ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿಮ್ಲಾ: ಸಚಿವ ವಿಕ್ರಮಾದಿತ್ಯ ಸಿಂಗ್ ರಾಜೀನಾಮೆ, 6 ಶಾಸಕರು ಅಜ್ಞಾತ ಸ್ಥಳಕ್ಕೆ

Published 28 ಫೆಬ್ರುವರಿ 2024, 6:10 IST
Last Updated 28 ಫೆಬ್ರುವರಿ 2024, 6:10 IST
ಅಕ್ಷರ ಗಾತ್ರ

ಶಿಮ್ಲಾ: ಹಿಮಾಚಲ ಪ್ರದೇಶದಲ್ಲಿ ರಾಜಕೀಯ ಮೇಲಾಟಗಳ ನಡುವೆಯೇ ಲೋಕೋಪಯೋಗಿ ಸಚಿವ ವಿಕ್ರಮಾದಿತ್ಯ ಸಿಂಗ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ.

ಮಂಗಳವಾರ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ತಮ್ಮ ಪಕ್ಷದ ಶಾಸಕರು ಅಡ್ಡ ಮತದಾನ ಮಾಡಿದ ನಂತರ ಬಿಜೆಪಿ ಅಭ್ಯರ್ಥಿಗೆ ಗೆಲುವಾಗಿತ್ತು. ಆ ಬಳಿಕ, ಅನಿರೀಕ್ಷಿತ ಬೆಳವಣಿಗೆಯಲ್ಲಿ ಸರ್ಕಾರದ ಅಸ್ತಿತ್ವಕ್ಕೆ ಆತಂಕ ಎದುರಾಗಿದ್ದು, ಅತೃಪ್ತ ಶಾಸಕರಿಗೆ ಹುದ್ದೆ ನೀಡುವ ಮೂಲಕ ಸರ್ಕಾರದ ಉಳಿವಿಗೆ ಸಚಿವರು ಮುಂದಾಗಿದ್ದಾರೆ.

ಶಿಮ್ಲಾ ಗ್ರಾಮೀಣ ಕ್ಷೇತ್ರದ ಶಾಸಕರಾಗಿರುವ ವಿಕ್ರಮಾದಿತ್ಯ ಸಿಂಗ್, ಮಾಜಿ ಮುಖ್ಯಮಂತ್ರಿ ವೀರಭದ್ರ ಸಿಂಗ್ ಅವರ ಪುತ್ರ.

ಈ ನಡುವೆ ಹರಿಯಾಣದ ಪಂಚಕುಲದಲ್ಲಿ ಬೀಡುಬಿಟ್ಟಿದ್ದ ಹಿಮಾಚಲ ಪ್ರದೇಶದ 6 ಮಂದಿ ಅತೃಪ್ತ ಕಾಂಗ್ರೆಸ್ ಶಾಸಕರು ಬುಧವಾರ ಹೆಲಿಕಾಪ್ಟರ್ ಮೂಲಕ ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ.

ಕಳೆದ ರಾತ್ರಿ ಪಂಚಕುಲದ ಹೋಟೆಲ್‌ನಲ್ಲಿ ತಂಗಿದ್ದ ರಾಜೀಂದರ್ ರಾಣಾ ಮತ್ತು ರವಿ ಠಾಕೂರ್ ಸೇರಿದಂತೆ 6 ಶಾಸಕರು, ತೌ ದೇವಿ ಲಾಲ್ ಕ್ರೀಡಾಂಗಣದಿಂದ ಬೆಳ್ಳಂಬೆಳಿಗ್ಗೆ ಹೆಲಿಕಾಪ್ಟರ್‌ನಲ್ಲಿ ತೆರಳಿದ್ದಾರೆ.

ನಿನ್ನೆ ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಬಳಿಕ ಶಾಸಕರು ಶಿಮ್ಲಾದಿಂದ ಹರಿಯಾಣಕ್ಕೆ ದೌಡಾಯಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT