<p><strong>ನವದೆಹಲಿ:</strong> ಪಾಕ್ ಆಕ್ರಮಿತ ಕಾಶ್ಮೀರ (ಪಿಒಕೆ) ಭಾರತದ ಭಾಗವಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ಅವರ ಧರ್ಮ ಯಾವುದೇ ಆದರೂ ಅವರೆಲ್ಲರು ಭಾರತೀಯರು ಎಂದು ಹೇಳಿದ್ದಾರೆ. </p><p>'ಇಂಡಿಯಾ ಟುಡೇ ಕಾನ್ಕ್ಲೇವ್'ನಲ್ಲಿ ಈ ಕುರಿತು ಮಾತನಾಡಿದ ಅಮಿತ್ ಶಾ, 'ಪಾಕ್ ಆಕ್ರಮಿತ ಕಾಶ್ಮೀರದವರೆಲ್ಲರೂ ಭಾರತೀಯರು. ಅವರು ಹಿಂದೂ ಅಥವಾ ಮುಸ್ಲಿಂ ಆಗಿರಬಹುದು. ಎಲ್ಲರೂ ನಮ್ಮವರೇ' ಎಂದು ಹೇಳಿದರು. </p><p>ಪೌರತ್ವ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿಯವರು 2019ರ ಡಿಸೆಂಬರ್ನಲ್ಲಿ ಅಂಕಿತ ಹಾಕಿದ್ದರು. ಆದರೆ ಚುನಾವಣೆಯಲ್ಲಿ ಲಾಭ ಪಡೆಯುವ ಉದ್ದೇಶದಿಂದ ನಾಲ್ಕು ವರ್ಷಗಳ ಬಳಿಕ ಸಿಎಎ ಜಾರಿಗೆ ತರಲಾಗಿದೆ ಎಂಬ ವಿಪಕ್ಷಗಳ ಆರೋಪಗಳನ್ನು ಅಮಿತ್ ಶಾ ತಳ್ಳಿ ಹಾಕಿದರು. </p><p>'ದೇಶ ವಿಭಜನೆಯ ಸಂದರ್ಭದಲ್ಲಿ ಭಾರತದ ಮೊದಲ ಪ್ರಧಾನಿ ಜವಾಹರಲಾಲ್ <em>ನೆಹರೂ</em> ಸೇರಿದಂತೆ ಪಾಕಿಸ್ತಾನದ ನಾಯಕರು ಪಾಕಿಸ್ತಾನದ ಅಲ್ಪಸಂಖ್ಯಾತರನ್ನು ಭಾರತಕ್ಕೆ ಸ್ವಾಗತಿಸಲಾಗುವುದು ಎಂದು ಹೇಳಿದ್ದರು. ಕಾಂಗ್ರೆಸ್ ನಾಯಕರೇ ನೀಡಿದ್ದ ಭರವಸೆಯನ್ನೇ ನಾವೀಗ ಈಡೇರಿಸಿದ್ದೇವೆ ಎಂದು ಹೇಳಿದರು. </p><p>'ಸಿಎಎಯಿಂದಾಗಿ ಯಾರೂ ಪೌರತ್ವ ಕಳೆದುಕೊಳ್ಳುವುದಿಲ್ಲ. ವಿಪಕ್ಷಗಳ ಮಾತಿಗೆ ಕಿವಿಕೊಡಬೇಡಿ ಎಂದು ನಾನು ಮುಸ್ಲಿಂ ಸಹೋದರ-ಸಹೋದರಿಯರನ್ನು ಕೇಳಿಕೊಳ್ಳುತ್ತೇನೆ. ವಿಪಕ್ಷಗಳು ರಾಜಕೀಯ ಲಾಭ ಪಡೆಯಲು ಬಯಸುತ್ತವೆ' ಎಂದು ತಿರುಗೇಟು ನೀಡಿದರು. </p><p>'ಮುಸ್ಲಿಮರನ್ನು ಸಿಎಎ ವ್ಯಾಪ್ತಿಯಿಂದ ಹೊರಗಿಡುವ ಬಗ್ಗೆ ಕೇಳಿದಾಗ ಈ ಎಲ್ಲ ಮೂರು ದೇಶಗಳನ್ನು ಇಸ್ಲಾಮಿಕ್ ದೇಶವೆಂದು ಘೋಷಿಸಲಾಗಿದೆ. ಅಲ್ಲಿ ಮುಸ್ಲಿಮರು ಶೋಷಣೆಯನ್ನು ಎದುರಿಸಲು ಸಾಧ್ಯವಿಲ್ಲ' ಎಂದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಪಾಕ್ ಆಕ್ರಮಿತ ಕಾಶ್ಮೀರ (ಪಿಒಕೆ) ಭಾರತದ ಭಾಗವಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ಅವರ ಧರ್ಮ ಯಾವುದೇ ಆದರೂ ಅವರೆಲ್ಲರು ಭಾರತೀಯರು ಎಂದು ಹೇಳಿದ್ದಾರೆ. </p><p>'ಇಂಡಿಯಾ ಟುಡೇ ಕಾನ್ಕ್ಲೇವ್'ನಲ್ಲಿ ಈ ಕುರಿತು ಮಾತನಾಡಿದ ಅಮಿತ್ ಶಾ, 'ಪಾಕ್ ಆಕ್ರಮಿತ ಕಾಶ್ಮೀರದವರೆಲ್ಲರೂ ಭಾರತೀಯರು. ಅವರು ಹಿಂದೂ ಅಥವಾ ಮುಸ್ಲಿಂ ಆಗಿರಬಹುದು. ಎಲ್ಲರೂ ನಮ್ಮವರೇ' ಎಂದು ಹೇಳಿದರು. </p><p>ಪೌರತ್ವ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿಯವರು 2019ರ ಡಿಸೆಂಬರ್ನಲ್ಲಿ ಅಂಕಿತ ಹಾಕಿದ್ದರು. ಆದರೆ ಚುನಾವಣೆಯಲ್ಲಿ ಲಾಭ ಪಡೆಯುವ ಉದ್ದೇಶದಿಂದ ನಾಲ್ಕು ವರ್ಷಗಳ ಬಳಿಕ ಸಿಎಎ ಜಾರಿಗೆ ತರಲಾಗಿದೆ ಎಂಬ ವಿಪಕ್ಷಗಳ ಆರೋಪಗಳನ್ನು ಅಮಿತ್ ಶಾ ತಳ್ಳಿ ಹಾಕಿದರು. </p><p>'ದೇಶ ವಿಭಜನೆಯ ಸಂದರ್ಭದಲ್ಲಿ ಭಾರತದ ಮೊದಲ ಪ್ರಧಾನಿ ಜವಾಹರಲಾಲ್ <em>ನೆಹರೂ</em> ಸೇರಿದಂತೆ ಪಾಕಿಸ್ತಾನದ ನಾಯಕರು ಪಾಕಿಸ್ತಾನದ ಅಲ್ಪಸಂಖ್ಯಾತರನ್ನು ಭಾರತಕ್ಕೆ ಸ್ವಾಗತಿಸಲಾಗುವುದು ಎಂದು ಹೇಳಿದ್ದರು. ಕಾಂಗ್ರೆಸ್ ನಾಯಕರೇ ನೀಡಿದ್ದ ಭರವಸೆಯನ್ನೇ ನಾವೀಗ ಈಡೇರಿಸಿದ್ದೇವೆ ಎಂದು ಹೇಳಿದರು. </p><p>'ಸಿಎಎಯಿಂದಾಗಿ ಯಾರೂ ಪೌರತ್ವ ಕಳೆದುಕೊಳ್ಳುವುದಿಲ್ಲ. ವಿಪಕ್ಷಗಳ ಮಾತಿಗೆ ಕಿವಿಕೊಡಬೇಡಿ ಎಂದು ನಾನು ಮುಸ್ಲಿಂ ಸಹೋದರ-ಸಹೋದರಿಯರನ್ನು ಕೇಳಿಕೊಳ್ಳುತ್ತೇನೆ. ವಿಪಕ್ಷಗಳು ರಾಜಕೀಯ ಲಾಭ ಪಡೆಯಲು ಬಯಸುತ್ತವೆ' ಎಂದು ತಿರುಗೇಟು ನೀಡಿದರು. </p><p>'ಮುಸ್ಲಿಮರನ್ನು ಸಿಎಎ ವ್ಯಾಪ್ತಿಯಿಂದ ಹೊರಗಿಡುವ ಬಗ್ಗೆ ಕೇಳಿದಾಗ ಈ ಎಲ್ಲ ಮೂರು ದೇಶಗಳನ್ನು ಇಸ್ಲಾಮಿಕ್ ದೇಶವೆಂದು ಘೋಷಿಸಲಾಗಿದೆ. ಅಲ್ಲಿ ಮುಸ್ಲಿಮರು ಶೋಷಣೆಯನ್ನು ಎದುರಿಸಲು ಸಾಧ್ಯವಿಲ್ಲ' ಎಂದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>