<p><strong>ಪುಣೆ/ಮುಂಬೈ</strong>: ಮಹಾರಾಷ್ಟ್ರದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು (ಎನ್ಇಪಿ) ಬಲವಂತವಾಗಿ ಜಾರಿ ಮಾಡುವಾಗ ಮರಾಠಿ ಭಾಷೆ ಕಡೆಗಣಿಸುವುದನ್ನು ಸಹಿಸಲು ಆಗದು ಎಂದು ಎನ್ಸಿಪಿ (ಎಸ್ಪಿ) ನಾಯಕಿ ಸುಪ್ರಿಯಾ ಸುಳೆ ಹೇಳಿದ್ದಾರೆ.</p>.<p>ರಾಜ್ಯದ ಮರಾಠಿ ಮತ್ತು ಇಂಗ್ಲಿಷ್ ಮಾಧ್ಯಮ ಶಾಲೆಗಳಲ್ಲಿ ಹಿಂದಿಯನ್ನು ಕಡ್ಡಾಯವಾಗಿ ತೃತೀಯ ಭಾಷೆಯನ್ನಾಗಿಸಲು ರಾಜ್ಯ ಸರ್ಕಾರ ತೀರ್ಮಾನ ಕೈಗೊಂಡಿದೆ.</p>.<p>ಎನ್ಇಪಿ ಜಾರಿಗೆ ಸರ್ಕಾರವು ಅವಸರ ಮಾಡಬಾರದು. ಏಕೆಂದರೆ ಅದರಿಂದ ವಿದ್ಯಾರ್ಥಿಗಳ ಮೇಲೆ ನಕಾರಾತ್ಮಕ ಪರಿಣಾಮ ಉಂಟಾಗುತ್ತದೆ, ಬದಲಾವಣೆಗೆ ಶಿಕ್ಷಕರು ಸಿದ್ಧರಾಗಿಲ್ಲ ಎಂದು ಸುಳೆ ಹೇಳಿದ್ದಾರೆ.</p>.<p><strong>ಉದ್ಧವ್ ಕಿಡಿ:</strong> ಮಹಾರಾಷ್ಟ್ರದಲ್ಲಿ ಹಿಂದಿಯನ್ನು ಕಡ್ಡಾಯವಾಗಿಸಲು ಅವಕಾಶ ಕೊಡುವುದಿಲ್ಲ ಎಂದು ಶಿವಸೇನಾ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಹೇಳಿದ್ದಾರೆ. ಹಿಂದಿಯ ಬಗ್ಗೆ ತಮ್ಮ ಪಕ್ಷಕ್ಕೆ ಜುಗುಪ್ಸೆ ಇಲ್ಲ, ಆದರೆ ಅದನ್ನು ಒತ್ತಾಯವಾಗಿ ಕಲಿಸಲು ಮುಂದಾಗಿರುವುದು ಏಕೆ ಎಂದು ಅವರು ಪ್ರಶ್ನಿಸಿದ್ದಾರೆ.</p>.<p>ಮಹಾರಾಷ್ಟ್ರದಲ್ಲಿ ಈವರೆಗೆ ಎರಡು ಭಾಷೆಗಳನ್ನು ಮಾತ್ರ ಕಲಿಸಲಾಗುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪುಣೆ/ಮುಂಬೈ</strong>: ಮಹಾರಾಷ್ಟ್ರದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು (ಎನ್ಇಪಿ) ಬಲವಂತವಾಗಿ ಜಾರಿ ಮಾಡುವಾಗ ಮರಾಠಿ ಭಾಷೆ ಕಡೆಗಣಿಸುವುದನ್ನು ಸಹಿಸಲು ಆಗದು ಎಂದು ಎನ್ಸಿಪಿ (ಎಸ್ಪಿ) ನಾಯಕಿ ಸುಪ್ರಿಯಾ ಸುಳೆ ಹೇಳಿದ್ದಾರೆ.</p>.<p>ರಾಜ್ಯದ ಮರಾಠಿ ಮತ್ತು ಇಂಗ್ಲಿಷ್ ಮಾಧ್ಯಮ ಶಾಲೆಗಳಲ್ಲಿ ಹಿಂದಿಯನ್ನು ಕಡ್ಡಾಯವಾಗಿ ತೃತೀಯ ಭಾಷೆಯನ್ನಾಗಿಸಲು ರಾಜ್ಯ ಸರ್ಕಾರ ತೀರ್ಮಾನ ಕೈಗೊಂಡಿದೆ.</p>.<p>ಎನ್ಇಪಿ ಜಾರಿಗೆ ಸರ್ಕಾರವು ಅವಸರ ಮಾಡಬಾರದು. ಏಕೆಂದರೆ ಅದರಿಂದ ವಿದ್ಯಾರ್ಥಿಗಳ ಮೇಲೆ ನಕಾರಾತ್ಮಕ ಪರಿಣಾಮ ಉಂಟಾಗುತ್ತದೆ, ಬದಲಾವಣೆಗೆ ಶಿಕ್ಷಕರು ಸಿದ್ಧರಾಗಿಲ್ಲ ಎಂದು ಸುಳೆ ಹೇಳಿದ್ದಾರೆ.</p>.<p><strong>ಉದ್ಧವ್ ಕಿಡಿ:</strong> ಮಹಾರಾಷ್ಟ್ರದಲ್ಲಿ ಹಿಂದಿಯನ್ನು ಕಡ್ಡಾಯವಾಗಿಸಲು ಅವಕಾಶ ಕೊಡುವುದಿಲ್ಲ ಎಂದು ಶಿವಸೇನಾ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಹೇಳಿದ್ದಾರೆ. ಹಿಂದಿಯ ಬಗ್ಗೆ ತಮ್ಮ ಪಕ್ಷಕ್ಕೆ ಜುಗುಪ್ಸೆ ಇಲ್ಲ, ಆದರೆ ಅದನ್ನು ಒತ್ತಾಯವಾಗಿ ಕಲಿಸಲು ಮುಂದಾಗಿರುವುದು ಏಕೆ ಎಂದು ಅವರು ಪ್ರಶ್ನಿಸಿದ್ದಾರೆ.</p>.<p>ಮಹಾರಾಷ್ಟ್ರದಲ್ಲಿ ಈವರೆಗೆ ಎರಡು ಭಾಷೆಗಳನ್ನು ಮಾತ್ರ ಕಲಿಸಲಾಗುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>