<p><strong>ನವದೆಹಲಿ:</strong> ದೇಶಭಕ್ತಿ ಎನ್ನುವುದು ಹಿಂದೂಗಳ ಮೂಲ ಗುಣ ಎಂದು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ. ‘ವ್ಯಕ್ತಿಯ ದೇಶಪ್ರೇಮವು ಆತನ ಧರ್ಮದಿಂದ ಹುಟ್ಟಿಕೊಳ್ಳುತ್ತದೆ’ ಎಂಬ ಮಹಾತ್ಮ ಗಾಂಧಿ ಅವರ ಮಾತನ್ನು ಉಲ್ಲೇಖಿಸಿ ಭಾಗವತ್ ಈ ಹೇಳಿಕೆ ನೀಡಿದ್ದಾರೆ.</p>.<p>ಜೆ.ಕೆ.ಬಜಾಜ್ ಮತ್ತು ಎಂ.ಡಿ.ಶ್ರೀನಿವಾಸ್ ಅವರು ಬರೆದಿರುವ, ‘ಮೇಕಿಂಗ್ ಎ ಹಿಂದೂ ಪೇಟ್ರಿಯೆಟ್: ಬ್ಯಾಕ್ಗ್ರೌಂಡ್ ಆಫ್ ಗಾಂಧೀಜಿಸ್ ಹಿಂದ್ ಸ್ವರಾಜ್’ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಅವರು ಮಾತನಾಡಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/india-news/nitish-kumars-son-nishant-is-five-times-richer-than-his-father-792670.html" itemprop="url">ಬಿಹಾರ ಸಿಎಂ ನಿತೀಶ್ ಕುಮಾರ್ಗಿಂತಲೂ ಅವರ ಮಗನೇ ಶ್ರೀಮಂತ! ಆಸ್ತಿ ವಿವರ ಬಹಿರಂಗ</a></p>.<p>ಸಂಘವು ಗಾಂಧಿ ಅವರನ್ನು ತನ್ನವರೆಂದು ಬಿಂಬಿಸಿಕೊಳ್ಳಲು ಯತ್ನಿಸುತ್ತಿದೆ ಎಂಬ ಊಹಾಪೋಹಗಳ ಕುರಿತು ಪ್ರತಿಕ್ರಿಯಿಸಿದ ಅವರು, ಇದು ನಿಜವಲ್ಲ. ಅಂತಹ ಮಹಾನ್ ಚೇತನಗಳನ್ನು ಯಾರೂ ತಮ್ಮವರೆಂದು ಸೀಮಿತಗೊಳಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.</p>.<p>ಗಾಂಧಿ ಅವರ ಕುರಿತಾದ ಸಂಶೋಧನಾ ದಾಖಲೆ ಪುಸ್ತಕದ ಬಗ್ಗೆ ಮಾತನಾಡಿದ ಭಾಗವತ್, ‘ತಮ್ಮ ಪಾಲಿಗೆ ಧರ್ಮ ಮತ್ತು ದೇಶಪ್ರೇಮ ಬೇರೆಯಲ್ಲ. ತಾಯ್ನಾಡಿನ ಮೇಲಿನ ಪ್ರೀತಿ ಅಧ್ಯಾತ್ಮದಿಂದ ಹುಟ್ಟಿಕೊಂಡಿದೆ’ ಎಂಬುದಾಗಿ ಗಾಂಧಿ ಹೇಳಿದ್ದರು ಎಂದಿದ್ದಾರೆ.</p>.<p>‘ನನ್ನ ದೇಶಪ್ರೇಮವು ಧರ್ಮದಿಂದ ಹುಟ್ಟಿಕೊಂಡಿರುವುದು’ ಎಂದು ಗಾಂಧಿ ಹೇಳಿದ್ದರು. ಧರ್ಮ ಎಂದರೆ ಕೇವಲ ‘ರಿಲೀಜನ್’ ಎಂದಷ್ಟೇ ಅರ್ಥವಲ್ಲ. ಆ ಪದಕ್ಕೆ ವಿಶಾಲವಾದ ಅರ್ಥವಿದೆ ಎಂದು ಭಾಗವತ್ ಹೇಳಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/india-news/kangana-committed-grave-violation-of-plan-while-merging-her-flats-court-792666.html" itemprop="url">ಕಟ್ಟಡ ತೆರವು ತಡೆಗೆ ಕಂಗನಾ ಮಾಡಿದ್ದ ಮನವಿ ತಿರಸ್ಕೃತ: ಕೋರ್ಟ್ ನೀಡಿದ ಕಾರಣವೇನು?</a></p>.<p>‘ಯಾರಾದರೂ ಹಿಂದೂ ಆಗಿದ್ದರೆ, ಅವರು ದೇಶಭಕ್ತರಾಗಿರಲೇಬೇಕು. ಅದು ಅವರ ಮೂಲ ಗುಣ. ಕೆಲವೊಮ್ಮೆ ನೀವು ಅವನ ಅಥವಾ ಅವಳ ದೇಶಭಕ್ತಿಯನ್ನು ಜಾಗೃತಗೊಳಿಸಬೇಕಾಗಬಹುದು. ಆದರೆ ಹಿಂದೂ ಎಂದಿಗೂ ಭಾರತ ವಿರೋಧಿ ಆಗಲು ಸಾಧ್ಯವಿಲ್ಲ. ಒಬ್ಬನು ತನ್ನ ದೇಶವನ್ನು ಪ್ರೀತಿಸುತ್ತಾನೆ ಎಂದರೆ ಅದು ಕೇವಲ ಭೂಮಿಯನ್ನು ಎಂದಷ್ಟೇ ಅರ್ಥವಲ್ಲ. ಅವನು ಭೂಮಿಯ ಜನ, ನದಿಗಳು, ಸಂಸ್ಕೃತಿ, ಸಂಪ್ರದಾಯ ಎಲ್ಲವನ್ನೂ ಪ್ರೀತಿಸುತ್ತಾನೆಂದು ಅರ್ಥ’ ಎಂದು ಭಾಗವತ್ ಹೇಳಿದ್ದಾರೆ.</p>.<p>ಹಿಂದುತ್ವವು ಏಕತೆಯಲ್ಲಿ ನಂಬಿಕೆ ಇರಿಸಿದೆ ಎಂದೂ ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ದೇಶಭಕ್ತಿ ಎನ್ನುವುದು ಹಿಂದೂಗಳ ಮೂಲ ಗುಣ ಎಂದು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ. ‘ವ್ಯಕ್ತಿಯ ದೇಶಪ್ರೇಮವು ಆತನ ಧರ್ಮದಿಂದ ಹುಟ್ಟಿಕೊಳ್ಳುತ್ತದೆ’ ಎಂಬ ಮಹಾತ್ಮ ಗಾಂಧಿ ಅವರ ಮಾತನ್ನು ಉಲ್ಲೇಖಿಸಿ ಭಾಗವತ್ ಈ ಹೇಳಿಕೆ ನೀಡಿದ್ದಾರೆ.</p>.<p>ಜೆ.ಕೆ.ಬಜಾಜ್ ಮತ್ತು ಎಂ.ಡಿ.ಶ್ರೀನಿವಾಸ್ ಅವರು ಬರೆದಿರುವ, ‘ಮೇಕಿಂಗ್ ಎ ಹಿಂದೂ ಪೇಟ್ರಿಯೆಟ್: ಬ್ಯಾಕ್ಗ್ರೌಂಡ್ ಆಫ್ ಗಾಂಧೀಜಿಸ್ ಹಿಂದ್ ಸ್ವರಾಜ್’ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಅವರು ಮಾತನಾಡಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/india-news/nitish-kumars-son-nishant-is-five-times-richer-than-his-father-792670.html" itemprop="url">ಬಿಹಾರ ಸಿಎಂ ನಿತೀಶ್ ಕುಮಾರ್ಗಿಂತಲೂ ಅವರ ಮಗನೇ ಶ್ರೀಮಂತ! ಆಸ್ತಿ ವಿವರ ಬಹಿರಂಗ</a></p>.<p>ಸಂಘವು ಗಾಂಧಿ ಅವರನ್ನು ತನ್ನವರೆಂದು ಬಿಂಬಿಸಿಕೊಳ್ಳಲು ಯತ್ನಿಸುತ್ತಿದೆ ಎಂಬ ಊಹಾಪೋಹಗಳ ಕುರಿತು ಪ್ರತಿಕ್ರಿಯಿಸಿದ ಅವರು, ಇದು ನಿಜವಲ್ಲ. ಅಂತಹ ಮಹಾನ್ ಚೇತನಗಳನ್ನು ಯಾರೂ ತಮ್ಮವರೆಂದು ಸೀಮಿತಗೊಳಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.</p>.<p>ಗಾಂಧಿ ಅವರ ಕುರಿತಾದ ಸಂಶೋಧನಾ ದಾಖಲೆ ಪುಸ್ತಕದ ಬಗ್ಗೆ ಮಾತನಾಡಿದ ಭಾಗವತ್, ‘ತಮ್ಮ ಪಾಲಿಗೆ ಧರ್ಮ ಮತ್ತು ದೇಶಪ್ರೇಮ ಬೇರೆಯಲ್ಲ. ತಾಯ್ನಾಡಿನ ಮೇಲಿನ ಪ್ರೀತಿ ಅಧ್ಯಾತ್ಮದಿಂದ ಹುಟ್ಟಿಕೊಂಡಿದೆ’ ಎಂಬುದಾಗಿ ಗಾಂಧಿ ಹೇಳಿದ್ದರು ಎಂದಿದ್ದಾರೆ.</p>.<p>‘ನನ್ನ ದೇಶಪ್ರೇಮವು ಧರ್ಮದಿಂದ ಹುಟ್ಟಿಕೊಂಡಿರುವುದು’ ಎಂದು ಗಾಂಧಿ ಹೇಳಿದ್ದರು. ಧರ್ಮ ಎಂದರೆ ಕೇವಲ ‘ರಿಲೀಜನ್’ ಎಂದಷ್ಟೇ ಅರ್ಥವಲ್ಲ. ಆ ಪದಕ್ಕೆ ವಿಶಾಲವಾದ ಅರ್ಥವಿದೆ ಎಂದು ಭಾಗವತ್ ಹೇಳಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/india-news/kangana-committed-grave-violation-of-plan-while-merging-her-flats-court-792666.html" itemprop="url">ಕಟ್ಟಡ ತೆರವು ತಡೆಗೆ ಕಂಗನಾ ಮಾಡಿದ್ದ ಮನವಿ ತಿರಸ್ಕೃತ: ಕೋರ್ಟ್ ನೀಡಿದ ಕಾರಣವೇನು?</a></p>.<p>‘ಯಾರಾದರೂ ಹಿಂದೂ ಆಗಿದ್ದರೆ, ಅವರು ದೇಶಭಕ್ತರಾಗಿರಲೇಬೇಕು. ಅದು ಅವರ ಮೂಲ ಗುಣ. ಕೆಲವೊಮ್ಮೆ ನೀವು ಅವನ ಅಥವಾ ಅವಳ ದೇಶಭಕ್ತಿಯನ್ನು ಜಾಗೃತಗೊಳಿಸಬೇಕಾಗಬಹುದು. ಆದರೆ ಹಿಂದೂ ಎಂದಿಗೂ ಭಾರತ ವಿರೋಧಿ ಆಗಲು ಸಾಧ್ಯವಿಲ್ಲ. ಒಬ್ಬನು ತನ್ನ ದೇಶವನ್ನು ಪ್ರೀತಿಸುತ್ತಾನೆ ಎಂದರೆ ಅದು ಕೇವಲ ಭೂಮಿಯನ್ನು ಎಂದಷ್ಟೇ ಅರ್ಥವಲ್ಲ. ಅವನು ಭೂಮಿಯ ಜನ, ನದಿಗಳು, ಸಂಸ್ಕೃತಿ, ಸಂಪ್ರದಾಯ ಎಲ್ಲವನ್ನೂ ಪ್ರೀತಿಸುತ್ತಾನೆಂದು ಅರ್ಥ’ ಎಂದು ಭಾಗವತ್ ಹೇಳಿದ್ದಾರೆ.</p>.<p>ಹಿಂದುತ್ವವು ಏಕತೆಯಲ್ಲಿ ನಂಬಿಕೆ ಇರಿಸಿದೆ ಎಂದೂ ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>