<p><strong>ಮೀರಠ್:</strong> ರಾಷ್ಟ್ರಪಿತ ಮಹಾತ್ಮ ಗಾಂಧಿಯವರ ಹುತಾತ್ಮ ದಿನದಂದೇ, ಅವರನ್ನು ಕೊಲೆ ಮಾಡಿದ ನ್ಯಾಥೂರಾಮ್ ಗೋಡ್ಸೆಯನ್ನು ಅಖಿಲ ಭಾರತ ಹಿಂದೂ ಮಹಾಸಭಾ ಗುರುವಾರ ಗೌರವಿಸಿದೆ.</p><p>1948ರ ಜನವರಿ 30ರಂದು ಮಹಾತ್ಮ ಗಾಂಧಿಯನ್ನು ಗೋಡ್ಸೆ ಕೊಲೆ ಮಾಡಿದ್ದ.</p>.ಪ್ರಧಾನಿ ಮೋದಿ, ರಾಹುಲ್ ಗಾಂಧಿ, ಖರ್ಗೆಯಿಂದ ಮಹಾತ್ಮ ಗಾಂಧಿ ಸಮಾಧಿಗೆ ಪುಷ್ಪ ನಮನ.<p>‘ಅಮರ ಹುತಾತ್ಮ ನ್ಯಾಥೂರಾಮ ಗೋಡ್ಸೆ ನಾನಾ ಅಪ್ಟೆ ಧಾಮ’ದಲ್ಲಿ ಸಭೆ ಸೇರಿದ ಹಿಂದೂ ಮಹಾಸಭಾ ಸದಸ್ಯರು, ಮಹಾತ್ಮ ಗಾಂಧಿ ಕೊಲೆ ಮಾಡಿದ್ದಕ್ಕೆ ಗೋಡ್ಸೆಯನ್ನು ಹೊಗಳಿದ್ದಾರೆ.</p><p>ಸ್ಥಳದಲ್ಲಿ ನಡೆದ ಹವನ, ಪೂಜೆ ಹಾಗೂ ಹನುಮಾನ್ ಚಾಲೀಸ ಪಠಣಕ್ಕೆ ಮಹಾಸಭಾದ ನಾಯಕ ಹಾಗೂ ನಾನಾ ಅಪ್ಟೆ ಧಾಮದ ಸಂಸ್ಥಾಪಕ ಪಂಡಿತ್ ಅಶೋಕ್ ಶರ್ಮಾ ನೇತೃತ್ವ ನೀಡಿದರು.</p><p>ಸಮಾರಂಭವು ‘ಕರಮಚಂದ್ ಗಾಂಧಿಯವರ ಆತ್ಮವನ್ನು ತೆಗೆದುಹಾಕುವುದು’ ಮತ್ತು ಭಾರತದಿಂದ ‘ಗಾಂಧಿವಾದ’ವನ್ನು ಅನ್ನು ತೊಡೆದುಹಾಕುವ ಗುರಿಯನ್ನು ಹೊಂದಿದೆ ಎಂದು ಹೇಳಲಾಗಿದೆ.</p>.VIDEO: ರಾಜ್ಘಾಟ್ನಲ್ಲಿ ಮಹಾತ್ಮ ಗಾಂಧಿ ಸಮಾಧಿಗೆ ಶ್ರೀಲಂಕಾ ಅಧ್ಯಕ್ಷ ನಮನ.<p>ಅಲ್ಲದೆ ಮಹಾತ್ಮ ಗಾಂಧಿಯವರಿಗೆ ಇರುವ ‘ರಾಷ್ಟ್ರ ಪಿತ’ ಎನ್ನುವ ಬಿರುದನ್ನು ತೆಗೆದುಹಾಕಬೇಕು ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.</p><p>ಮಹಾತ್ಮ ಗಾಂಧಿ ಹತ್ಯೆಯಲ್ಲಿ ಭಾಗಿಯಾದ ನ್ಯಾಥೂರಾಮ ಗೋಡ್ಸೆ ಹಾಗೂ ನಾರಾಯಣ ನಾನಾ ಅಪ್ಟೆಯವರ ಕುಟುಂಬವನ್ನು ಸನ್ಮಾನಿಸುವುದಾಗಿ ಇದೇ ವೇಳೆ ಸಮಾರಂಭದಲ್ಲಿ ಘೋಷಿಸಲಾಯಿತು.</p><p>ಬೆಂಬಲಿಗರಿಗೆ ಸಿಹಿ ಹಂಚುವ ಮೂಲಕ ಕಾರ್ಯಕ್ರಮ ಮುಕ್ತಾಯಗೊಂಡಿತು.</p>.ಮಹಾತ್ಮ ಗಾಂಧಿ ಪ್ರತಿಮೆ ಮೇಲೆ ಪಟಾಕಿ ಸಿಡಿಸಿದ ಬಾಲಕರು; ಹಾರ ಹಾಕಿ ಕ್ಷಮೆಯಾಚನೆ.<p>1948ರ ಜನವರಿ 30ರಂದು ಬಿರ್ಲಾ ಮಂದಿರದಿಂದ ಪ್ರಾರ್ಥನೆ ಮುಗಿಸಿ ಬರುತ್ತಿದ್ದ ಗಾಂಧಿಯವರನ್ನು </p><p>ಹಿಂದೂ ಮಹಾಸಭಾದ ಸದಸ್ಯನಾಗಿದ್ದ ಗೋಡ್ಸೆ ಗುಂಡಿಕ್ಕಿ ಕೊಲೆ ಮಾಡಿದ್ದ. 1949ರಲ್ಲಿ ಆತನನ್ನು ಅಂಬಾಲ ಜೈಲಿನಲ್ಲಿ ಗಲ್ಲಿಗೇರಿಸಲಾಗಿತ್ತು.</p> .ಮಹಾತ್ಮ ಗಾಂಧಿ ಪ್ರತಿಮೆ ತೆರವು: ಮಾಹಿತಿ ಇಲ್ಲವೆಂದ ಅಸ್ಸಾಂ ಸಿಎಂ ಹಿಮಂತ ಶರ್ಮಾ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೀರಠ್:</strong> ರಾಷ್ಟ್ರಪಿತ ಮಹಾತ್ಮ ಗಾಂಧಿಯವರ ಹುತಾತ್ಮ ದಿನದಂದೇ, ಅವರನ್ನು ಕೊಲೆ ಮಾಡಿದ ನ್ಯಾಥೂರಾಮ್ ಗೋಡ್ಸೆಯನ್ನು ಅಖಿಲ ಭಾರತ ಹಿಂದೂ ಮಹಾಸಭಾ ಗುರುವಾರ ಗೌರವಿಸಿದೆ.</p><p>1948ರ ಜನವರಿ 30ರಂದು ಮಹಾತ್ಮ ಗಾಂಧಿಯನ್ನು ಗೋಡ್ಸೆ ಕೊಲೆ ಮಾಡಿದ್ದ.</p>.ಪ್ರಧಾನಿ ಮೋದಿ, ರಾಹುಲ್ ಗಾಂಧಿ, ಖರ್ಗೆಯಿಂದ ಮಹಾತ್ಮ ಗಾಂಧಿ ಸಮಾಧಿಗೆ ಪುಷ್ಪ ನಮನ.<p>‘ಅಮರ ಹುತಾತ್ಮ ನ್ಯಾಥೂರಾಮ ಗೋಡ್ಸೆ ನಾನಾ ಅಪ್ಟೆ ಧಾಮ’ದಲ್ಲಿ ಸಭೆ ಸೇರಿದ ಹಿಂದೂ ಮಹಾಸಭಾ ಸದಸ್ಯರು, ಮಹಾತ್ಮ ಗಾಂಧಿ ಕೊಲೆ ಮಾಡಿದ್ದಕ್ಕೆ ಗೋಡ್ಸೆಯನ್ನು ಹೊಗಳಿದ್ದಾರೆ.</p><p>ಸ್ಥಳದಲ್ಲಿ ನಡೆದ ಹವನ, ಪೂಜೆ ಹಾಗೂ ಹನುಮಾನ್ ಚಾಲೀಸ ಪಠಣಕ್ಕೆ ಮಹಾಸಭಾದ ನಾಯಕ ಹಾಗೂ ನಾನಾ ಅಪ್ಟೆ ಧಾಮದ ಸಂಸ್ಥಾಪಕ ಪಂಡಿತ್ ಅಶೋಕ್ ಶರ್ಮಾ ನೇತೃತ್ವ ನೀಡಿದರು.</p><p>ಸಮಾರಂಭವು ‘ಕರಮಚಂದ್ ಗಾಂಧಿಯವರ ಆತ್ಮವನ್ನು ತೆಗೆದುಹಾಕುವುದು’ ಮತ್ತು ಭಾರತದಿಂದ ‘ಗಾಂಧಿವಾದ’ವನ್ನು ಅನ್ನು ತೊಡೆದುಹಾಕುವ ಗುರಿಯನ್ನು ಹೊಂದಿದೆ ಎಂದು ಹೇಳಲಾಗಿದೆ.</p>.VIDEO: ರಾಜ್ಘಾಟ್ನಲ್ಲಿ ಮಹಾತ್ಮ ಗಾಂಧಿ ಸಮಾಧಿಗೆ ಶ್ರೀಲಂಕಾ ಅಧ್ಯಕ್ಷ ನಮನ.<p>ಅಲ್ಲದೆ ಮಹಾತ್ಮ ಗಾಂಧಿಯವರಿಗೆ ಇರುವ ‘ರಾಷ್ಟ್ರ ಪಿತ’ ಎನ್ನುವ ಬಿರುದನ್ನು ತೆಗೆದುಹಾಕಬೇಕು ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.</p><p>ಮಹಾತ್ಮ ಗಾಂಧಿ ಹತ್ಯೆಯಲ್ಲಿ ಭಾಗಿಯಾದ ನ್ಯಾಥೂರಾಮ ಗೋಡ್ಸೆ ಹಾಗೂ ನಾರಾಯಣ ನಾನಾ ಅಪ್ಟೆಯವರ ಕುಟುಂಬವನ್ನು ಸನ್ಮಾನಿಸುವುದಾಗಿ ಇದೇ ವೇಳೆ ಸಮಾರಂಭದಲ್ಲಿ ಘೋಷಿಸಲಾಯಿತು.</p><p>ಬೆಂಬಲಿಗರಿಗೆ ಸಿಹಿ ಹಂಚುವ ಮೂಲಕ ಕಾರ್ಯಕ್ರಮ ಮುಕ್ತಾಯಗೊಂಡಿತು.</p>.ಮಹಾತ್ಮ ಗಾಂಧಿ ಪ್ರತಿಮೆ ಮೇಲೆ ಪಟಾಕಿ ಸಿಡಿಸಿದ ಬಾಲಕರು; ಹಾರ ಹಾಕಿ ಕ್ಷಮೆಯಾಚನೆ.<p>1948ರ ಜನವರಿ 30ರಂದು ಬಿರ್ಲಾ ಮಂದಿರದಿಂದ ಪ್ರಾರ್ಥನೆ ಮುಗಿಸಿ ಬರುತ್ತಿದ್ದ ಗಾಂಧಿಯವರನ್ನು </p><p>ಹಿಂದೂ ಮಹಾಸಭಾದ ಸದಸ್ಯನಾಗಿದ್ದ ಗೋಡ್ಸೆ ಗುಂಡಿಕ್ಕಿ ಕೊಲೆ ಮಾಡಿದ್ದ. 1949ರಲ್ಲಿ ಆತನನ್ನು ಅಂಬಾಲ ಜೈಲಿನಲ್ಲಿ ಗಲ್ಲಿಗೇರಿಸಲಾಗಿತ್ತು.</p> .ಮಹಾತ್ಮ ಗಾಂಧಿ ಪ್ರತಿಮೆ ತೆರವು: ಮಾಹಿತಿ ಇಲ್ಲವೆಂದ ಅಸ್ಸಾಂ ಸಿಎಂ ಹಿಮಂತ ಶರ್ಮಾ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>