<p><strong>ಅಲಿಗಢ:</strong> ಮಸೀದಿಯಲ್ಲಿ ನಡೆಯುವ ಪ್ರಾರ್ಥನೆಯಲ್ಲಿ ಸಕ್ರೀಯವಾಗಿದ್ದ ಹಿಂದೂ ಸಮುದಾಯಕ್ಕೆ ಸೇರಿದ ವರ್ತಕನ ವಿರುದ್ಧ ಬಲಪಂಥೀಯ ಸಂಘಟನೆಗಳು ವ್ಯಾಪಕ ವಿರೋಧ ವ್ಯಕ್ತಪಡಿಸಿವೆ. ಶುದ್ಧೀಕರಣಕ್ಕೆ ಒಳಗಾಗುವಂತೆ ವ್ಯಕ್ತಿಯನ್ನು ಒತ್ತಾಯಿಸಿವೆ. </p><p>ಸುನಿಲ್ ರಜನಿ ಎಂಬುವವರು ಎಲ್ಲಾ ಸಮುದಾಯಗಳೂ ಇರುವ ಭಂಜಾ ಪ್ರದೇಶದಲ್ಲಿ ವಾಸಿಸುತ್ತಿದ್ದಾರೆ. ತಮ್ಮ ನೆರೆಹೊರೆಯ ಮುಸ್ಲಿಂ ಸ್ನೇಹಿತರೊಂದಿಗೆ ಸೇರಿ ಗುರುವಾರ ಸಂಜೆ ಪ್ರಾರ್ಥನೆಯಲ್ಲಿ ಪಾಲ್ಗೊಂಡಿದ್ದರು. ಈ ದೃಶ್ಯಾವಳಿ ಸಾಮಾಜಿಕ ಮಾಧ್ಯಗಳಲ್ಲಿ ವ್ಯಾಪಕವಾಗಿ ಹರಿದಾಡಿತು. </p><p>ಮಸೀದಿಯಿಂದ ಹೊರ ಬರುತ್ತಲೇ ರಜನಿ ಅವರಿಗೆ ಎದುರಾದ ಹಿಂದೂ ಸಂಘಟನೆಗಳ ಕಾರ್ಯಕರ್ತರು, ಇದು ಪ್ರಚೋದನೆಯಾಗಿದ್ದು, ಗಂಗಾಜಲವನ್ನು ಪ್ರೋಕ್ಷಿಸಿಕೊಂಡು ಕೂಡಲೇ ಶುದ್ಧರಾಗುವಂತೆ ಸೂಚಿಸಿದ್ದಾರೆ.</p><p>‘ಸುನಿಲ್ ಅವರದ್ದು ಧರ್ಮ ವಿರೋಧಿ ನಡೆಯಾಗಿದೆ. ಇದಕ್ಕಾಗಿ ಅವರು ಸಾರ್ವಜನಿಕರ ಕ್ಷೇಮೆ ಕೇಳಬೇಕು. ಜತೆಗೆ ದೇವಾಲಯದಲ್ಲಿ ಶುದ್ಧೀಕರಣ ಪ್ರಕ್ರಿಯೆಗೆ ಒಳಗಾಗಬೇಕು’ ಎಂದು ಭಾರತೀಯ ಜನತಾ ಯುವ ಮೋರ್ಚಾದ ಸ್ಥಳೀಯ ಮುಖಂಡ ಮೋನು ಅಗರ್ವಾಲ್ ಆಗ್ರಹಿಸಿದ್ದಾರೆ.</p><p>ಈ ಘಟನೆ ಕುರಿತಂತೆ ದೂರು ದಾಖಲಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಲಿಗಢ:</strong> ಮಸೀದಿಯಲ್ಲಿ ನಡೆಯುವ ಪ್ರಾರ್ಥನೆಯಲ್ಲಿ ಸಕ್ರೀಯವಾಗಿದ್ದ ಹಿಂದೂ ಸಮುದಾಯಕ್ಕೆ ಸೇರಿದ ವರ್ತಕನ ವಿರುದ್ಧ ಬಲಪಂಥೀಯ ಸಂಘಟನೆಗಳು ವ್ಯಾಪಕ ವಿರೋಧ ವ್ಯಕ್ತಪಡಿಸಿವೆ. ಶುದ್ಧೀಕರಣಕ್ಕೆ ಒಳಗಾಗುವಂತೆ ವ್ಯಕ್ತಿಯನ್ನು ಒತ್ತಾಯಿಸಿವೆ. </p><p>ಸುನಿಲ್ ರಜನಿ ಎಂಬುವವರು ಎಲ್ಲಾ ಸಮುದಾಯಗಳೂ ಇರುವ ಭಂಜಾ ಪ್ರದೇಶದಲ್ಲಿ ವಾಸಿಸುತ್ತಿದ್ದಾರೆ. ತಮ್ಮ ನೆರೆಹೊರೆಯ ಮುಸ್ಲಿಂ ಸ್ನೇಹಿತರೊಂದಿಗೆ ಸೇರಿ ಗುರುವಾರ ಸಂಜೆ ಪ್ರಾರ್ಥನೆಯಲ್ಲಿ ಪಾಲ್ಗೊಂಡಿದ್ದರು. ಈ ದೃಶ್ಯಾವಳಿ ಸಾಮಾಜಿಕ ಮಾಧ್ಯಗಳಲ್ಲಿ ವ್ಯಾಪಕವಾಗಿ ಹರಿದಾಡಿತು. </p><p>ಮಸೀದಿಯಿಂದ ಹೊರ ಬರುತ್ತಲೇ ರಜನಿ ಅವರಿಗೆ ಎದುರಾದ ಹಿಂದೂ ಸಂಘಟನೆಗಳ ಕಾರ್ಯಕರ್ತರು, ಇದು ಪ್ರಚೋದನೆಯಾಗಿದ್ದು, ಗಂಗಾಜಲವನ್ನು ಪ್ರೋಕ್ಷಿಸಿಕೊಂಡು ಕೂಡಲೇ ಶುದ್ಧರಾಗುವಂತೆ ಸೂಚಿಸಿದ್ದಾರೆ.</p><p>‘ಸುನಿಲ್ ಅವರದ್ದು ಧರ್ಮ ವಿರೋಧಿ ನಡೆಯಾಗಿದೆ. ಇದಕ್ಕಾಗಿ ಅವರು ಸಾರ್ವಜನಿಕರ ಕ್ಷೇಮೆ ಕೇಳಬೇಕು. ಜತೆಗೆ ದೇವಾಲಯದಲ್ಲಿ ಶುದ್ಧೀಕರಣ ಪ್ರಕ್ರಿಯೆಗೆ ಒಳಗಾಗಬೇಕು’ ಎಂದು ಭಾರತೀಯ ಜನತಾ ಯುವ ಮೋರ್ಚಾದ ಸ್ಥಳೀಯ ಮುಖಂಡ ಮೋನು ಅಗರ್ವಾಲ್ ಆಗ್ರಹಿಸಿದ್ದಾರೆ.</p><p>ಈ ಘಟನೆ ಕುರಿತಂತೆ ದೂರು ದಾಖಲಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>