<p><strong>ಕೋಲ್ಕತ್ತ</strong>: ಪಶ್ಚಿಮ ಬಂಗಾಳದಲ್ಲಿ ನಕಲಿ ಮತದಾರರನ್ನು ನಿರ್ಮೂಲನೆ ಮಾಡುವ ನೆಪದಲ್ಲಿ ಹಿಂದೂಗಳನ್ನು ಮತ್ತು ಹಿಂದಿ ಮಾತನಾಡುವ ಮತದಾರರನ್ನು ಮತದಾರರ ಪಟ್ಟಿಯಿಂದ ಟಿಎಂಸಿ ತೆಗೆದುಹಾಕುತ್ತಿದೆ ಎಂದು ಬಿಜೆಪಿ ನಾಯಕ ಸುವೇಂದು ಅಧಿಕಾರಿ ಆರೋಪಿಸಿದ್ದಾರೆ.</p><p>ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಫೆಬ್ರುವರಿ 27ರಿಂದ ಅನೇಕ ಮತದಾರರನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲಾಗಿದೆ. ಮತದಾರರ ಪಟ್ಟಿಯಿಂದ ಹಿಂದೂ ಮತದಾರರ ಹೆಸರುಗಳನ್ನು ತೆಗೆದುಹಾಕಲಾಗುತ್ತಿದೆ. ಈ ಸಂಬಂಧ ಕೃಷ್ಣನಗರದ ಬಿಡಿಒ ಅವರನ್ನು ವಜಾಗೊಳಿಸುವಂತೆ ನಾನು ಚುನಾವಣಾ ಆಯೋಗವನ್ನು ಒತ್ತಾಯಿಸುತ್ತೇನೆ’ ಎಂದು ಹೇಳಿದ್ದಾರೆ.</p><p>ರಾಜ್ಯ ಸರ್ಕಾರಿ ಅಧಿಕಾರಿಗಳು ಟಿಎಂಸಿ ಜೊತೆ ಒಳ ಒಪ್ಪಂದ ಮಾಡಿಕೊಂಡಿದ್ದು, ಈ ರೀತಿಯ ಚಟುವಟಿಕೆಗಳಲ್ಲಿ ತೊಡಗಿದ್ದಾರೆ. ಹಿಂದೂ ಮತದಾರರನ್ನು ಬಾಂಗ್ಲಾದೇಶಿ ಪ್ರಜೆಗಳಲ್ಲ ಎಂದು ಸಾಬೀತುಪಡಿಸುವಂತೆ ಕೇಳಲಾಗುತ್ತಿದೆ ಎಂದು ಅಧಿಕಾರಿ ಹೇಳಿದ್ದಾರೆ.</p><p>ಆರೋಪಗಳಿಗೆ ಪ್ರತಿಕ್ರಿಯಿಸಿರುವ ಟಿಎಂಸಿ ನಾಯಕ ಜೈಪ್ರಕಾಶ್ ಮಜುಂದಾರ್, ‘ವಾಸ್ತವವೆಂದರೆ, ಹರಿಯಾಣ ಮತ್ತು ಇತರ ರಾಜ್ಯಗಳ ಮತದಾರರನ್ನು ಪಶ್ಚಿಮ ಬಂಗಾಳದ ಮತದಾರರ ಪಟ್ಟಿಗೆ ಸೇರಿಸುವ ಪ್ರಕ್ರಿಯೆಯಲ್ಲಿ ಬಿಜೆಪಿ ತೊಡಗಿದೆ. ಈಗ ಮತದಾರರ ಪಟ್ಟಿ ಹಗರಣ ಬಹಿರಂಗಗೊಂಡಿರುವುದರಿಂದ , ಜನರ ಗಮನವನ್ನು ಬೇರೆಡೆ ಸೆಳೆಯಲು ಅವರು ನಮ್ಮ ಮೇಲೆ ಆರೋಪ ಮಾಡುತ್ತಿದ್ದಾರೆ. ಇವೆಲ್ಲವು ಆಧಾರರಹಿತವಾಗಿವೆ’ ಎಂದು ಹೇಳಿದ್ದಾರೆ.</p>.ವಕ್ಫ್ ಕಾಯ್ದೆ ತಿದ್ದುಪಡಿಯನ್ನು ಪಕ್ಷ ಬಲವಾಗಿ ವಿರೋಧಿಸುತ್ತದೆ: ಬಿಆರ್ಎಸ್ ನಾಯಕಿ.ಮದುವೆಯಾದ ಕೆಲವೇ ದಿನಗಳಲ್ಲಿ ಪ್ರಿಯಕರನ ಜತೆ ಸೇರಿ ಪತಿಯ ಹತ್ಯೆಗೆ ಪತ್ನಿ ಸುಪಾರಿ!.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ</strong>: ಪಶ್ಚಿಮ ಬಂಗಾಳದಲ್ಲಿ ನಕಲಿ ಮತದಾರರನ್ನು ನಿರ್ಮೂಲನೆ ಮಾಡುವ ನೆಪದಲ್ಲಿ ಹಿಂದೂಗಳನ್ನು ಮತ್ತು ಹಿಂದಿ ಮಾತನಾಡುವ ಮತದಾರರನ್ನು ಮತದಾರರ ಪಟ್ಟಿಯಿಂದ ಟಿಎಂಸಿ ತೆಗೆದುಹಾಕುತ್ತಿದೆ ಎಂದು ಬಿಜೆಪಿ ನಾಯಕ ಸುವೇಂದು ಅಧಿಕಾರಿ ಆರೋಪಿಸಿದ್ದಾರೆ.</p><p>ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಫೆಬ್ರುವರಿ 27ರಿಂದ ಅನೇಕ ಮತದಾರರನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲಾಗಿದೆ. ಮತದಾರರ ಪಟ್ಟಿಯಿಂದ ಹಿಂದೂ ಮತದಾರರ ಹೆಸರುಗಳನ್ನು ತೆಗೆದುಹಾಕಲಾಗುತ್ತಿದೆ. ಈ ಸಂಬಂಧ ಕೃಷ್ಣನಗರದ ಬಿಡಿಒ ಅವರನ್ನು ವಜಾಗೊಳಿಸುವಂತೆ ನಾನು ಚುನಾವಣಾ ಆಯೋಗವನ್ನು ಒತ್ತಾಯಿಸುತ್ತೇನೆ’ ಎಂದು ಹೇಳಿದ್ದಾರೆ.</p><p>ರಾಜ್ಯ ಸರ್ಕಾರಿ ಅಧಿಕಾರಿಗಳು ಟಿಎಂಸಿ ಜೊತೆ ಒಳ ಒಪ್ಪಂದ ಮಾಡಿಕೊಂಡಿದ್ದು, ಈ ರೀತಿಯ ಚಟುವಟಿಕೆಗಳಲ್ಲಿ ತೊಡಗಿದ್ದಾರೆ. ಹಿಂದೂ ಮತದಾರರನ್ನು ಬಾಂಗ್ಲಾದೇಶಿ ಪ್ರಜೆಗಳಲ್ಲ ಎಂದು ಸಾಬೀತುಪಡಿಸುವಂತೆ ಕೇಳಲಾಗುತ್ತಿದೆ ಎಂದು ಅಧಿಕಾರಿ ಹೇಳಿದ್ದಾರೆ.</p><p>ಆರೋಪಗಳಿಗೆ ಪ್ರತಿಕ್ರಿಯಿಸಿರುವ ಟಿಎಂಸಿ ನಾಯಕ ಜೈಪ್ರಕಾಶ್ ಮಜುಂದಾರ್, ‘ವಾಸ್ತವವೆಂದರೆ, ಹರಿಯಾಣ ಮತ್ತು ಇತರ ರಾಜ್ಯಗಳ ಮತದಾರರನ್ನು ಪಶ್ಚಿಮ ಬಂಗಾಳದ ಮತದಾರರ ಪಟ್ಟಿಗೆ ಸೇರಿಸುವ ಪ್ರಕ್ರಿಯೆಯಲ್ಲಿ ಬಿಜೆಪಿ ತೊಡಗಿದೆ. ಈಗ ಮತದಾರರ ಪಟ್ಟಿ ಹಗರಣ ಬಹಿರಂಗಗೊಂಡಿರುವುದರಿಂದ , ಜನರ ಗಮನವನ್ನು ಬೇರೆಡೆ ಸೆಳೆಯಲು ಅವರು ನಮ್ಮ ಮೇಲೆ ಆರೋಪ ಮಾಡುತ್ತಿದ್ದಾರೆ. ಇವೆಲ್ಲವು ಆಧಾರರಹಿತವಾಗಿವೆ’ ಎಂದು ಹೇಳಿದ್ದಾರೆ.</p>.ವಕ್ಫ್ ಕಾಯ್ದೆ ತಿದ್ದುಪಡಿಯನ್ನು ಪಕ್ಷ ಬಲವಾಗಿ ವಿರೋಧಿಸುತ್ತದೆ: ಬಿಆರ್ಎಸ್ ನಾಯಕಿ.ಮದುವೆಯಾದ ಕೆಲವೇ ದಿನಗಳಲ್ಲಿ ಪ್ರಿಯಕರನ ಜತೆ ಸೇರಿ ಪತಿಯ ಹತ್ಯೆಗೆ ಪತ್ನಿ ಸುಪಾರಿ!.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>