<p><strong>ಅಯೋಧ್ಯೆ (ಉತ್ತರ ಪ್ರದೇಶ):</strong> ಬಾಂಗ್ಲಾದೇಶದಲ್ಲಿ ಹಿಂದೂಗಳನ್ನು ಗುರಿಯಾಗಿಸಲಾಗಿದೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಬುಧವಾರ ಆರೋಪಿಸಿದರು.</p>.<p>ಇದೇ ಸಂದರ್ಭದಲ್ಲಿ, ಸನಾತನ ಧರ್ಮಕ್ಕೆ ಎದುರಾಗಿರುವ ಬೆದರಿಕೆ ವಿರುದ್ಧ ಒಟ್ಟಾಗಿ ಹೋರಾಡೋಣ ಎಂದು ಕರೆನೀಡಿದರು.</p>.<p>‘ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವು ಗಮ್ಯ ಅಲ್ಲ, ಮೈಲಿಗಲ್ಲು ಅಷ್ಟೆ’ ಎಂದು ಹೇಳಿದರು.</p>.<p>ಶ್ರೀ ರಾಮಜನ್ಮಭೂಮಿ ತೀರ್ಥಕ್ಷೇತ್ರದ ಪ್ರಥಮ ಅಧ್ಯಕ್ಷರಾದ ಬ್ರಹ್ಮಾಲಿನ್ ಪರಮಹಂಸ ರಾಮಚಂದ್ರ ದಾಸ್ ಅವರ 21ನೇ ಪುಣ್ಯಸ್ಮರಣೆ ಅಂಗವಾಗಿ ಅವರ ಪ್ರತಿಮೆಯನ್ನು ಅನಾವರಣ ಮಾಡಿ ಗೌರವ ನಮನ ಸಲ್ಲಿಸಿದರು. </p>.<p>ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಹಿಂಸಾಚಾರವನ್ನು ಉಲ್ಲೇಖಿಸಿ ಮಾತನಾಡಿದ ಅವರು, ‘ಇಂದು ಭಾರತದ ನೆರೆಯವರೆಯಲ್ಲ ಬೆಂಕಿಗೆ ಆಹುತಿಯಾಗುತ್ತಿದ್ದಾರೆ, ದೇಗುಲಗಳನ್ನು ಧ್ವಂಸ ಮಾಡಲಾಗುತ್ತಿದೆ. ಹಿಂದೂಗಳನ್ನು ಗುರಿಯಾಗಿಸಲಾಗಿದೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಯೋಧ್ಯೆ (ಉತ್ತರ ಪ್ರದೇಶ):</strong> ಬಾಂಗ್ಲಾದೇಶದಲ್ಲಿ ಹಿಂದೂಗಳನ್ನು ಗುರಿಯಾಗಿಸಲಾಗಿದೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಬುಧವಾರ ಆರೋಪಿಸಿದರು.</p>.<p>ಇದೇ ಸಂದರ್ಭದಲ್ಲಿ, ಸನಾತನ ಧರ್ಮಕ್ಕೆ ಎದುರಾಗಿರುವ ಬೆದರಿಕೆ ವಿರುದ್ಧ ಒಟ್ಟಾಗಿ ಹೋರಾಡೋಣ ಎಂದು ಕರೆನೀಡಿದರು.</p>.<p>‘ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವು ಗಮ್ಯ ಅಲ್ಲ, ಮೈಲಿಗಲ್ಲು ಅಷ್ಟೆ’ ಎಂದು ಹೇಳಿದರು.</p>.<p>ಶ್ರೀ ರಾಮಜನ್ಮಭೂಮಿ ತೀರ್ಥಕ್ಷೇತ್ರದ ಪ್ರಥಮ ಅಧ್ಯಕ್ಷರಾದ ಬ್ರಹ್ಮಾಲಿನ್ ಪರಮಹಂಸ ರಾಮಚಂದ್ರ ದಾಸ್ ಅವರ 21ನೇ ಪುಣ್ಯಸ್ಮರಣೆ ಅಂಗವಾಗಿ ಅವರ ಪ್ರತಿಮೆಯನ್ನು ಅನಾವರಣ ಮಾಡಿ ಗೌರವ ನಮನ ಸಲ್ಲಿಸಿದರು. </p>.<p>ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಹಿಂಸಾಚಾರವನ್ನು ಉಲ್ಲೇಖಿಸಿ ಮಾತನಾಡಿದ ಅವರು, ‘ಇಂದು ಭಾರತದ ನೆರೆಯವರೆಯಲ್ಲ ಬೆಂಕಿಗೆ ಆಹುತಿಯಾಗುತ್ತಿದ್ದಾರೆ, ದೇಗುಲಗಳನ್ನು ಧ್ವಂಸ ಮಾಡಲಾಗುತ್ತಿದೆ. ಹಿಂದೂಗಳನ್ನು ಗುರಿಯಾಗಿಸಲಾಗಿದೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>