<p><strong>ಶಿಮ್ಲಾ:</strong> ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿರುವ ಹಿಮಾಚಲ ಪ್ರದೇಶ ರಾಜ್ಯ ಸರ್ಕಾರವು, ತನ್ನ ಹಿರಿಯ ಅಧಿಕಾರಿಗಳ ವೇತನದಲ್ಲಿ ಶೇಕಡ 20ರಿಂದ ಶೇ 30ರಷ್ಟನ್ನು ಆರು ತಿಂಗಳವರೆಗೆ ತಡೆಹಿಡಿಯಲು ಆದೇಶ ಹೊರಡಿಸಿದೆ. ಮೇ ತಿಂಗಳಿನಿಂದ ಈ ಕ್ರಮ ಜಾರಿಗೆ ಬರಲಿದೆ. </p>.<p>ಮುಖ್ಯ ಕಾರ್ಯದರ್ಶಿ, ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿ, ಪೋಲಿಸ್ ಮಹಾನಿರ್ದೇಶಕರು, ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಹೆಚ್ಚುವರಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳ ವೇತನದ ಶೇ 30ರಷ್ಟನ್ನು ತಡೆಹಿಡಿಯಲಾಗುತ್ತದೆ.</p>.<p>ಅಲ್ಲದೇ, ಕಾರ್ಯದರ್ಶಿಗಳು, ಇಲಾಖೆಗಳ ಮುಖ್ಯಸ್ಥರು, ಐಜಿಪಿಗಳು, ಡಿಐಜಿಗಳು, ಎಸ್ಪಿಗಳು ಮತ್ತು ಎಸ್ಪಿ ದರ್ಜೆಯ ಅಧಿಕಾರಿಗಳು, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ, ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ದರ್ಜೆವರೆಗಿನ ಎಲ್ಲ ಅಧಿಕಾರಿಗಳ ವೇತನದಲ್ಲಿ ಶೇ 20ರಷ್ಟನ್ನು ತಡೆಹಿಡಿಯಲಾಗುವುದು ಎಂದು ಹಣಕಾಸು ಇಲಾಖೆ ಭಾನುವಾರ ಹೊರಡಿಸಿರುವ ಅಧಿಸೂಚನೆಯಲ್ಲಿ ತಿಳಿಸಿದೆ. </p>.<p>‘ರಾಜ್ಯದ ಆರ್ಥಿಕತೆಯನ್ನು ಸುಧಾರಿಸುವ ನಿಟ್ಟಿನಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಇದು ತಾತ್ಕಾಲಿಕ ಸ್ವರೂಪದ್ದಾಗಿದೆ. ಮುಂದೂಡಲ್ಪಟ್ಟ ವೇತನವನ್ನು ಕಡಿತ ಎಂದು ಪರಿಗಣಿಸಲಾಗುವುದಿಲ್ಲ. ರಾಜ್ಯ ಸರ್ಕಾರದ ಆರ್ಥಿಕ ಸ್ಥಿತಿಯ ಆಧಾರದ ಮೇಲೆ ಮುಂದಿನ ದಿನಗಳಲ್ಲಿ ಬಿಡುಗಡೆ ಮಾಡಲಾಗುವುದು’ ಎಂದು ಇಲಾಖೆ ಹೇಳಿದೆ.</p>.<p class="title">ಪಿಂಚಣಿ, ಭವಿಷ್ಯನಿಧಿ ಸೇರಿದಂತೆ ಎಲ್ಲ ಶಾಸನಬದ್ಧ ಕಟಾವಣೆಗಳು ಯಥಾಸ್ಥಿತಿಯಲ್ಲಿ ಮುಂದುವರಿಯುತ್ತವೆ. ಬ್ಯಾಂಕ್ ಸಾಲದ ಕಂತು ಹೊಂದಿರುವ ಅಧಿಕಾರಿಗಳು ಈ ಕುರಿತು ವೇತನ ಬಟವಾಡೆ ಅಧಿಕಾರಿಗಳಿಗೆ ಪ್ರಮಾಣಪತ್ರ ಸಲ್ಲಿಸಬೇಕು. ಸಾಲದ ಕಂತಿನ ಮೊತ್ತವನ್ನು ಹೊರತುಪಡಿಸಿದ ಬಳಿಕ ವೇತನದಲ್ಲಿ ತಡೆಹಿಡಿಯಲಾಗುವ ಮೊತ್ತವನ್ನು ನಿರ್ಧರಿಸಲಾಗುತ್ತದೆ. ರಾಜ್ಯ ಸರ್ಕಾರದ ಆರ್ಥಿಕ ಸ್ಥಿತಿಯನ್ನು ಆಧರಿಸಿ ತಡೆಹಿಡಿದ ಸಂಪೂರ್ಣ ಮೊತ್ತವನ್ನು ಮುಂದಿನ ದಿನಗಳಲ್ಲಿ ಅಧಿಕಾರಿಗಳಿಗೆ ಪಾವತಿಸಲಾಗುತ್ತದೆ ಎಂದು ಆದೇಶದಲ್ಲಿ ವಿವರಿಸಲಾಗಿದೆ.</p>.<p class="title">2026– 27ನೇ ಆರ್ಥಿಕ ವರ್ಷದ ಬಜೆಟ್ ಮಂಡನೆಯ ವೇಳೆ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಅವರು, ಮುಖ್ಯಮಂತ್ರಿ, ಸಚಿವರು, ಶಾಸಕರು ಮತ್ತು ಅಧಿಕಾರಿಗಳ ವೇತನ ತಡೆಹಿಡಿಯುವ ಕ್ರಮ ಕೈಗೊಳ್ಳುವುದಾಗಿ ಘೋಷಿಸಿದ್ದರು. </p>.<p class="title">ಮುಖ್ಯಮಂತ್ರಿಯ ವೇತನದ ಶೇ 50ರಷ್ಟು, ಸಚಿವರ ವೇತನದ ಶೇ 30ರಷ್ಟು ಮತ್ತು ಶಾಸಕರ ವೇತನದ ಶೇ 20ರಷ್ಟನ್ನು ಆರು ತಿಂಗಳವರೆಗೆ ತಡೆಹಿಡಿಯುವ ಆದೇಶವನ್ನು ಈ ಹಿಂದೆ ಹೊರಡಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿಮ್ಲಾ:</strong> ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿರುವ ಹಿಮಾಚಲ ಪ್ರದೇಶ ರಾಜ್ಯ ಸರ್ಕಾರವು, ತನ್ನ ಹಿರಿಯ ಅಧಿಕಾರಿಗಳ ವೇತನದಲ್ಲಿ ಶೇಕಡ 20ರಿಂದ ಶೇ 30ರಷ್ಟನ್ನು ಆರು ತಿಂಗಳವರೆಗೆ ತಡೆಹಿಡಿಯಲು ಆದೇಶ ಹೊರಡಿಸಿದೆ. ಮೇ ತಿಂಗಳಿನಿಂದ ಈ ಕ್ರಮ ಜಾರಿಗೆ ಬರಲಿದೆ. </p>.<p>ಮುಖ್ಯ ಕಾರ್ಯದರ್ಶಿ, ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿ, ಪೋಲಿಸ್ ಮಹಾನಿರ್ದೇಶಕರು, ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಹೆಚ್ಚುವರಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳ ವೇತನದ ಶೇ 30ರಷ್ಟನ್ನು ತಡೆಹಿಡಿಯಲಾಗುತ್ತದೆ.</p>.<p>ಅಲ್ಲದೇ, ಕಾರ್ಯದರ್ಶಿಗಳು, ಇಲಾಖೆಗಳ ಮುಖ್ಯಸ್ಥರು, ಐಜಿಪಿಗಳು, ಡಿಐಜಿಗಳು, ಎಸ್ಪಿಗಳು ಮತ್ತು ಎಸ್ಪಿ ದರ್ಜೆಯ ಅಧಿಕಾರಿಗಳು, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ, ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ದರ್ಜೆವರೆಗಿನ ಎಲ್ಲ ಅಧಿಕಾರಿಗಳ ವೇತನದಲ್ಲಿ ಶೇ 20ರಷ್ಟನ್ನು ತಡೆಹಿಡಿಯಲಾಗುವುದು ಎಂದು ಹಣಕಾಸು ಇಲಾಖೆ ಭಾನುವಾರ ಹೊರಡಿಸಿರುವ ಅಧಿಸೂಚನೆಯಲ್ಲಿ ತಿಳಿಸಿದೆ. </p>.<p>‘ರಾಜ್ಯದ ಆರ್ಥಿಕತೆಯನ್ನು ಸುಧಾರಿಸುವ ನಿಟ್ಟಿನಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಇದು ತಾತ್ಕಾಲಿಕ ಸ್ವರೂಪದ್ದಾಗಿದೆ. ಮುಂದೂಡಲ್ಪಟ್ಟ ವೇತನವನ್ನು ಕಡಿತ ಎಂದು ಪರಿಗಣಿಸಲಾಗುವುದಿಲ್ಲ. ರಾಜ್ಯ ಸರ್ಕಾರದ ಆರ್ಥಿಕ ಸ್ಥಿತಿಯ ಆಧಾರದ ಮೇಲೆ ಮುಂದಿನ ದಿನಗಳಲ್ಲಿ ಬಿಡುಗಡೆ ಮಾಡಲಾಗುವುದು’ ಎಂದು ಇಲಾಖೆ ಹೇಳಿದೆ.</p>.<p class="title">ಪಿಂಚಣಿ, ಭವಿಷ್ಯನಿಧಿ ಸೇರಿದಂತೆ ಎಲ್ಲ ಶಾಸನಬದ್ಧ ಕಟಾವಣೆಗಳು ಯಥಾಸ್ಥಿತಿಯಲ್ಲಿ ಮುಂದುವರಿಯುತ್ತವೆ. ಬ್ಯಾಂಕ್ ಸಾಲದ ಕಂತು ಹೊಂದಿರುವ ಅಧಿಕಾರಿಗಳು ಈ ಕುರಿತು ವೇತನ ಬಟವಾಡೆ ಅಧಿಕಾರಿಗಳಿಗೆ ಪ್ರಮಾಣಪತ್ರ ಸಲ್ಲಿಸಬೇಕು. ಸಾಲದ ಕಂತಿನ ಮೊತ್ತವನ್ನು ಹೊರತುಪಡಿಸಿದ ಬಳಿಕ ವೇತನದಲ್ಲಿ ತಡೆಹಿಡಿಯಲಾಗುವ ಮೊತ್ತವನ್ನು ನಿರ್ಧರಿಸಲಾಗುತ್ತದೆ. ರಾಜ್ಯ ಸರ್ಕಾರದ ಆರ್ಥಿಕ ಸ್ಥಿತಿಯನ್ನು ಆಧರಿಸಿ ತಡೆಹಿಡಿದ ಸಂಪೂರ್ಣ ಮೊತ್ತವನ್ನು ಮುಂದಿನ ದಿನಗಳಲ್ಲಿ ಅಧಿಕಾರಿಗಳಿಗೆ ಪಾವತಿಸಲಾಗುತ್ತದೆ ಎಂದು ಆದೇಶದಲ್ಲಿ ವಿವರಿಸಲಾಗಿದೆ.</p>.<p class="title">2026– 27ನೇ ಆರ್ಥಿಕ ವರ್ಷದ ಬಜೆಟ್ ಮಂಡನೆಯ ವೇಳೆ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಅವರು, ಮುಖ್ಯಮಂತ್ರಿ, ಸಚಿವರು, ಶಾಸಕರು ಮತ್ತು ಅಧಿಕಾರಿಗಳ ವೇತನ ತಡೆಹಿಡಿಯುವ ಕ್ರಮ ಕೈಗೊಳ್ಳುವುದಾಗಿ ಘೋಷಿಸಿದ್ದರು. </p>.<p class="title">ಮುಖ್ಯಮಂತ್ರಿಯ ವೇತನದ ಶೇ 50ರಷ್ಟು, ಸಚಿವರ ವೇತನದ ಶೇ 30ರಷ್ಟು ಮತ್ತು ಶಾಸಕರ ವೇತನದ ಶೇ 20ರಷ್ಟನ್ನು ಆರು ತಿಂಗಳವರೆಗೆ ತಡೆಹಿಡಿಯುವ ಆದೇಶವನ್ನು ಈ ಹಿಂದೆ ಹೊರಡಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>