<p><strong>ಶಿಮ್ಲಾ:</strong> ಎತ್ತರದ ಶಿಖರ, ಹಿಮ ಮುಚ್ಚಿದ ಗುಡ್ಡ ಎಲ್ಲವೂ ನೋಡಲು ಚಂದ. ಆದರೆ ಇಂತಹ ಸುಂದರ ಸ್ಥಳಗಳಲ್ಲಿ ತ್ಯಾಜ್ಯಗಳನ್ನು ಎಸೆದು ಮಲೀನಗೊಳಿಸುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. </p><p>ಹಿಮಾಚಲ ಪ್ರದೇಶದ ಮಣಿಮಹೇಶ್ ಯಾತ್ರೆ ನಡೆಯುವ 13 ಸಾವಿರ ಅಡಿ ಎತ್ತರದಲ್ಲಿ ಪ್ಲಾಸ್ಟಿಕ್ ಬಾಟಲಿಗಳು, ತ್ಯಾಜ್ಯಗಳ ರಾಶಿಯೇ ಸಂಗ್ರಹವಾಗಿದೆ. </p><p>ಈ ಕುರಿತಾದ ವಿಡಿಯೊವನ್ನು ಭಾರತೀಯ ಅರಣ್ಯ ಸೇವೆ (ಐಎಫ್ಎಸ್) ಅಧಿಕಾರಿ ಪರ್ವೀನ್ ಕಸ್ವಾನ್ ಹಂಚಿಕೊಂಡಿದ್ದು, 'ಪರ್ವತಗಳು ನಿಜವಾಗಿಯೂ ನಮ್ಮನ್ನು ಕರೆಯುತ್ತವೆಯೇ' ಎಂದು ಕೇಳಿದ್ದಾರೆ. ಸದ್ಯ ಈ ವಿಚಾರ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.</p><p>ಮಣಿಮಹೇಶ್ ಯಾತ್ರೆಯು ಉತ್ತರ ಭಾರತದಲ್ಲಿ ಮಣಿಮಹೇಶ್ ಸರೋವರ ಮತ್ತು ಕೈಲಾಶ ಶಿಖರಕ್ಕೆ ಕರೆದೊಯ್ಯುವ ಪವಿತ್ರ ಹಿಂದೂ ತೀರ್ಥಯಾತ್ರೆಯಾಗಿದೆ.</p><p>ವಿಡಿಯೊ ಹರಿದಾಡುತ್ತಿದ್ದಂತೆ, ಸಾಮಾಜಿಕ ಮಾಧ್ಯಮ ಬಳಕೆದಾರರು ಸ್ಥಳೀಯ ಆಡಳಿತದ ವಿರುದ್ಧ ಕಿಡಿಕಾರಿದ್ದಾರೆ. ಇನ್ನೊಂದೆಡೆ ಪ್ರವಾಸಿಗರ ಪ್ರಜ್ಞೆಯ ಕೊರತೆಯಿಂದಾಗಿ ಸ್ವರ್ಗವನ್ನು ಕಸದ ತೊಟ್ಟಿಯನ್ನಾಗಿ ಮಾಡಿದ್ದಾರೆ ಎಂದು ಕಿಡಿಕಾರಿದ್ದಾರೆ.</p><p>'ಈ ರೀತಿ ಪರ್ವತ ಪ್ರದೇಶಗಳಲ್ಲಿ ಕಸ ಎಸೆದು ಸುಂದರ ಪ್ರದೇಶವನ್ನು ನಾಶಗೊಳಿಸುತ್ತಿರುವುದು ನಾಚಿಕೆಗೇಡಿನ ಸಂಗತಿ' ಎಂದು ಇನ್ನೊಬ್ಬರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿಮ್ಲಾ:</strong> ಎತ್ತರದ ಶಿಖರ, ಹಿಮ ಮುಚ್ಚಿದ ಗುಡ್ಡ ಎಲ್ಲವೂ ನೋಡಲು ಚಂದ. ಆದರೆ ಇಂತಹ ಸುಂದರ ಸ್ಥಳಗಳಲ್ಲಿ ತ್ಯಾಜ್ಯಗಳನ್ನು ಎಸೆದು ಮಲೀನಗೊಳಿಸುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. </p><p>ಹಿಮಾಚಲ ಪ್ರದೇಶದ ಮಣಿಮಹೇಶ್ ಯಾತ್ರೆ ನಡೆಯುವ 13 ಸಾವಿರ ಅಡಿ ಎತ್ತರದಲ್ಲಿ ಪ್ಲಾಸ್ಟಿಕ್ ಬಾಟಲಿಗಳು, ತ್ಯಾಜ್ಯಗಳ ರಾಶಿಯೇ ಸಂಗ್ರಹವಾಗಿದೆ. </p><p>ಈ ಕುರಿತಾದ ವಿಡಿಯೊವನ್ನು ಭಾರತೀಯ ಅರಣ್ಯ ಸೇವೆ (ಐಎಫ್ಎಸ್) ಅಧಿಕಾರಿ ಪರ್ವೀನ್ ಕಸ್ವಾನ್ ಹಂಚಿಕೊಂಡಿದ್ದು, 'ಪರ್ವತಗಳು ನಿಜವಾಗಿಯೂ ನಮ್ಮನ್ನು ಕರೆಯುತ್ತವೆಯೇ' ಎಂದು ಕೇಳಿದ್ದಾರೆ. ಸದ್ಯ ಈ ವಿಚಾರ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.</p><p>ಮಣಿಮಹೇಶ್ ಯಾತ್ರೆಯು ಉತ್ತರ ಭಾರತದಲ್ಲಿ ಮಣಿಮಹೇಶ್ ಸರೋವರ ಮತ್ತು ಕೈಲಾಶ ಶಿಖರಕ್ಕೆ ಕರೆದೊಯ್ಯುವ ಪವಿತ್ರ ಹಿಂದೂ ತೀರ್ಥಯಾತ್ರೆಯಾಗಿದೆ.</p><p>ವಿಡಿಯೊ ಹರಿದಾಡುತ್ತಿದ್ದಂತೆ, ಸಾಮಾಜಿಕ ಮಾಧ್ಯಮ ಬಳಕೆದಾರರು ಸ್ಥಳೀಯ ಆಡಳಿತದ ವಿರುದ್ಧ ಕಿಡಿಕಾರಿದ್ದಾರೆ. ಇನ್ನೊಂದೆಡೆ ಪ್ರವಾಸಿಗರ ಪ್ರಜ್ಞೆಯ ಕೊರತೆಯಿಂದಾಗಿ ಸ್ವರ್ಗವನ್ನು ಕಸದ ತೊಟ್ಟಿಯನ್ನಾಗಿ ಮಾಡಿದ್ದಾರೆ ಎಂದು ಕಿಡಿಕಾರಿದ್ದಾರೆ.</p><p>'ಈ ರೀತಿ ಪರ್ವತ ಪ್ರದೇಶಗಳಲ್ಲಿ ಕಸ ಎಸೆದು ಸುಂದರ ಪ್ರದೇಶವನ್ನು ನಾಶಗೊಳಿಸುತ್ತಿರುವುದು ನಾಚಿಕೆಗೇಡಿನ ಸಂಗತಿ' ಎಂದು ಇನ್ನೊಬ್ಬರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>