<p><strong>ಶಿಮ್ಲಾ</strong>: ಹಿಮಾಚಲ ಪ್ರದೇಶದ ವಿಧಾನಸಭೆಯಲ್ಲಿ ಹಣಕಾಸು ಮಸೂದೆ ಮಂಡನೆ ವೇಳೆ ಸರ್ಕಾರದ ಪರ ಮತದಾನ ಮಾಡಬೇಕೆಂಬ ಪಕ್ಷದ ವಿಪ್ ಉಲ್ಲಂಘಿಸಿದ್ದ ಕಾಂಗ್ರೆಸ್ ಪಕ್ಷದ 6 ಮಂದಿ ಶಾಸಕರನ್ನು ಸಭಾಧ್ಯಕ್ಷ ಕುಲದೀಪ್ ಸಿಂಗ್ ಪಟಾನಿಯಾ ಅನರ್ಹಗೊಳಿಸಿದ್ದಾರೆ.</p><p>ರಾಜಿಂದರ್ ಸಿಂಗ್ ರಾಣಾ, ಸುಧೀರ್ ಶರ್ಮಾ, ಇಂದೇರ್ ದತ್ ಲಖನ್ಪಾಲ್, ದೇವಿಂದರ್ ಕುಮಾರ್ ಭುಟೂ, ರವಿ ಠಾಕೂರ್ ಮತ್ತು ಚೈತನ್ಯ ಶರ್ಮಾ ಅನರ್ಹಗೊಂಡ ಶಾಸಕರು.</p><p>ಬುಧವಾರ ಅನಹರ್ತೆಯ ಆದೇಶವನ್ನು ಕಾಯ್ದಿರಿಸಿದ್ದ ಸ್ಪೀಕರ್, ಶಾಸಕರು ಕಾಂಗ್ರೆಸ್ ಪಕ್ಷದ ಚಿಹ್ನೆ ಮೇಲೆ ಗೆದ್ದು ಪಕ್ಷದ ವಿಪ್ ಉಲ್ಲಂಘಿಸಿರುವುದು ಪಕ್ಷಾಂತರ ವಿರೋಧಿ ಕಾಯ್ದೆ ಅಡಿ ಬರುತ್ತದೆ ಎಂದು ಸುದ್ದಿಗಾರರಿಗೆ ತಿಳಿಸಿದರು.</p><p>'ಈ ಶಾಸಕರು ಅನರ್ಹಗೊಂಡಿದ್ದಾರೆ. ಹಿಮಾಚಲ ಪ್ರದೇಶದ ವಿಧಾನಸಭೆಯ ಶಾಸಕ ಸ್ಥಾನವನ್ನು ತಕ್ಷಣದಿಂದಲೇ ಕಳೆದುಕೊಂಡಿದ್ದಾರೆ’ ಎಂದು ಸ್ಪೀಕರ್ ಆದದೇಶದಲ್ಲಿ ತಿಳಿಸಿದ್ದಾರೆ.</p><p>ಈ 6 ಶಾಸಕರು ಮಂಗಳವಾರ ನಡೆದ ರಾಜ್ಯಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಹರ್ಷ್ ಮಹಾಜನ್ ಪರವಾಗಿ ಅಡ್ಡ ಮತದಾನ ಮಾಡಿದ್ದರು. ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಮತದಾನದಿಂದ ದೂರ ಉಳಿದಿದ್ದರು.</p><p>ಬಿಜೆಪಿಯ 15 ಶಾಸಕರನ್ನು ಸ್ಪೀಕರ್ ಅಮಾನತು ಮಾಡಿದ ಬಳಿಕ ವಿಧಾನಸಭೆಯಲ್ಲಿ ಧ್ವನಿ ಮತದ ಮೂಲಕ ಹಣಕಾಸು ಮಸೂದೆ ಅಂಗೀಕಾರವಾಗಿತ್ತು.</p> .ಶಿಮ್ಲಾ: ಸಚಿವ ವಿಕ್ರಮಾದಿತ್ಯ ಸಿಂಗ್ ರಾಜೀನಾಮೆ, 6 ಶಾಸಕರು ಅಜ್ಞಾತ ಸ್ಥಳಕ್ಕೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿಮ್ಲಾ</strong>: ಹಿಮಾಚಲ ಪ್ರದೇಶದ ವಿಧಾನಸಭೆಯಲ್ಲಿ ಹಣಕಾಸು ಮಸೂದೆ ಮಂಡನೆ ವೇಳೆ ಸರ್ಕಾರದ ಪರ ಮತದಾನ ಮಾಡಬೇಕೆಂಬ ಪಕ್ಷದ ವಿಪ್ ಉಲ್ಲಂಘಿಸಿದ್ದ ಕಾಂಗ್ರೆಸ್ ಪಕ್ಷದ 6 ಮಂದಿ ಶಾಸಕರನ್ನು ಸಭಾಧ್ಯಕ್ಷ ಕುಲದೀಪ್ ಸಿಂಗ್ ಪಟಾನಿಯಾ ಅನರ್ಹಗೊಳಿಸಿದ್ದಾರೆ.</p><p>ರಾಜಿಂದರ್ ಸಿಂಗ್ ರಾಣಾ, ಸುಧೀರ್ ಶರ್ಮಾ, ಇಂದೇರ್ ದತ್ ಲಖನ್ಪಾಲ್, ದೇವಿಂದರ್ ಕುಮಾರ್ ಭುಟೂ, ರವಿ ಠಾಕೂರ್ ಮತ್ತು ಚೈತನ್ಯ ಶರ್ಮಾ ಅನರ್ಹಗೊಂಡ ಶಾಸಕರು.</p><p>ಬುಧವಾರ ಅನಹರ್ತೆಯ ಆದೇಶವನ್ನು ಕಾಯ್ದಿರಿಸಿದ್ದ ಸ್ಪೀಕರ್, ಶಾಸಕರು ಕಾಂಗ್ರೆಸ್ ಪಕ್ಷದ ಚಿಹ್ನೆ ಮೇಲೆ ಗೆದ್ದು ಪಕ್ಷದ ವಿಪ್ ಉಲ್ಲಂಘಿಸಿರುವುದು ಪಕ್ಷಾಂತರ ವಿರೋಧಿ ಕಾಯ್ದೆ ಅಡಿ ಬರುತ್ತದೆ ಎಂದು ಸುದ್ದಿಗಾರರಿಗೆ ತಿಳಿಸಿದರು.</p><p>'ಈ ಶಾಸಕರು ಅನರ್ಹಗೊಂಡಿದ್ದಾರೆ. ಹಿಮಾಚಲ ಪ್ರದೇಶದ ವಿಧಾನಸಭೆಯ ಶಾಸಕ ಸ್ಥಾನವನ್ನು ತಕ್ಷಣದಿಂದಲೇ ಕಳೆದುಕೊಂಡಿದ್ದಾರೆ’ ಎಂದು ಸ್ಪೀಕರ್ ಆದದೇಶದಲ್ಲಿ ತಿಳಿಸಿದ್ದಾರೆ.</p><p>ಈ 6 ಶಾಸಕರು ಮಂಗಳವಾರ ನಡೆದ ರಾಜ್ಯಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಹರ್ಷ್ ಮಹಾಜನ್ ಪರವಾಗಿ ಅಡ್ಡ ಮತದಾನ ಮಾಡಿದ್ದರು. ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಮತದಾನದಿಂದ ದೂರ ಉಳಿದಿದ್ದರು.</p><p>ಬಿಜೆಪಿಯ 15 ಶಾಸಕರನ್ನು ಸ್ಪೀಕರ್ ಅಮಾನತು ಮಾಡಿದ ಬಳಿಕ ವಿಧಾನಸಭೆಯಲ್ಲಿ ಧ್ವನಿ ಮತದ ಮೂಲಕ ಹಣಕಾಸು ಮಸೂದೆ ಅಂಗೀಕಾರವಾಗಿತ್ತು.</p> .ಶಿಮ್ಲಾ: ಸಚಿವ ವಿಕ್ರಮಾದಿತ್ಯ ಸಿಂಗ್ ರಾಜೀನಾಮೆ, 6 ಶಾಸಕರು ಅಜ್ಞಾತ ಸ್ಥಳಕ್ಕೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>