<p><strong>ಬಿಲಾಸ್ಪುರ:</strong> ಹಿಮಾಚಲ ಪ್ರದೇಶದ ಬಿಲಾಸ್ಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ನ ಮಾಜಿ ಶಾಸಕ ಬಂಬರ್ ಠಾಕೂರ್ ಅವರ ಮೇಲೆ ಅಪರಿಚಿತ ವ್ಯಕ್ತಿಗಳು ಗುಂಡು ಹಾರಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p>.ನೊಯ್ಡಾ: ಪೊಲೀಸರ ಮೇಲೆ ಗುಂಡಿನ ದಾಳಿ ನಡೆಸಿ ಪರಾರಿಗೆ ಯತ್ನಿಸಿದ ದರೋಡೆಕೋರರ ಬಂಧನ.<p>ದಾಳಿಯಲ್ಲಿ ಠಾಕೂರ್ ಮತ್ತು ಅವರ ಭದ್ರತಾ ಅಧಿಕಾರಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ದಾಳಿಕೋರರು ಸುಮಾರು 12 ಸುತ್ತು ಗುಂಡು ಹಾರಿಸಿದ್ದಾರೆ ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ.</p><p>ಬಿಲಾಸ್ಪುರದಲ್ಲಿರುವ ತಮ್ಮ ಪತ್ನಿಗೆ ನೀಡಲಾದ ಸರ್ಕಾರಿ ವಸತಿಗೃಹದ ಅಂಗಳದಲ್ಲಿ ಸಂಬಂಧಿಕರೊಂದಿಗೆ ಕುಳಿತಿದ್ದಾಗ ನಾಲ್ವರು ಆಗಮಿಸಿ ಗುಂಡು ಹಾರಿಸಿದ್ದಾರೆ.</p><p>ಠಾಕೂರ್ ಅವರ ಕಾಲಿಗೆ ಗುಂಡು ತಗುಲಿದೆ.</p>.ರಜೌರಿ: ಗಸ್ತು ತಿರುಗುತ್ತಿದ್ದ ಸೈನಿಕರ ಮೇಲೆ ಗುಂಡಿನ ದಾಳಿ. <p>ದಾಳಿ ನಡೆಸಿ ಪರಾರಿಯಾದ ಆರೋಪಿಗಳನ್ನು ಹಿಡಿಯಲು ಶೋಧ ಆರಂಭಿಸಲಾಗಿದೆ ಎಂದು ಜಿಲ್ಲಾ ವರಿಷ್ಠಾಧಿಕಾರಿ ಸಂದೀಪ್ ಧವಲ್ ತಿಳಿಸಿದ್ದಾರೆ.</p><p>ಆರೋಪಿಗಳನ್ನು ಬಂಧಿಸಿ ಪ್ರಕರಣ ದಾಖಲಿಸಲಾಗುವುದು ಎಂದು ಅವರು ಹೇಳಿದ್ದಾರೆ.</p><p>ದಾಳಿ ನಡೆದ ತಕ್ಷಣ, ಠಾಕೂರ್ ಅವರನ್ನು ಶಿಮ್ಲಾದ ಇಂದಿರಾ ಗಾಂಧಿ ವೈದ್ಯಕೀಯ ಕಾಲೇಜಿಗೆ ಕರೆದುಕೊಂಡು ಹೋಗಲಾಗಿದೆ. ಭದ್ರತಾ ಅಧಿಕಾರಿ ಬಿಲಾಸ್ಪುರದ ಏಮ್ಸ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.</p> .ಪಾಕಿಸ್ತಾನ | ಯೋಧರು, ಉಗ್ರರ ನಡುವೆ ಗುಂಡಿನ ದಾಳಿ: 18 ಸೈನಿಕರು ಸೇರಿ 41 ಜನ ಸಾವು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಿಲಾಸ್ಪುರ:</strong> ಹಿಮಾಚಲ ಪ್ರದೇಶದ ಬಿಲಾಸ್ಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ನ ಮಾಜಿ ಶಾಸಕ ಬಂಬರ್ ಠಾಕೂರ್ ಅವರ ಮೇಲೆ ಅಪರಿಚಿತ ವ್ಯಕ್ತಿಗಳು ಗುಂಡು ಹಾರಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p>.ನೊಯ್ಡಾ: ಪೊಲೀಸರ ಮೇಲೆ ಗುಂಡಿನ ದಾಳಿ ನಡೆಸಿ ಪರಾರಿಗೆ ಯತ್ನಿಸಿದ ದರೋಡೆಕೋರರ ಬಂಧನ.<p>ದಾಳಿಯಲ್ಲಿ ಠಾಕೂರ್ ಮತ್ತು ಅವರ ಭದ್ರತಾ ಅಧಿಕಾರಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ದಾಳಿಕೋರರು ಸುಮಾರು 12 ಸುತ್ತು ಗುಂಡು ಹಾರಿಸಿದ್ದಾರೆ ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ.</p><p>ಬಿಲಾಸ್ಪುರದಲ್ಲಿರುವ ತಮ್ಮ ಪತ್ನಿಗೆ ನೀಡಲಾದ ಸರ್ಕಾರಿ ವಸತಿಗೃಹದ ಅಂಗಳದಲ್ಲಿ ಸಂಬಂಧಿಕರೊಂದಿಗೆ ಕುಳಿತಿದ್ದಾಗ ನಾಲ್ವರು ಆಗಮಿಸಿ ಗುಂಡು ಹಾರಿಸಿದ್ದಾರೆ.</p><p>ಠಾಕೂರ್ ಅವರ ಕಾಲಿಗೆ ಗುಂಡು ತಗುಲಿದೆ.</p>.ರಜೌರಿ: ಗಸ್ತು ತಿರುಗುತ್ತಿದ್ದ ಸೈನಿಕರ ಮೇಲೆ ಗುಂಡಿನ ದಾಳಿ. <p>ದಾಳಿ ನಡೆಸಿ ಪರಾರಿಯಾದ ಆರೋಪಿಗಳನ್ನು ಹಿಡಿಯಲು ಶೋಧ ಆರಂಭಿಸಲಾಗಿದೆ ಎಂದು ಜಿಲ್ಲಾ ವರಿಷ್ಠಾಧಿಕಾರಿ ಸಂದೀಪ್ ಧವಲ್ ತಿಳಿಸಿದ್ದಾರೆ.</p><p>ಆರೋಪಿಗಳನ್ನು ಬಂಧಿಸಿ ಪ್ರಕರಣ ದಾಖಲಿಸಲಾಗುವುದು ಎಂದು ಅವರು ಹೇಳಿದ್ದಾರೆ.</p><p>ದಾಳಿ ನಡೆದ ತಕ್ಷಣ, ಠಾಕೂರ್ ಅವರನ್ನು ಶಿಮ್ಲಾದ ಇಂದಿರಾ ಗಾಂಧಿ ವೈದ್ಯಕೀಯ ಕಾಲೇಜಿಗೆ ಕರೆದುಕೊಂಡು ಹೋಗಲಾಗಿದೆ. ಭದ್ರತಾ ಅಧಿಕಾರಿ ಬಿಲಾಸ್ಪುರದ ಏಮ್ಸ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.</p> .ಪಾಕಿಸ್ತಾನ | ಯೋಧರು, ಉಗ್ರರ ನಡುವೆ ಗುಂಡಿನ ದಾಳಿ: 18 ಸೈನಿಕರು ಸೇರಿ 41 ಜನ ಸಾವು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>