<p><strong>ಶಿಮ್ಲಾ:</strong> ಜನವರಿ 22ರಂದು ಆಯೋಧ್ಯೆಯ ರಾಮ ಮಂದಿರದಲ್ಲಿ ನಡೆಯುವ ರಾಮ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಭಾಗಿಯಾಗುವುದಾಗಿ ಹಿಮಾಚಲ ಪ್ರದೇಶದ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವರಾಗಿರುವ ವಿಕ್ರಮಾದಿತ್ಯ ಸಿಂಗ್ ಹೇಳಿದ್ದಾರೆ.</p><p>ಹಿಮಾಚಲ ಪ್ರದೇಶದ ಮಾಜಿ ಮುಖ್ಯಮಂತ್ರಿ ವೀರಭದ್ರ ಸಿಂಗ್ ಅವರ ಪುತ್ರನಾಗಿರುವ ವಿಕ್ರಮಾದಿತ್ಯ ಸಿಂಗ್, ರಾಮ ಪ್ರಾಣ ಪ್ರತಿಷ್ಠಾಪನೆಗೆ ಆಹ್ವಾನ ನೀಡಿದ್ದಕ್ಕಾಗಿ ಆರ್ಎಸ್ಎಸ್ ಹಾಗೂ ವಿಶ್ವ ಹಿಂದೂ ಪರಿಷತ್ಗೆ ಧನ್ಯವಾದ ಸಲ್ಲಿಸಿದ್ದಾರೆ.</p>.ಅಯೋಧ್ಯೆ ರಾಮ ಮಂದಿರ ಉದ್ಘಾಟನೆ ನಮ್ಮ ಸೌಭಾಗ್ಯ: ಸದಾಶಿವ ಸ್ವಾಮೀಜಿ.<p>‘ಇದು ರಾಜಕೀಯ ವಿಷಯವಲ್ಲ. ಹಿಮಾಚಲ ಪ್ರದೇಶದಿಂದ ಆಹ್ವಾನಿತರಾಗಿರುವ ಕೆಲವೇ ಮಂದಿಯ ಪೈಕಿ ನಾನೂ ಒಬ್ಬನಾಗಿರುವುದು ಅದೃಷ್ಟವೆಂದೇ ಭಾವಿಸುತ್ತೇನೆ. ನನಗೆ ಹಾಗೂ ನನ್ನ ಕುಟುಂಬಕ್ಕೆ ಈ ಗೌರವ ನೀಡಿದ ಆರ್ಎಸ್ಎಸ್ ಹಾಗೂ ವಿಶ್ವಹಿಂದೂ ಪರಿಷತ್ಗೆ ಧನ್ಯವಾದಗಳು’ ಎಂದು ಅವರು ಹೇಳಿದ್ದಾರೆ.</p><p>‘ಈ ಐತಿಹಾಸಿಕ ದಿನದಂದು ಭಾಗಿಯಾಗುವುದು ಜೀವಮಾನದ ಅವಕಾಶ. ಓರ್ವ ಹಿಂದೂ ಆಗಿ, ದೇವರಲ್ಲಿ ವಿಶ್ವಾಸ ಇದ್ದವನಾಗಿ, ಶ್ರೀರಾಮ ಪ್ರಾಣ ಪ್ರತಿಷ್ಠಾಪನೆಯಲ್ಲಿ ಭಾಗಿಯಾಗುವುದು ನನ್ನ ಕರ್ತವ್ಯವೆಂದೇ ಭಾವಿಸಿದ್ದೇನೆ’ ಎಂದು ಅವರು ನುಡಿದಿದ್ದಾರೆ.</p>.ರಾಮ ಮಂದಿರ ಉದ್ಘಾಟನೆ | ದೆಹಲಿಯ 14,000 ದೇವಾಲಯಗಳಲ್ಲಿ ನೇರಪ್ರಸಾರ: ಕರ್ನೈಲ್.<p>ಜನವರಿ 4ರಂದೂ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ಅವರು, ಅನುಕೂಲ ನೋಡಿಕೊಂಡು ನಿರ್ಧಾರ ಮಾಡುತ್ತೇನೆ ಎಂದು ಹೇಳಿದ್ದರು. ಅಲ್ಲದೆ ತನಗೆ ಆಹ್ವಾನ ಬಂದಿದ್ದರ ಬಗ್ಗೆ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು ಅವರ ಗಮನಕ್ಕೂ ತಂದಿದ್ದೇನೆ ಎಂದಿದ್ದರು.</p> .ರಾಮ ಮಂದಿರ ಉದ್ಘಾಟನೆ | ಮುಸ್ಲಿಮರಿಂದ ನಕಾರಾತ್ಮಕ ಹೇಳಿಕೆ ಬಂದಿಲ್ಲ: ಹುಸೇನ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿಮ್ಲಾ:</strong> ಜನವರಿ 22ರಂದು ಆಯೋಧ್ಯೆಯ ರಾಮ ಮಂದಿರದಲ್ಲಿ ನಡೆಯುವ ರಾಮ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಭಾಗಿಯಾಗುವುದಾಗಿ ಹಿಮಾಚಲ ಪ್ರದೇಶದ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವರಾಗಿರುವ ವಿಕ್ರಮಾದಿತ್ಯ ಸಿಂಗ್ ಹೇಳಿದ್ದಾರೆ.</p><p>ಹಿಮಾಚಲ ಪ್ರದೇಶದ ಮಾಜಿ ಮುಖ್ಯಮಂತ್ರಿ ವೀರಭದ್ರ ಸಿಂಗ್ ಅವರ ಪುತ್ರನಾಗಿರುವ ವಿಕ್ರಮಾದಿತ್ಯ ಸಿಂಗ್, ರಾಮ ಪ್ರಾಣ ಪ್ರತಿಷ್ಠಾಪನೆಗೆ ಆಹ್ವಾನ ನೀಡಿದ್ದಕ್ಕಾಗಿ ಆರ್ಎಸ್ಎಸ್ ಹಾಗೂ ವಿಶ್ವ ಹಿಂದೂ ಪರಿಷತ್ಗೆ ಧನ್ಯವಾದ ಸಲ್ಲಿಸಿದ್ದಾರೆ.</p>.ಅಯೋಧ್ಯೆ ರಾಮ ಮಂದಿರ ಉದ್ಘಾಟನೆ ನಮ್ಮ ಸೌಭಾಗ್ಯ: ಸದಾಶಿವ ಸ್ವಾಮೀಜಿ.<p>‘ಇದು ರಾಜಕೀಯ ವಿಷಯವಲ್ಲ. ಹಿಮಾಚಲ ಪ್ರದೇಶದಿಂದ ಆಹ್ವಾನಿತರಾಗಿರುವ ಕೆಲವೇ ಮಂದಿಯ ಪೈಕಿ ನಾನೂ ಒಬ್ಬನಾಗಿರುವುದು ಅದೃಷ್ಟವೆಂದೇ ಭಾವಿಸುತ್ತೇನೆ. ನನಗೆ ಹಾಗೂ ನನ್ನ ಕುಟುಂಬಕ್ಕೆ ಈ ಗೌರವ ನೀಡಿದ ಆರ್ಎಸ್ಎಸ್ ಹಾಗೂ ವಿಶ್ವಹಿಂದೂ ಪರಿಷತ್ಗೆ ಧನ್ಯವಾದಗಳು’ ಎಂದು ಅವರು ಹೇಳಿದ್ದಾರೆ.</p><p>‘ಈ ಐತಿಹಾಸಿಕ ದಿನದಂದು ಭಾಗಿಯಾಗುವುದು ಜೀವಮಾನದ ಅವಕಾಶ. ಓರ್ವ ಹಿಂದೂ ಆಗಿ, ದೇವರಲ್ಲಿ ವಿಶ್ವಾಸ ಇದ್ದವನಾಗಿ, ಶ್ರೀರಾಮ ಪ್ರಾಣ ಪ್ರತಿಷ್ಠಾಪನೆಯಲ್ಲಿ ಭಾಗಿಯಾಗುವುದು ನನ್ನ ಕರ್ತವ್ಯವೆಂದೇ ಭಾವಿಸಿದ್ದೇನೆ’ ಎಂದು ಅವರು ನುಡಿದಿದ್ದಾರೆ.</p>.ರಾಮ ಮಂದಿರ ಉದ್ಘಾಟನೆ | ದೆಹಲಿಯ 14,000 ದೇವಾಲಯಗಳಲ್ಲಿ ನೇರಪ್ರಸಾರ: ಕರ್ನೈಲ್.<p>ಜನವರಿ 4ರಂದೂ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ಅವರು, ಅನುಕೂಲ ನೋಡಿಕೊಂಡು ನಿರ್ಧಾರ ಮಾಡುತ್ತೇನೆ ಎಂದು ಹೇಳಿದ್ದರು. ಅಲ್ಲದೆ ತನಗೆ ಆಹ್ವಾನ ಬಂದಿದ್ದರ ಬಗ್ಗೆ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು ಅವರ ಗಮನಕ್ಕೂ ತಂದಿದ್ದೇನೆ ಎಂದಿದ್ದರು.</p> .ರಾಮ ಮಂದಿರ ಉದ್ಘಾಟನೆ | ಮುಸ್ಲಿಮರಿಂದ ನಕಾರಾತ್ಮಕ ಹೇಳಿಕೆ ಬಂದಿಲ್ಲ: ಹುಸೇನ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>