<p><strong>ನವದೆಹಲಿ</strong>: ‘ನರೇಂದ್ರ ಮೋದಿ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಅವರ ಬೆಳವಣಿಗೆಯನ್ನು ತಡೆದು, ಮುಸಲ್ಮಾನರನ್ನು ಒಲೈಸುವ ಉದ್ದೇಶದಿಂದಲೇ, ‘ಹಿಂದೂ ಭಯೋತ್ಪಾದನೆ’ ಕಟ್ಟುಕಥೆಯನ್ನು ಕಾಂಗ್ರೆಸ್ ಸೃಷ್ಟಿಸಿತ್ತು’ ಎಂದು ಬಿಜೆಪಿ ಆರೋಪಿಸಿದೆ.</p><p>ಮಾಲೇಗಾಂವ್ ಬಾಂಬ್ ಸ್ಫೋಟದಲ್ಲಿ ಎಲ್ಲಾ ಆರೋಪಿಗಳನ್ನು ನ್ಯಾಯಾಲಯವು ಖುಲಾಸೆಗೊಳಿಸಿದ್ದನ್ನು ಬಿಜೆಪಿ ನಾಯಕ ರವಿಶಂಕರ್ ಪ್ರಸಾದ್ ಸ್ವಾಗತಿಸಿದ್ದಾರೆ.</p><p>‘ಈ ಪ್ರಕರಣದಲ್ಲಿ ಆರೋಪಿಗಳಾಗಿದ್ದ ಬಿಜೆಪಿಯ ಮಾಜಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್, ಲೆಫ್ಟಿನೆಂಟ್ ಕರ್ನಲ್ ಪ್ರಸಾದ್ ಪುರೋಹಿತ್ ಅವರಿಗೆ ಸೂಕ್ತ ಪರಿಹಾರ ನೀಡಬೇಕು. ಅವರ ವಿರುದ್ಧ ಆರೋಪ ಸಾಬೀತುಪಡಿಸಲು ಪುರಾವೆಗಳನ್ನು ಸೃಷ್ಟಿಸಿ, ಹಿಂಸೆ ನೀಡಿದ ಪ್ರಾಸಿಕ್ಯೂಸನ್ ಕ್ಷಮೆಕೇಳಬೇಕು’ ಎಂದು ಈ ವೇಳೆ ಒತ್ತಾಯಿಸಿದ್ದಾರೆ.</p><p>‘ವೋಟ್ ಬ್ಯಾಂಕ್ ಓಲೈಕೆಗಾಗಿ, ಕಾಂಗ್ರೆಸ್ ಯಾವುದೇ ಹಂತ ತಲುಪಲೂ ಹಿಂಜರಿಯುವುದಿಲ್ಲ. ಈ ಪ್ರಕರಣವು ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ಪಕ್ಷವು ಅತ್ಯಂತ ವ್ಯವಸ್ಥಿತವಾಗಿ ರೂಪಿಸಿದ ಪಿತೂರಿಯಾಗಿದೆ. ಪ್ರಕರಣದಲ್ಲಿ ಎಲ್ಲ ಖುಲಾಸೆಯಾಗಿರುವುದು ಐತಿಹಾಸಿಕ ದಿನವಾಗಿದೆ’ ಎಂದು ಅವರು ಹೇಳಿದ್ದಾರೆ.</p>.2008ರ ಮಾಲೆಗಾಂವ್ ಸ್ಫೋಟ ಪ್ರಕರಣ:ಇದು ಭಗವಾ, ಹಿಂದುತ್ವದ ಜಯ ಎಂದ ಸಾದ್ವಿ ಪ್ರಜ್ಞಾ.Malegaon Blasts Case | ಆರೋಪದಿಂದ ಖುಲಾಸೆವರೆಗೆ ಪ್ರಕರಣ ಸಾಗಿಬಂದ ಹಾದಿ.<p>‘ಹಿಂದೂ ಭಯೋತ್ಪಾದಕ ಸಂಘಟನೆಗಳನ್ನು ‘ಕೇಸರಿ ಭಯೋತ್ಪಾದನೆ’ ಎಂದು ಬಿಂಬಿಸುವ ಕಾಂಗ್ರೆಸ್ನ ಹೋರಾಟವು ಈ ತೀರ್ಪಿನ ಮೂಲಕ ನೆಲಕಚ್ಚಿದೆ’ ಎಂದು ರವಿಶಂಕರ್ ಪ್ರಸಾದ್ ತಿಳಿಸಿದ್ದಾರೆ.</p><p><strong>ಪ್ರತಿಕ್ರಿಯೆಗೆ ರಾಹುಲ್ ನಿರಾಕರಣೆ:</strong> ನ್ಯಾಯಾಲಯದ ತೀರ್ಪಿನ ಕುರಿತಂತೆ ಪ್ರತಿಕ್ರಿಯೆ ನೀಡಲು ರಾಹುಲ್ ಗಾಂಧಿ ನಿರಾಕರಿಸಿದ್ದಾರೆ.</p><p>‘ಹಿಂದೂ ಮೂಲಭೂತವಾದಿ ಸಂಘಟನೆಗಳು ಎಲ್ಇಟಿಗಿಂತಲೂ ಅಪಾಯಕಾರಿ ಎಂದು 2010ರಲ್ಲಿ ರಾಹುಲ್ ಗಾಂಧಿ ಅವರು ಅಮೆರಿಕದ ರಾಯಭಾರಿಯ ಮುಂದೆ ತಿಳಿಸಿದ್ದರು ಎಂದು ‘ವಿಕಿಲೀಕ್ಸ್’ ಬಹಿರಂಗಪಡಿಸಿತ್ತು. ಈಗ ಆ ವಾದವು ಸಂಪೂರ್ಣವಾಗಿ ನೆಲಕಚ್ಚಿದ್ದು, ಸತ್ಯ ವಿಚಾರದಿಂದ ಅವರು ದೂರ ಓಡಿಹೋಗುತ್ತಿದ್ದಾರೆ’ ಎಂದು ಆರೋಪಿಸಿದ್ದಾರೆ.</p><p>‘ಈ ಕುರಿತು ಕಾಂಗ್ರೆಸ್ ಮಾಜಿ ಅಧ್ಯಕ್ಷರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರು ದೇಶದ ಜನತೆ ಮುಂದೆ ಕ್ಷಮೆಯಾಚಿಸಬೇಕು’ ಎಂದು ಈ ವೇಳೆ ಒತ್ತಾಯಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ‘ನರೇಂದ್ರ ಮೋದಿ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಅವರ ಬೆಳವಣಿಗೆಯನ್ನು ತಡೆದು, ಮುಸಲ್ಮಾನರನ್ನು ಒಲೈಸುವ ಉದ್ದೇಶದಿಂದಲೇ, ‘ಹಿಂದೂ ಭಯೋತ್ಪಾದನೆ’ ಕಟ್ಟುಕಥೆಯನ್ನು ಕಾಂಗ್ರೆಸ್ ಸೃಷ್ಟಿಸಿತ್ತು’ ಎಂದು ಬಿಜೆಪಿ ಆರೋಪಿಸಿದೆ.</p><p>ಮಾಲೇಗಾಂವ್ ಬಾಂಬ್ ಸ್ಫೋಟದಲ್ಲಿ ಎಲ್ಲಾ ಆರೋಪಿಗಳನ್ನು ನ್ಯಾಯಾಲಯವು ಖುಲಾಸೆಗೊಳಿಸಿದ್ದನ್ನು ಬಿಜೆಪಿ ನಾಯಕ ರವಿಶಂಕರ್ ಪ್ರಸಾದ್ ಸ್ವಾಗತಿಸಿದ್ದಾರೆ.</p><p>‘ಈ ಪ್ರಕರಣದಲ್ಲಿ ಆರೋಪಿಗಳಾಗಿದ್ದ ಬಿಜೆಪಿಯ ಮಾಜಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್, ಲೆಫ್ಟಿನೆಂಟ್ ಕರ್ನಲ್ ಪ್ರಸಾದ್ ಪುರೋಹಿತ್ ಅವರಿಗೆ ಸೂಕ್ತ ಪರಿಹಾರ ನೀಡಬೇಕು. ಅವರ ವಿರುದ್ಧ ಆರೋಪ ಸಾಬೀತುಪಡಿಸಲು ಪುರಾವೆಗಳನ್ನು ಸೃಷ್ಟಿಸಿ, ಹಿಂಸೆ ನೀಡಿದ ಪ್ರಾಸಿಕ್ಯೂಸನ್ ಕ್ಷಮೆಕೇಳಬೇಕು’ ಎಂದು ಈ ವೇಳೆ ಒತ್ತಾಯಿಸಿದ್ದಾರೆ.</p><p>‘ವೋಟ್ ಬ್ಯಾಂಕ್ ಓಲೈಕೆಗಾಗಿ, ಕಾಂಗ್ರೆಸ್ ಯಾವುದೇ ಹಂತ ತಲುಪಲೂ ಹಿಂಜರಿಯುವುದಿಲ್ಲ. ಈ ಪ್ರಕರಣವು ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ಪಕ್ಷವು ಅತ್ಯಂತ ವ್ಯವಸ್ಥಿತವಾಗಿ ರೂಪಿಸಿದ ಪಿತೂರಿಯಾಗಿದೆ. ಪ್ರಕರಣದಲ್ಲಿ ಎಲ್ಲ ಖುಲಾಸೆಯಾಗಿರುವುದು ಐತಿಹಾಸಿಕ ದಿನವಾಗಿದೆ’ ಎಂದು ಅವರು ಹೇಳಿದ್ದಾರೆ.</p>.2008ರ ಮಾಲೆಗಾಂವ್ ಸ್ಫೋಟ ಪ್ರಕರಣ:ಇದು ಭಗವಾ, ಹಿಂದುತ್ವದ ಜಯ ಎಂದ ಸಾದ್ವಿ ಪ್ರಜ್ಞಾ.Malegaon Blasts Case | ಆರೋಪದಿಂದ ಖುಲಾಸೆವರೆಗೆ ಪ್ರಕರಣ ಸಾಗಿಬಂದ ಹಾದಿ.<p>‘ಹಿಂದೂ ಭಯೋತ್ಪಾದಕ ಸಂಘಟನೆಗಳನ್ನು ‘ಕೇಸರಿ ಭಯೋತ್ಪಾದನೆ’ ಎಂದು ಬಿಂಬಿಸುವ ಕಾಂಗ್ರೆಸ್ನ ಹೋರಾಟವು ಈ ತೀರ್ಪಿನ ಮೂಲಕ ನೆಲಕಚ್ಚಿದೆ’ ಎಂದು ರವಿಶಂಕರ್ ಪ್ರಸಾದ್ ತಿಳಿಸಿದ್ದಾರೆ.</p><p><strong>ಪ್ರತಿಕ್ರಿಯೆಗೆ ರಾಹುಲ್ ನಿರಾಕರಣೆ:</strong> ನ್ಯಾಯಾಲಯದ ತೀರ್ಪಿನ ಕುರಿತಂತೆ ಪ್ರತಿಕ್ರಿಯೆ ನೀಡಲು ರಾಹುಲ್ ಗಾಂಧಿ ನಿರಾಕರಿಸಿದ್ದಾರೆ.</p><p>‘ಹಿಂದೂ ಮೂಲಭೂತವಾದಿ ಸಂಘಟನೆಗಳು ಎಲ್ಇಟಿಗಿಂತಲೂ ಅಪಾಯಕಾರಿ ಎಂದು 2010ರಲ್ಲಿ ರಾಹುಲ್ ಗಾಂಧಿ ಅವರು ಅಮೆರಿಕದ ರಾಯಭಾರಿಯ ಮುಂದೆ ತಿಳಿಸಿದ್ದರು ಎಂದು ‘ವಿಕಿಲೀಕ್ಸ್’ ಬಹಿರಂಗಪಡಿಸಿತ್ತು. ಈಗ ಆ ವಾದವು ಸಂಪೂರ್ಣವಾಗಿ ನೆಲಕಚ್ಚಿದ್ದು, ಸತ್ಯ ವಿಚಾರದಿಂದ ಅವರು ದೂರ ಓಡಿಹೋಗುತ್ತಿದ್ದಾರೆ’ ಎಂದು ಆರೋಪಿಸಿದ್ದಾರೆ.</p><p>‘ಈ ಕುರಿತು ಕಾಂಗ್ರೆಸ್ ಮಾಜಿ ಅಧ್ಯಕ್ಷರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರು ದೇಶದ ಜನತೆ ಮುಂದೆ ಕ್ಷಮೆಯಾಚಿಸಬೇಕು’ ಎಂದು ಈ ವೇಳೆ ಒತ್ತಾಯಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>