<p><strong>ಬೇಗುಸರಾಯ್</strong>: ಹಿಂದೂಗಳು ಹಲಾಲ್ ಮಾಂಸವನ್ನು ತ್ಯಜಿಸಿ ಜಟ್ಕಾ ಮಾಂಸವನ್ನು ಮಾತ್ರ ಸೇವಿಸುವುದನ್ನು ರೂಢಿ ಮಾಡಿಕೊಳ್ಳಬೇಕು ಎಂದು ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವ ಗಿರಿರಾಜ್ ಸಿಂಗ್ ಹೇಳಿದ್ದಾರೆ.</p><p>ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಹಲಾಲ್ ಪ್ರಮಾಣೀಕೃತ ಮಾಂಸವನ್ನು ಮಾತ್ರ ಸೇವಿಸುವ ಮುಸ್ಲಿಮರ ಬದ್ಧತೆಗೆ ನನ್ನ ಮೆಚ್ಚುಗೆಯಿದೆ. ಇದೇ ರೀತಿ ಹಿಂದೂಗಳು ತಮ್ಮ ರೂಢಿ ಸಂಪ್ರದಾಯಗಳನ್ನು ಅರಿತು ಬದ್ಧತೆಯಿಂದ ನಡೆದುಕೊಳ್ಳಬೇಕಿದೆ’ ಎಂದು ಹೇಳಿದರು.</p><p>‘ಜಟ್ಕಾ ಹಿಂದೂಗಳು ವಧೆ ಮಾಡುವ ವಿಧಾನವಾಗಿದೆ. ಹಿಂದೂಗಳು ಬಲಿಕೊಡುವಾಗ ಒಂದೇ ಹೊಡೆತದಲ್ಲಿ ಬಲಿಕೊಡುತ್ತಾರೆ. ಆದ್ದರಿಂದ ಹಿಂದೂಗಳು ಹಲಾಲ್ ಮಾಂಸಗಳನ್ನು ತಿಂದು ತಮ್ಮನ್ನು ತಾವು ಭ್ರಷ್ಟಗೊಳಿಸಿಕೊಳ್ಳಬಾರದು’ ಎಂದರು.</p><p>‘ಹಿಂದೂಗಳಿಗೆ ಪೂರಕವಾಗಿ ಜಟ್ಕಾ ಮಾಂಸ ಮಾತ್ರ ಮಾರಾಟ ಮಾಡುವ ಕಸಾಯಿಖಾನೆಗಳಿರುವ ಹೊಸ ಮಾದರಿಯ ಉದ್ಯಮವನ್ನು ಪ್ರಾರಂಭಿಸುವ ಅಗತ್ಯವಿದೆ’ ಎಂದು ಒತ್ತಿ ಹೇಳಿದರು.</p><p>ಒಂದು ವಾರದ ಹಿಂದೆ ಬಿಹಾರ ಮುಖ್ಯಮಂತ್ರಿ ನಿತಿಶ್ ಕುಮಾರ್ ಅವರಿಗೆ ಪತ್ರ ಬರೆದಿದ್ದ ಸಿಂಗ್, ಉತ್ತರ ಪ್ರದೇಶ ಸರ್ಕಾರದ ನಿರ್ಧಾರದ ಹಾಗೆ ಬಿಹಾರ್ನಲ್ಲಿಯೂ ಹಲಾಲ್ ಎಂದು ಲೇಬಲ್ ಮಾಡಿದ ಆಹಾರ ಉತ್ಪನ್ನಗಳ ಮಾರಾಟವನ್ನು ನಿಷೇಧಿಸುವಂತೆ ಸಲಹೆ ನೀಡಿದ್ದರು.</p><p><strong>ರಾಹುಲ್ ಗಾಂಧಿ ವಿರುದ್ಧ ಕಿಡಿ</strong></p><p>ಭದ್ರತಾ ಲೋಪದ ಬಗ್ಗೆ ರಾಹುಲ್ ಗಾಂಧಿಯವರ ಪ್ರತಿಕ್ರಿಯೆ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ‘ರಾಹುಲ್ ಗಾಂಧಿ ಅವರು 'ತುಕ್ಡೆ ತುಕ್ಡೆ' ಗ್ಯಾಂಗ್ ಬಗ್ಗೆ ಸಹಾನುಭೂತಿ ವ್ಯಕ್ತಪಡಿಸಿದ್ದು ಇದೇ ಮೊದಲೆನಲ್ಲ. ಈ ಹಿಂದೆ ಜೆಎನ್ಯು ಕ್ಯಾಂಪಸ್ನಲ್ಲಿ ದೇಶದ್ರೋಹದ ಘೋಷಣೆಗಳನ್ನು ಕೂಗಿದವರಿಗೂ ರಾಹುಲ್ ಬೆಂಬಲ ನೀಡಿದ್ದರು’ ಎಂದು ಕಿಡಿಕಾರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೇಗುಸರಾಯ್</strong>: ಹಿಂದೂಗಳು ಹಲಾಲ್ ಮಾಂಸವನ್ನು ತ್ಯಜಿಸಿ ಜಟ್ಕಾ ಮಾಂಸವನ್ನು ಮಾತ್ರ ಸೇವಿಸುವುದನ್ನು ರೂಢಿ ಮಾಡಿಕೊಳ್ಳಬೇಕು ಎಂದು ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವ ಗಿರಿರಾಜ್ ಸಿಂಗ್ ಹೇಳಿದ್ದಾರೆ.</p><p>ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಹಲಾಲ್ ಪ್ರಮಾಣೀಕೃತ ಮಾಂಸವನ್ನು ಮಾತ್ರ ಸೇವಿಸುವ ಮುಸ್ಲಿಮರ ಬದ್ಧತೆಗೆ ನನ್ನ ಮೆಚ್ಚುಗೆಯಿದೆ. ಇದೇ ರೀತಿ ಹಿಂದೂಗಳು ತಮ್ಮ ರೂಢಿ ಸಂಪ್ರದಾಯಗಳನ್ನು ಅರಿತು ಬದ್ಧತೆಯಿಂದ ನಡೆದುಕೊಳ್ಳಬೇಕಿದೆ’ ಎಂದು ಹೇಳಿದರು.</p><p>‘ಜಟ್ಕಾ ಹಿಂದೂಗಳು ವಧೆ ಮಾಡುವ ವಿಧಾನವಾಗಿದೆ. ಹಿಂದೂಗಳು ಬಲಿಕೊಡುವಾಗ ಒಂದೇ ಹೊಡೆತದಲ್ಲಿ ಬಲಿಕೊಡುತ್ತಾರೆ. ಆದ್ದರಿಂದ ಹಿಂದೂಗಳು ಹಲಾಲ್ ಮಾಂಸಗಳನ್ನು ತಿಂದು ತಮ್ಮನ್ನು ತಾವು ಭ್ರಷ್ಟಗೊಳಿಸಿಕೊಳ್ಳಬಾರದು’ ಎಂದರು.</p><p>‘ಹಿಂದೂಗಳಿಗೆ ಪೂರಕವಾಗಿ ಜಟ್ಕಾ ಮಾಂಸ ಮಾತ್ರ ಮಾರಾಟ ಮಾಡುವ ಕಸಾಯಿಖಾನೆಗಳಿರುವ ಹೊಸ ಮಾದರಿಯ ಉದ್ಯಮವನ್ನು ಪ್ರಾರಂಭಿಸುವ ಅಗತ್ಯವಿದೆ’ ಎಂದು ಒತ್ತಿ ಹೇಳಿದರು.</p><p>ಒಂದು ವಾರದ ಹಿಂದೆ ಬಿಹಾರ ಮುಖ್ಯಮಂತ್ರಿ ನಿತಿಶ್ ಕುಮಾರ್ ಅವರಿಗೆ ಪತ್ರ ಬರೆದಿದ್ದ ಸಿಂಗ್, ಉತ್ತರ ಪ್ರದೇಶ ಸರ್ಕಾರದ ನಿರ್ಧಾರದ ಹಾಗೆ ಬಿಹಾರ್ನಲ್ಲಿಯೂ ಹಲಾಲ್ ಎಂದು ಲೇಬಲ್ ಮಾಡಿದ ಆಹಾರ ಉತ್ಪನ್ನಗಳ ಮಾರಾಟವನ್ನು ನಿಷೇಧಿಸುವಂತೆ ಸಲಹೆ ನೀಡಿದ್ದರು.</p><p><strong>ರಾಹುಲ್ ಗಾಂಧಿ ವಿರುದ್ಧ ಕಿಡಿ</strong></p><p>ಭದ್ರತಾ ಲೋಪದ ಬಗ್ಗೆ ರಾಹುಲ್ ಗಾಂಧಿಯವರ ಪ್ರತಿಕ್ರಿಯೆ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ‘ರಾಹುಲ್ ಗಾಂಧಿ ಅವರು 'ತುಕ್ಡೆ ತುಕ್ಡೆ' ಗ್ಯಾಂಗ್ ಬಗ್ಗೆ ಸಹಾನುಭೂತಿ ವ್ಯಕ್ತಪಡಿಸಿದ್ದು ಇದೇ ಮೊದಲೆನಲ್ಲ. ಈ ಹಿಂದೆ ಜೆಎನ್ಯು ಕ್ಯಾಂಪಸ್ನಲ್ಲಿ ದೇಶದ್ರೋಹದ ಘೋಷಣೆಗಳನ್ನು ಕೂಗಿದವರಿಗೂ ರಾಹುಲ್ ಬೆಂಬಲ ನೀಡಿದ್ದರು’ ಎಂದು ಕಿಡಿಕಾರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>