<p><strong>ಹಿಮಾಚಲ ಪ್ರದೇಶ</strong>: ಹಿಮಾಚಲ ಪ್ರದೇಶದ ಕೆಲವು ಭಾಗಗಳಲ್ಲಿ ಗುರುವಾರ ಮಳೆಯಾಗಿದ್ದು, ಶಿಮ್ಲಾದ ರಾಂಪುರದಲ್ಲಿ ಸಂಭವಿಸಿದ ಮೇಘ ಸ್ಪೋಟದಿಂದಾಗಿ ಆ ಪ್ರದೇಶದಲ್ಲಿ ಹಠಾತ್ ಪ್ರವಾಹ ಸಂಭವಿಸಿದೆ. ಭೂಕುಸಿತದಿಂದಾಗಿ ಮೂರು ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ರಾಜ್ಯದ ಹಲವಾರು ಪ್ರದೇಶಗಳ 496 ರಸ್ತೆಗಳನ್ನು ಮುಚ್ಚಲಾಗಿದೆ.</p>.<p>ಬುಧವಾರ ರಾತ್ರಿ ಶಿಮ್ಲಾ ಜಿಲ್ಲೆಯ ರಾಂಪುರದ ದರ್ಶಲ್ನಲ್ಲಿ ಸಂಭವಿಸಿದ ಮೇಘ ಸ್ಪೋಟದಿಂದಾಗಿ ಟೆಕ್ಲೆಚ್ ಮಾರುಕಟ್ಟೆಯಲ್ಲಿ ಹಠಾತ್ ಪ್ರವಾಹ ಉಂಟಾಗಿದೆ. ಆದರೆ, ಸಂಭವನೀಯ ಅಪಾಯದ ಬಗ್ಗೆ ಎಚ್ಚರಿಕೆವಹಿಸಿ ಸುತ್ತಮುತ್ತಲಿನ ನಿವಾಸಿಗಳನ್ನು ಸ್ಥಳಾಂತರಿಸಿದ್ದರಿಂದ ಯಾವುದೇ ಸಾವು–ನೋವು ವರದಿಯಾಗಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.</p>.<p>ಜೂನ್ 20ರ ನಂತರ ಈವರೆಗೆ ಮಳೆ ಸಂಬಂಧಿತ ಘಟನೆಗಳಲ್ಲಿ ಸುಮಾರು 108 ಜನರು ಮೃತಪಟ್ಟಿದ್ದು, 26 ಜನರು ನಾಪತ್ತೆಯಾಗಿದ್ದಾರೆ. ಈವರೆಗೆ 58 ಹಠಾತ್ ಪ್ರವಾಹ, 28 ಮೇಘಸ್ಟೋಟ ಮತ್ತು 51 ಭಾರಿ ಭೂಕುಸಿತ ಘಟನೆಗಳು ಸಂಭವಿಸಿದೆ. ಮಳೆಯಿಂದಾಗಿ ರಾಜ್ಯದಲ್ಲಿ ₹1,905 ಕೋಟಿ ಆಸ್ತಿ–ಪಾಸ್ತಿ ನಷ್ಟವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಿಮಾಚಲ ಪ್ರದೇಶ</strong>: ಹಿಮಾಚಲ ಪ್ರದೇಶದ ಕೆಲವು ಭಾಗಗಳಲ್ಲಿ ಗುರುವಾರ ಮಳೆಯಾಗಿದ್ದು, ಶಿಮ್ಲಾದ ರಾಂಪುರದಲ್ಲಿ ಸಂಭವಿಸಿದ ಮೇಘ ಸ್ಪೋಟದಿಂದಾಗಿ ಆ ಪ್ರದೇಶದಲ್ಲಿ ಹಠಾತ್ ಪ್ರವಾಹ ಸಂಭವಿಸಿದೆ. ಭೂಕುಸಿತದಿಂದಾಗಿ ಮೂರು ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ರಾಜ್ಯದ ಹಲವಾರು ಪ್ರದೇಶಗಳ 496 ರಸ್ತೆಗಳನ್ನು ಮುಚ್ಚಲಾಗಿದೆ.</p>.<p>ಬುಧವಾರ ರಾತ್ರಿ ಶಿಮ್ಲಾ ಜಿಲ್ಲೆಯ ರಾಂಪುರದ ದರ್ಶಲ್ನಲ್ಲಿ ಸಂಭವಿಸಿದ ಮೇಘ ಸ್ಪೋಟದಿಂದಾಗಿ ಟೆಕ್ಲೆಚ್ ಮಾರುಕಟ್ಟೆಯಲ್ಲಿ ಹಠಾತ್ ಪ್ರವಾಹ ಉಂಟಾಗಿದೆ. ಆದರೆ, ಸಂಭವನೀಯ ಅಪಾಯದ ಬಗ್ಗೆ ಎಚ್ಚರಿಕೆವಹಿಸಿ ಸುತ್ತಮುತ್ತಲಿನ ನಿವಾಸಿಗಳನ್ನು ಸ್ಥಳಾಂತರಿಸಿದ್ದರಿಂದ ಯಾವುದೇ ಸಾವು–ನೋವು ವರದಿಯಾಗಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.</p>.<p>ಜೂನ್ 20ರ ನಂತರ ಈವರೆಗೆ ಮಳೆ ಸಂಬಂಧಿತ ಘಟನೆಗಳಲ್ಲಿ ಸುಮಾರು 108 ಜನರು ಮೃತಪಟ್ಟಿದ್ದು, 26 ಜನರು ನಾಪತ್ತೆಯಾಗಿದ್ದಾರೆ. ಈವರೆಗೆ 58 ಹಠಾತ್ ಪ್ರವಾಹ, 28 ಮೇಘಸ್ಟೋಟ ಮತ್ತು 51 ಭಾರಿ ಭೂಕುಸಿತ ಘಟನೆಗಳು ಸಂಭವಿಸಿದೆ. ಮಳೆಯಿಂದಾಗಿ ರಾಜ್ಯದಲ್ಲಿ ₹1,905 ಕೋಟಿ ಆಸ್ತಿ–ಪಾಸ್ತಿ ನಷ್ಟವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>