<p class="title"><strong>ಶಿಮ್ಲಾ: </strong>ಉತ್ತರ ಪ್ರದೇಶ ಮತ್ತು ಉತ್ತರಾಖಂಡದಂತೆ ಹಿಮಾಚಲ ಪ್ರದೇಶದಲ್ಲಿಯೂ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ ಎಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಸೋಮವಾರ ವಿಶ್ವಾಸ ವ್ಯಕ್ತಪಡಿಸಿದರು.</p>.<p class="title">ಈ ಮೂಲಕಹಿಮಾಚಲ ಪ್ರದೇಶ ಮತ್ತು ಗುಜಾರಾತ್ನಲ್ಲಿ ಚುನಾವಣೆ ಸಮಯದಲ್ಲಿ ಬಿಜೆಪಿ ಸದ್ದು ಮಾಡುತ್ತದೆ, ಆದರೆ ಕೊನೆಯಲ್ಲಿ ಹಲವು ಕ್ಷೇತ್ರಗಳಲ್ಲಿ ಠೇವಣಿಯನ್ನೂ ಕಳೆದುಕೊಳ್ಳುತ್ತದೆ ಎಂದ ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ಹೇಳಿಕೆಗೆ ತಿರುಗೇಟು ನೀಡಿದರು.</p>.<p class="title">‘ಆಮ್ ಆದ್ಮಿ ಪಕ್ಷ ಪ್ರತಿ ಬಾರಿ ಚುನಾವಣೆ ವೇಳೆ ಸದ್ದು ಮಾಡುತ್ತದೆ. ಉತ್ತರ ಪ್ರದೇಶ, ಗೋವಾ ಮತ್ತು ಉತ್ತರಾಖಂಡದಲ್ಲಿ ನೀವದನ್ನು ನೋಡಿದ್ದೀರಿ. ಅನಂತರ ಏನಾಯಿತು? ಹಲವು ಕ್ಷೇತ್ರಗಳಲ್ಲಿ ಠೇವಣಿಯನ್ನೂ ಕಳೆದುಕೊಂಡಿತು’ ಎಂದು ಹೇಳಿದರು.</p>.<p>ಇದೇ ವೇಳೆ, ಎರಡೂ ರಾಜ್ಯಗಳಲ್ಲಿ ಕಾಂಗ್ರೆಸ್ ಪ್ರಮುಖ ಪ್ರತಿಸ್ಪರ್ಧಿ. ಎರಡೂ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಬಹುಮತ ಪಡೆದು ಅಧಿಕಾರಕ್ಕೆ ಬರಲಿದೆ.ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ಜನರು ಇಟ್ಟಿರುವ ಪ್ರೀತಿ ಮತ್ತು ನಂಬಿಕೆಯೇ ಈ ವಿಶ್ವಾಸಕ್ಕೆ ಕಾರಣ ಎಂದು ಹೇಳಿದರು.</p>.<p><strong>ಡಬಲ್ ಎಂಜಿನ್ ಸರ್ಕಾರಕ್ಕೆ ಇಂಧನ ತುಂಬಿಸುವುದು ಮರೆತಿರಬೇಕು: ಪ್ರಿಯಾಂಕಾ ಗಾಂಧಿ</strong></p>.<p>ಉನಾ: ಹಿಮಾಚಲ ಪ್ರದೇಶದಲ್ಲಿ ಕಳೆದ ಐದು ವರ್ಷಗಳಿಂದಲೂ ಬಿಜೆಪಿಯ ‘ಡಬಲ್ ಎಂಜಿನ್’ ಸರ್ಕಾರ ಅಸ್ತಿತ್ವದಲ್ಲಿದೆ. ಆದರೆ, ಬಹುಶಃ ಇಂಧನ ತುಂಬಿಸುವುದನ್ನು ಮರೆತಿರಬೇಕು ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಲೇವಡಿ ಮಾಡಿದರು.</p>.<p>ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ನಡೆಯುತ್ತಿರುವ ಪಕ್ಷದ ರ್ಯಾಲಿ ಉದ್ದೇಶಿಸಿ ಮಾತನಾಡಿದ ಅವರು, ‘ಜನರು ಕಾಯಿಲೆಗೆ ತುತ್ತಾಗಿದ್ದಾರೆ ಮತ್ತು ಹಳೆಯ ಔಷಧವನ್ನೇ ಪಡೆಯಿರಿ ಎಂದು ಹೇಳಲಾಗುತ್ತಿದೆ ಎಂದು ಹೇಳಿದರು. ಈ ಮೂಲಕ ಪದೇ ಪದೇ ಔಷಧವನ್ನು ಬದಲಾಯಿಸುವುದರಿಂದ ಕಾಯಿಲೆ ಗುಣಮುಖವಾಗುವುದಿಲ್ಲ ಎಂಬ ಪ್ರಧಾನಿ ಮೋದಿ ಹೇಳಿಕೆಗೆ ತಿರುಗೇಟು ನೀಡಿದರು.</p>.<p>‘ಉದ್ಯೋಗ ನೀಡುವುದು ಸರ್ಕಾರದ ಜವಾಬ್ದಾರಿ. ಆದರೆ ರಾಜ್ಯ ಮತ್ತು ಕೇಂದ್ರ ಎರಡೂ ಕಡೆಗಳಲ್ಲಿ ಬಿಜೆಪಿ ಅಧಿಕಾರದಲ್ಲಿ ಇದ್ದರೂ ಹಿಮಾಚಲ ಪ್ರದೇಶದಲ್ಲಿ 63,000 ಹುದ್ದೆಗಳು ಖಾಲಿ ಇವೆ’ ಎಂದು ಬಿಜೆಪಿ ವಿರುದ್ಧ ಹರಿಹಾಯ್ದರು.</p>.<p><strong>ಕಾಂಗ್ರೆಸ್ಗೆ ದೇಶದ ಭದ್ರತೆ ಬಗ್ಗೆ ಕಾಳಜಿ ಇಲ್ಲ: ಯೋಗಿ ಆದಿತ್ಯನಾಥ್</strong></p>.<p>ಹರೋಲಿ: ರಾಮ ಮಂದಿ ನಿರ್ಮಾಣ, ಸರ್ಜಿಕಲ್ ಸ್ಟ್ರೈಕ್ ಅಥವಾ 370ನೇ ವಿಧಿ ರದ್ಧತಿಗೆ ಕಾಂಗ್ರೆಸ್ ಯಾವುದೇ ಕ್ರಮ ತೆಗೆದುಕೊಳ್ಳಲಿಲ್ಲ. ದೇಶದ ಭದ್ರತೆ ಮತ್ತು ಜನರ ಭಾವನೆಗಳ ಬಗ್ಗೆ ಕಾಂಗ್ರೆಸ್ಗೆ ಕಾಳಜಿ ಇಲ್ಲ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೋಮವಾರ ಹೇಳಿದರು.</p>.<p>ಇಲ್ಲಿ ಬಿಜೆಪಿ ಪರ ಪ್ರಚಾರ ಮಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ನಾಯಕತ್ವದಲ್ಲಿ ಭಾರತ ಉನ್ನತಿ ಕಾಣುತ್ತಿದೆ. ಜಾಗತಿಕ ಮಟ್ಟದಲ್ಲಿ ಭಾರತದ ಗೌರವ ಎತ್ತರಕ್ಕೇರುತ್ತಿದೆ ಎಂದು ಹೇಳಿದರು.</p>.<p><strong>ಮತ್ತೆ 12 ಅಭ್ಯರ್ಥಿಗಳ ಹೆಸರು ಘೋಷಿಸಿದ ಎಎಪಿ</strong></p>.<p>ಅಹಮದಾಬಾದ್ (ಪಿಟಿಐ): ಗುಜರಾತ್ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತ್ತೆ 12 ಅಭ್ಯರ್ಥಿಗಳ ಹೆಸರುಗಳನ್ನು ಆಮ್ ಆದ್ಮಿ ಪಕ್ಷ (ಎಎಪಿ) ಸೋಮವಾರ ಪ್ರಕಟಿಸಿದೆ. ಇದರಲ್ಲಿಪಾಟೀದಾರ್ ಮೀಸಲಾತಿ ಹೋರಾಟದಲ್ಲಿ ಭಾಗಿಯಾಗಿದ್ದ ಅಲ್ಪೇಶ್ ಕಥೀರಿಯಾ ಹೆಸರೂ ಸೇರಿದೆ.</p>.<p>ರಾಜ್ಯದಲ್ಲಿ ಆಡಳಿತಾರೂಢ ಬಿಜೆಪಿಗೆ ಪ್ರಬಲ ಪ್ರತಿಸ್ಪರ್ಧಿ ಎಂದು ಬಿಂಬಿಸಿಕೊಳ್ಳುತ್ತಿರುವ ಎಎಪಿ ಸೋಮವಾರ ತನ್ನ ಅಭ್ಯರ್ಥಿಗಳ 11ನೇ ಪಟ್ಟಿಯನ್ನು ಬಿಡುಗಡೆ ಮಾಡಿತು.</p>.<p>ಒಟ್ಟು 182 ವಿಧಾನಸಭಾ ಕ್ಷೇತ್ರಗಳ ಪೈಕಿಎಎಪಿ, ಈವರೆಗೆ 130 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.ಕಥೀರಿಯಾ ಅವರು ಪಾಟೀದಾರ್ ಪ್ರಾಬಲ್ಯ ಹೊಂದಿರುವ ಸೂರತ್ ನಗರದ ವರಚ್ಚಾ ರಸ್ತೆ ಕ್ಷೇತ್ರದ ಟಿಕೆಟ್ ನೀಡುವ ಸಾಧ್ಯತೆ ಇದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಶಿಮ್ಲಾ: </strong>ಉತ್ತರ ಪ್ರದೇಶ ಮತ್ತು ಉತ್ತರಾಖಂಡದಂತೆ ಹಿಮಾಚಲ ಪ್ರದೇಶದಲ್ಲಿಯೂ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ ಎಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಸೋಮವಾರ ವಿಶ್ವಾಸ ವ್ಯಕ್ತಪಡಿಸಿದರು.</p>.<p class="title">ಈ ಮೂಲಕಹಿಮಾಚಲ ಪ್ರದೇಶ ಮತ್ತು ಗುಜಾರಾತ್ನಲ್ಲಿ ಚುನಾವಣೆ ಸಮಯದಲ್ಲಿ ಬಿಜೆಪಿ ಸದ್ದು ಮಾಡುತ್ತದೆ, ಆದರೆ ಕೊನೆಯಲ್ಲಿ ಹಲವು ಕ್ಷೇತ್ರಗಳಲ್ಲಿ ಠೇವಣಿಯನ್ನೂ ಕಳೆದುಕೊಳ್ಳುತ್ತದೆ ಎಂದ ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ಹೇಳಿಕೆಗೆ ತಿರುಗೇಟು ನೀಡಿದರು.</p>.<p class="title">‘ಆಮ್ ಆದ್ಮಿ ಪಕ್ಷ ಪ್ರತಿ ಬಾರಿ ಚುನಾವಣೆ ವೇಳೆ ಸದ್ದು ಮಾಡುತ್ತದೆ. ಉತ್ತರ ಪ್ರದೇಶ, ಗೋವಾ ಮತ್ತು ಉತ್ತರಾಖಂಡದಲ್ಲಿ ನೀವದನ್ನು ನೋಡಿದ್ದೀರಿ. ಅನಂತರ ಏನಾಯಿತು? ಹಲವು ಕ್ಷೇತ್ರಗಳಲ್ಲಿ ಠೇವಣಿಯನ್ನೂ ಕಳೆದುಕೊಂಡಿತು’ ಎಂದು ಹೇಳಿದರು.</p>.<p>ಇದೇ ವೇಳೆ, ಎರಡೂ ರಾಜ್ಯಗಳಲ್ಲಿ ಕಾಂಗ್ರೆಸ್ ಪ್ರಮುಖ ಪ್ರತಿಸ್ಪರ್ಧಿ. ಎರಡೂ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಬಹುಮತ ಪಡೆದು ಅಧಿಕಾರಕ್ಕೆ ಬರಲಿದೆ.ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ಜನರು ಇಟ್ಟಿರುವ ಪ್ರೀತಿ ಮತ್ತು ನಂಬಿಕೆಯೇ ಈ ವಿಶ್ವಾಸಕ್ಕೆ ಕಾರಣ ಎಂದು ಹೇಳಿದರು.</p>.<p><strong>ಡಬಲ್ ಎಂಜಿನ್ ಸರ್ಕಾರಕ್ಕೆ ಇಂಧನ ತುಂಬಿಸುವುದು ಮರೆತಿರಬೇಕು: ಪ್ರಿಯಾಂಕಾ ಗಾಂಧಿ</strong></p>.<p>ಉನಾ: ಹಿಮಾಚಲ ಪ್ರದೇಶದಲ್ಲಿ ಕಳೆದ ಐದು ವರ್ಷಗಳಿಂದಲೂ ಬಿಜೆಪಿಯ ‘ಡಬಲ್ ಎಂಜಿನ್’ ಸರ್ಕಾರ ಅಸ್ತಿತ್ವದಲ್ಲಿದೆ. ಆದರೆ, ಬಹುಶಃ ಇಂಧನ ತುಂಬಿಸುವುದನ್ನು ಮರೆತಿರಬೇಕು ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಲೇವಡಿ ಮಾಡಿದರು.</p>.<p>ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ನಡೆಯುತ್ತಿರುವ ಪಕ್ಷದ ರ್ಯಾಲಿ ಉದ್ದೇಶಿಸಿ ಮಾತನಾಡಿದ ಅವರು, ‘ಜನರು ಕಾಯಿಲೆಗೆ ತುತ್ತಾಗಿದ್ದಾರೆ ಮತ್ತು ಹಳೆಯ ಔಷಧವನ್ನೇ ಪಡೆಯಿರಿ ಎಂದು ಹೇಳಲಾಗುತ್ತಿದೆ ಎಂದು ಹೇಳಿದರು. ಈ ಮೂಲಕ ಪದೇ ಪದೇ ಔಷಧವನ್ನು ಬದಲಾಯಿಸುವುದರಿಂದ ಕಾಯಿಲೆ ಗುಣಮುಖವಾಗುವುದಿಲ್ಲ ಎಂಬ ಪ್ರಧಾನಿ ಮೋದಿ ಹೇಳಿಕೆಗೆ ತಿರುಗೇಟು ನೀಡಿದರು.</p>.<p>‘ಉದ್ಯೋಗ ನೀಡುವುದು ಸರ್ಕಾರದ ಜವಾಬ್ದಾರಿ. ಆದರೆ ರಾಜ್ಯ ಮತ್ತು ಕೇಂದ್ರ ಎರಡೂ ಕಡೆಗಳಲ್ಲಿ ಬಿಜೆಪಿ ಅಧಿಕಾರದಲ್ಲಿ ಇದ್ದರೂ ಹಿಮಾಚಲ ಪ್ರದೇಶದಲ್ಲಿ 63,000 ಹುದ್ದೆಗಳು ಖಾಲಿ ಇವೆ’ ಎಂದು ಬಿಜೆಪಿ ವಿರುದ್ಧ ಹರಿಹಾಯ್ದರು.</p>.<p><strong>ಕಾಂಗ್ರೆಸ್ಗೆ ದೇಶದ ಭದ್ರತೆ ಬಗ್ಗೆ ಕಾಳಜಿ ಇಲ್ಲ: ಯೋಗಿ ಆದಿತ್ಯನಾಥ್</strong></p>.<p>ಹರೋಲಿ: ರಾಮ ಮಂದಿ ನಿರ್ಮಾಣ, ಸರ್ಜಿಕಲ್ ಸ್ಟ್ರೈಕ್ ಅಥವಾ 370ನೇ ವಿಧಿ ರದ್ಧತಿಗೆ ಕಾಂಗ್ರೆಸ್ ಯಾವುದೇ ಕ್ರಮ ತೆಗೆದುಕೊಳ್ಳಲಿಲ್ಲ. ದೇಶದ ಭದ್ರತೆ ಮತ್ತು ಜನರ ಭಾವನೆಗಳ ಬಗ್ಗೆ ಕಾಂಗ್ರೆಸ್ಗೆ ಕಾಳಜಿ ಇಲ್ಲ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೋಮವಾರ ಹೇಳಿದರು.</p>.<p>ಇಲ್ಲಿ ಬಿಜೆಪಿ ಪರ ಪ್ರಚಾರ ಮಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ನಾಯಕತ್ವದಲ್ಲಿ ಭಾರತ ಉನ್ನತಿ ಕಾಣುತ್ತಿದೆ. ಜಾಗತಿಕ ಮಟ್ಟದಲ್ಲಿ ಭಾರತದ ಗೌರವ ಎತ್ತರಕ್ಕೇರುತ್ತಿದೆ ಎಂದು ಹೇಳಿದರು.</p>.<p><strong>ಮತ್ತೆ 12 ಅಭ್ಯರ್ಥಿಗಳ ಹೆಸರು ಘೋಷಿಸಿದ ಎಎಪಿ</strong></p>.<p>ಅಹಮದಾಬಾದ್ (ಪಿಟಿಐ): ಗುಜರಾತ್ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತ್ತೆ 12 ಅಭ್ಯರ್ಥಿಗಳ ಹೆಸರುಗಳನ್ನು ಆಮ್ ಆದ್ಮಿ ಪಕ್ಷ (ಎಎಪಿ) ಸೋಮವಾರ ಪ್ರಕಟಿಸಿದೆ. ಇದರಲ್ಲಿಪಾಟೀದಾರ್ ಮೀಸಲಾತಿ ಹೋರಾಟದಲ್ಲಿ ಭಾಗಿಯಾಗಿದ್ದ ಅಲ್ಪೇಶ್ ಕಥೀರಿಯಾ ಹೆಸರೂ ಸೇರಿದೆ.</p>.<p>ರಾಜ್ಯದಲ್ಲಿ ಆಡಳಿತಾರೂಢ ಬಿಜೆಪಿಗೆ ಪ್ರಬಲ ಪ್ರತಿಸ್ಪರ್ಧಿ ಎಂದು ಬಿಂಬಿಸಿಕೊಳ್ಳುತ್ತಿರುವ ಎಎಪಿ ಸೋಮವಾರ ತನ್ನ ಅಭ್ಯರ್ಥಿಗಳ 11ನೇ ಪಟ್ಟಿಯನ್ನು ಬಿಡುಗಡೆ ಮಾಡಿತು.</p>.<p>ಒಟ್ಟು 182 ವಿಧಾನಸಭಾ ಕ್ಷೇತ್ರಗಳ ಪೈಕಿಎಎಪಿ, ಈವರೆಗೆ 130 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.ಕಥೀರಿಯಾ ಅವರು ಪಾಟೀದಾರ್ ಪ್ರಾಬಲ್ಯ ಹೊಂದಿರುವ ಸೂರತ್ ನಗರದ ವರಚ್ಚಾ ರಸ್ತೆ ಕ್ಷೇತ್ರದ ಟಿಕೆಟ್ ನೀಡುವ ಸಾಧ್ಯತೆ ಇದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>