<p><strong>ಅಹಮದಾಬಾದ್: </strong>ಗುಜರಾತ್ನ ಜಾಮ್ನಗರದ ದೇವಸ್ಥಾನವೊಂದರ ಆವರಣದಲ್ಲಿ ಹಿಂದೂ ಸೇನಾ ಸಂಘಟನೆಯ ಕಾರ್ಯಕರ್ತರು ಸ್ಥಾಪಿಸಿದ್ದ ನಾಥೂರಾಮ್ ಗೋಡ್ಸೆ ಪುತ್ಥಳಿಯನ್ನು ಕಾಂಗ್ರೆಸ್ ಮುಖಂಡರು ಮಂಗಳವಾರ ಧ್ವಂಸ ಮಾಡಿದ್ದಾರೆ.</p>.<p>‘ಇದು ಹಿಂದೂ ಸೇನಾ ಕಾರ್ಯಕರ್ತರು ಎಸಗಿರುವ ದೇಶದ್ರೋಹವಾಗಿದ್ದು, ಈ ಕುರಿತು ಪೊಲೀಸ್ ಠಾಣೆಗೆ ದೂರು ನೀಡಲಾಗುವುದು’ ಎಂದು ಕಾಂಗ್ರೆಸ್ ನಾಯಕರು ಹೇಳಿದ್ದಾರೆ.</p>.<p>‘ಬೆಂಬಲಿಗರೊಂದಿಗೆ ಹನುಮಾನ್ ಮಂದಿರಕ್ಕೆ ಮಂಗಳವಾರ ಬೆಳಿಗ್ಗೆ ತೆರಳಿ, ಗೋಡ್ಸೆ ಪುತ್ಥಳಿಯನ್ನು ಧ್ವಂಸ ಮಾಡಲಾಯಿತು’ ಎಂದು ಕಾಂಗ್ರೆಸ್ನ ಜಾಮ್ನಗರ ಘಟಕದ ಅಧ್ಯಕ್ಷ ದಿಗುಭಾ ಜಡೇಜಾ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>ಮಹಾತ್ಮ ಗಾಂಧಿ ಹಂತಕ ನಾಥೂರಾಮ್ ಗೋಡ್ಸೆ ಪುತ್ಥಳಿಯನ್ನು ಹಿಂದೂ ಸೇನಾ ಅಧ್ಯಕ್ಷ ಪ್ರತೀಕ್ ಭಟ್ ನೇತೃತ್ವದಲ್ಲಿ ಕಾರ್ಯಕರ್ತರು ಇಲ್ಲಿನ ಹನುಮಾನ್ ಮಂದಿರದಲ್ಲಿ ಸೋಮವಾರ ಸ್ಥಾಪಿಸಿದ್ದರು. ಪುತ್ಥಳಿಯನ್ನು ಧ್ವಂಸಗೊಳಿಸಿದ್ದಕ್ಕಾಗಿ ಕಾಂಗ್ರೆಸ್ ಮುಖಂಡರ ವಿರುದ್ಧ ದೂರು ದಾಖಲಿಸುವುದಾಗಿ ಸಂಘಟನೆ ಮುಖಂಡರು ಎಚ್ಚರಿಕೆ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಹಮದಾಬಾದ್: </strong>ಗುಜರಾತ್ನ ಜಾಮ್ನಗರದ ದೇವಸ್ಥಾನವೊಂದರ ಆವರಣದಲ್ಲಿ ಹಿಂದೂ ಸೇನಾ ಸಂಘಟನೆಯ ಕಾರ್ಯಕರ್ತರು ಸ್ಥಾಪಿಸಿದ್ದ ನಾಥೂರಾಮ್ ಗೋಡ್ಸೆ ಪುತ್ಥಳಿಯನ್ನು ಕಾಂಗ್ರೆಸ್ ಮುಖಂಡರು ಮಂಗಳವಾರ ಧ್ವಂಸ ಮಾಡಿದ್ದಾರೆ.</p>.<p>‘ಇದು ಹಿಂದೂ ಸೇನಾ ಕಾರ್ಯಕರ್ತರು ಎಸಗಿರುವ ದೇಶದ್ರೋಹವಾಗಿದ್ದು, ಈ ಕುರಿತು ಪೊಲೀಸ್ ಠಾಣೆಗೆ ದೂರು ನೀಡಲಾಗುವುದು’ ಎಂದು ಕಾಂಗ್ರೆಸ್ ನಾಯಕರು ಹೇಳಿದ್ದಾರೆ.</p>.<p>‘ಬೆಂಬಲಿಗರೊಂದಿಗೆ ಹನುಮಾನ್ ಮಂದಿರಕ್ಕೆ ಮಂಗಳವಾರ ಬೆಳಿಗ್ಗೆ ತೆರಳಿ, ಗೋಡ್ಸೆ ಪುತ್ಥಳಿಯನ್ನು ಧ್ವಂಸ ಮಾಡಲಾಯಿತು’ ಎಂದು ಕಾಂಗ್ರೆಸ್ನ ಜಾಮ್ನಗರ ಘಟಕದ ಅಧ್ಯಕ್ಷ ದಿಗುಭಾ ಜಡೇಜಾ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>ಮಹಾತ್ಮ ಗಾಂಧಿ ಹಂತಕ ನಾಥೂರಾಮ್ ಗೋಡ್ಸೆ ಪುತ್ಥಳಿಯನ್ನು ಹಿಂದೂ ಸೇನಾ ಅಧ್ಯಕ್ಷ ಪ್ರತೀಕ್ ಭಟ್ ನೇತೃತ್ವದಲ್ಲಿ ಕಾರ್ಯಕರ್ತರು ಇಲ್ಲಿನ ಹನುಮಾನ್ ಮಂದಿರದಲ್ಲಿ ಸೋಮವಾರ ಸ್ಥಾಪಿಸಿದ್ದರು. ಪುತ್ಥಳಿಯನ್ನು ಧ್ವಂಸಗೊಳಿಸಿದ್ದಕ್ಕಾಗಿ ಕಾಂಗ್ರೆಸ್ ಮುಖಂಡರ ವಿರುದ್ಧ ದೂರು ದಾಖಲಿಸುವುದಾಗಿ ಸಂಘಟನೆ ಮುಖಂಡರು ಎಚ್ಚರಿಕೆ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>