<p><strong>ಪುಣೆ</strong>: ರಾಜ್ಯದ ಶಾಲೆಗಳಲ್ಲಿ ತೃತೀಯ ಭಾಷೆಯಾಗಿ ಒಂದನೇ ತರಗತಿಯಿಂದಲೇ ಹಿಂದಿ ಬೋಧಿಸುವುದಕ್ಕೆ ವಿರೋಧ ವ್ಯಕ್ತಪಡಿಸಿರುವ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್, ‘ಐದನೇ ತರಗತಿಯಿಂದ ಕಲಿಸಬೇಕು’ ಎಂದಿದ್ದಾರೆ.</p>.<p>‘ವಿದ್ಯಾರ್ಥಿಗಳು ಒಂದನೇ ತರಗತಿಯಲ್ಲಿ ಮರಾಠಿ ಕಲಿಯಬೇಕು. ಇದರಿಂದಾಗಿ ಅವರು ಚೆನ್ನಾಗಿ ಓದಲು, ಬರೆಯಲು ಸಾಧ್ಯವಾಗುತ್ತದೆ’ ಎಂದು ಮುಂಬೈನಲ್ಲಿ ಮಂಗಳವಾರ ಸುದ್ದಿಗಾರರಿಗೆ ತಿಳಿಸಿದರು.</p>.<p>ಭಾಷಾ ವಿಷಯ ಕುರಿತಂತೆ ಮುಖ್ಯಮಂತ್ರಿ ಜೊತೆ ಮಾತನಾಡಿರುವುದಾಗಿಯೂ ಪವಾರ್ ಹೇಳಿದರು.</p>.<p>ನಟ ಸಯಾಜಿ ಶಿಂದೆ ಸಹ ಒಂದನೇ ತರಗತಿಯಿಂದಲೇ ಹಿಂದಿ ಪರಿಚಯಿಸುವುದನ್ನು ವಿರೋಧಿಸಿದ್ದಾರೆ.</p>.<p>ಮರಾಠಿ ಮತ್ತು ಇಂಗ್ಲಿಷ್ ಮಾಧ್ಯಮ ಶಾಲೆಗಳಲ್ಲಿ 1ರಿಂದ 5ನೇ ತರಗತಿಯ ವಿದ್ಯಾರ್ಥಿಗಳಿಗೆ ತೃತೀಯ ಭಾಷೆಯಾಗಿ ಹಿಂದಿಯನ್ನು ಕಲಿಸಲಾಗುವುದು ಎಂದು ರಾಜ್ಯ ಸರ್ಕಾರ ಕಳೆದ ವಾರ ಆದೇಶ ಹೊರಡಿಸಿದ್ದು ವಿವಾದಕ್ಕೆ ಕಾರಣವಾಗಿತ್ತು.</p>.<p>ಅಸಮಾಧಾನ ವ್ಯಕ್ತವಾದ ಬೆನ್ನಿಗೆ ಹಿಂದಿ ಕಡ್ಡಾಯವಲ್ಲ ಎಂಬುದನ್ನು ಸ್ಪಷ್ಟಪಡಿಸಿದ್ದ ಸರ್ಕಾರವು, ಹಿಂದಿ ಹೊರತುಪಡಿಸಿ ಯಾವುದೇ ಭಾರತೀಯ ಭಾಷೆಯ ಅಧ್ಯಯನ ಮಾಡಲು ಒಂದು ತರಗತಿಯಲ್ಲಿ ಕನಿಷ್ಠ 20 ವಿದ್ಯಾರ್ಥಿಗಳ ಒಪ್ಪಿಗೆಯನ್ನು ಕಡ್ಡಾಯಗೊಳಿಸಿತ್ತು.</p>.<p>‘ಸಾಹಿತಿಗಳು, ಭಾಷಾ ತಜ್ಞರು ಹಾಗೂ ರಾಜಕೀಯ ನಾಯಕರೊಂದಿಗೆ ಚರ್ಚಿಸಿದ ಬಳಿಕವೇ ತ್ರಿಭಾಷಾ ಸೂತ್ರದ ಬಗ್ಗೆ ಅಂತಿಮ ನಿರ್ಧಾರವನ್ನು ತೆಗೆದುಕೊಳ್ಳಲಾಗುವುದು’ ಎಂದು ಮುಂಬೈನಲ್ಲಿ ನಡೆದ ಸಭೆಯ ನಂತರ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪುಣೆ</strong>: ರಾಜ್ಯದ ಶಾಲೆಗಳಲ್ಲಿ ತೃತೀಯ ಭಾಷೆಯಾಗಿ ಒಂದನೇ ತರಗತಿಯಿಂದಲೇ ಹಿಂದಿ ಬೋಧಿಸುವುದಕ್ಕೆ ವಿರೋಧ ವ್ಯಕ್ತಪಡಿಸಿರುವ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್, ‘ಐದನೇ ತರಗತಿಯಿಂದ ಕಲಿಸಬೇಕು’ ಎಂದಿದ್ದಾರೆ.</p>.<p>‘ವಿದ್ಯಾರ್ಥಿಗಳು ಒಂದನೇ ತರಗತಿಯಲ್ಲಿ ಮರಾಠಿ ಕಲಿಯಬೇಕು. ಇದರಿಂದಾಗಿ ಅವರು ಚೆನ್ನಾಗಿ ಓದಲು, ಬರೆಯಲು ಸಾಧ್ಯವಾಗುತ್ತದೆ’ ಎಂದು ಮುಂಬೈನಲ್ಲಿ ಮಂಗಳವಾರ ಸುದ್ದಿಗಾರರಿಗೆ ತಿಳಿಸಿದರು.</p>.<p>ಭಾಷಾ ವಿಷಯ ಕುರಿತಂತೆ ಮುಖ್ಯಮಂತ್ರಿ ಜೊತೆ ಮಾತನಾಡಿರುವುದಾಗಿಯೂ ಪವಾರ್ ಹೇಳಿದರು.</p>.<p>ನಟ ಸಯಾಜಿ ಶಿಂದೆ ಸಹ ಒಂದನೇ ತರಗತಿಯಿಂದಲೇ ಹಿಂದಿ ಪರಿಚಯಿಸುವುದನ್ನು ವಿರೋಧಿಸಿದ್ದಾರೆ.</p>.<p>ಮರಾಠಿ ಮತ್ತು ಇಂಗ್ಲಿಷ್ ಮಾಧ್ಯಮ ಶಾಲೆಗಳಲ್ಲಿ 1ರಿಂದ 5ನೇ ತರಗತಿಯ ವಿದ್ಯಾರ್ಥಿಗಳಿಗೆ ತೃತೀಯ ಭಾಷೆಯಾಗಿ ಹಿಂದಿಯನ್ನು ಕಲಿಸಲಾಗುವುದು ಎಂದು ರಾಜ್ಯ ಸರ್ಕಾರ ಕಳೆದ ವಾರ ಆದೇಶ ಹೊರಡಿಸಿದ್ದು ವಿವಾದಕ್ಕೆ ಕಾರಣವಾಗಿತ್ತು.</p>.<p>ಅಸಮಾಧಾನ ವ್ಯಕ್ತವಾದ ಬೆನ್ನಿಗೆ ಹಿಂದಿ ಕಡ್ಡಾಯವಲ್ಲ ಎಂಬುದನ್ನು ಸ್ಪಷ್ಟಪಡಿಸಿದ್ದ ಸರ್ಕಾರವು, ಹಿಂದಿ ಹೊರತುಪಡಿಸಿ ಯಾವುದೇ ಭಾರತೀಯ ಭಾಷೆಯ ಅಧ್ಯಯನ ಮಾಡಲು ಒಂದು ತರಗತಿಯಲ್ಲಿ ಕನಿಷ್ಠ 20 ವಿದ್ಯಾರ್ಥಿಗಳ ಒಪ್ಪಿಗೆಯನ್ನು ಕಡ್ಡಾಯಗೊಳಿಸಿತ್ತು.</p>.<p>‘ಸಾಹಿತಿಗಳು, ಭಾಷಾ ತಜ್ಞರು ಹಾಗೂ ರಾಜಕೀಯ ನಾಯಕರೊಂದಿಗೆ ಚರ್ಚಿಸಿದ ಬಳಿಕವೇ ತ್ರಿಭಾಷಾ ಸೂತ್ರದ ಬಗ್ಗೆ ಅಂತಿಮ ನಿರ್ಧಾರವನ್ನು ತೆಗೆದುಕೊಳ್ಳಲಾಗುವುದು’ ಎಂದು ಮುಂಬೈನಲ್ಲಿ ನಡೆದ ಸಭೆಯ ನಂತರ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>