದುರ್ಬಲ ಸಮುದಾಯಗಳಿಗೆ ಉಚಿತ ಸೌಲಭ್ಯ ಮುಂದುವರಿಯಲಿದೆ’ ಎಂದು ವಿವರಿಸಿದರು.</p>.<p>‘2022ರ ಮೇ ತಿಂಗಳಲ್ಲಿ ಹಿಂದಿನ ಬಿಜೆಪಿ ಸರ್ಕಾರವು ಗ್ರಾಮೀಣ ಭಾಗದ ನಿವಾಸಿಗಳಿಗೆ ಉಚಿತವಾಗಿ ನೀರು ಪೂರೈಸಲು ಕ್ರಮ ಕೈಗೊಂಡಿತ್ತು. ಇದರಿಂದ ಸರ್ಕಾರಕ್ಕೆ ವಾರ್ಷಿಕ ₹800 ಕೋಟಿ ಆದಾಯ ನಷ್ಟ ಉಂಟಾಗುತ್ತಿತ್ತು’ ಎಂದು ಅಧಿಕಾರಿಯೊಬ್ಬರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>