‘ಭಾರತವನ್ನು ಪಾಕಿಸ್ತಾನದ ಜೊತೆ ಏಕೀಕರಣ ಮಾಡಿ ಅಖಂಡ ಭಾರತವನ್ನಾಗಿ ಮಾಡುವ ಸಂಕಲ್ಪದೊಂದಿಗೆ ನಾವು ಭಾರತ ಮಾತೆಗೆ ಆರತಿ ಬೆಳಗಿದ್ದೇವೆ. 1948ರ ಜನವರಿ 30 ರಂದು ಗೋಡ್ಸೆ ಮತ್ತು ಆಪ್ಟೆ ಅವರನ್ನು ಬಂಧಿಸಿದ್ದಕ್ಕಾಗಿ ವಿರೋಧದ ರೂಪದಲ್ಲಿ ಜನವರಿ 30 ಅನ್ನು ‘ಗೋಡ್ಸೆ–ಆಪ್ಟೆ ಸ್ಮೃತಿ ದಿನ’ ಎಂದು ಆಚರಿಸುತ್ತಿದ್ದೇವೆ’ ಎಂದು ಹಿಂದೂ ಮಹಾಸಭಾದ ರಾಷ್ಟ್ರೀಯ ಉಪಾಧ್ಯಕ್ಷ ಜೈವೀರ್ ಭಾರಧ್ವಾಜ್ ಗ್ವಾಲಿಯರ್ನಿಂದ ದೂರವಾಣಿ ಮೂಲಕ ಪಿಟಿಐಗೆ ತಿಳಿಸಿದರು.