ಆರ್ಎಸ್ಎಸ್ ವತಿಯಿಂದ ಇಲ್ಲಿ ಆಯೋಜನೆಗೊಂಡಿದ್ದ ರಾಷ್ಟ್ರೀಯ ಸೇವಾ ಸಂಗಮ ಕಾರ್ಯಕ್ರಮದಲ್ಲಿ ಮಾತನಾಡಿದ ಭಾಗವತ್, 'ಸೇವೆಯು ಆರೋಗ್ಯಕರ ಸಮಾಜವನ್ನು ಕಟ್ಟಲು ನೆರವಾಗುತ್ತದೆ. ಸಮಾಜದ ಯಾವುದೇ ವರ್ಗವು ಅವಕಾಶದಿಂದ ವಂಚಿತವಾಗುತ್ತಿದ್ದರೆ, ಅದನ್ನು ದೇಶದ ಒಳಿತಿನ ದೃಷ್ಟಿಯಿಂದ ಮೇಲೆತ್ತಬೇಕು' ಎಂದು ಉಲ್ಲೇಖಿಸಿದ್ದಾರೆ.