‘ಸಮಾಜ ಸೇವೆಯ ವಿಷಯ ಬಂದಾಗ ದೇಶದ ವಿಚಾರವಂತರು ಕ್ರೈಸ್ತ ಮಿಷನರಿಗಳ ಹೆಸರು ಉಲ್ಲೇಖಿಸುತ್ತಾರೆ. ಮಿಷನರಿ ಸಂಘಟನೆಗಳು ಜಗತ್ತಿನಾದ್ಯಂತ ಹಲವಾರು ಶಾಲೆಗಳು, ಆಸ್ಪತ್ರೆಗಳು, ಸಂಘ–ಸಂಸ್ಥೆಗಳನ್ನು ನಡೆಸುತ್ತಿವೆ ಎಂಬುದು ಎಲ್ಲರಿಗೂ ತಿಳಿದಿದೆ. ಆದರೆ ಹಿಂದೂ ಸಂತರು ಏನು ಮಾಡುತ್ತಾರೆ? ಇದೇ ಆಲೋಚನೆಯಲ್ಲಿ ಚೆನ್ನೈನಲ್ಲಿ ಹಿಂದೂ ಸೇವಾ ಜಾತ್ರೆ ಆಯೋಜಿಸಲಾಗಿತ್ತು. ಕನ್ನಡ, ತೆಲುಗು, ಮಲಯಾಳ, ತಮಿಳು ಭಾಷಾ ಪ್ರಾಂತ್ಯಗಳಲ್ಲಿ ಆಚಾರ್ಯರು, ಮುನಿಗಳು, ಸನ್ಯಾಸಿಗಳು ಮಾಡಿದ ಸಮಾಜ ಸೇವೆಯು ಮಿಷನರಿಗಳ ಸಮಾಜಸೇವೆಗಿಂತ ಬಹುದೊಡ್ಡದು ಎಂಬುದು ತಿಳಿಯಿತು’ ಎಂದು ಅವರು ಹೇಳಿದರು.