<p><strong>ನವದೆಹಲಿ</strong>: ಹರಿಯಾಣದ ಪಿಂಜೋರ್ ನಲ್ಲಿರುವ ಹಿಂದೂಸ್ತಾನ್ ಮಶೀನ್ ಅಂಡ್ ಟೂಲ್ಸ್ (ಎಚ್ಎಂಟಿ) ಕಾರ್ಖಾನೆಗೆ ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಶನಿವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.</p>.<p>ಕಾರ್ಖಾನೆ ವೀಕ್ಷಣೆ ನಂತರ ಉನ್ನತ ಅಧಿಕಾರಿಗಳ ಸಭೆ ನಡೆಸಿ ಸಮಗ್ರ ಮಾಹಿತಿ ಪಡೆದುಕೊಂಡ ಸಚಿವರು; ಕಾರ್ಖಾನೆ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಅಧಿಕಾರಿಗಳ ಬಗ್ಗೆ ಚರ್ಚೆ ನಡೆಸಿದರು.</p>.<p>ಕಾರ್ಖಾನೆ ಹೊಂದಿರುವ ಆಸ್ತಿಗಳು, ಆಸ್ತಿಗಳಿಗೆ ಸಂಬಂಧಪಟ್ಟ ಕೋರ್ಟ್ ವ್ಯಾಜ್ಯಗಳು, ಉದ್ಯೋಗಿಗಳ ಬಿಕ್ಕಟ್ಟುಗಳು ಇತ್ಯಾದಿ ಅಂಶಗಳ ಬಗ್ಗೆ ಸಚಿವರಿಗೆ ಅಧಿಕಾರಿಗಳು ಮಾಹಿತಿ ನೀಡಿದರು. ಕಾರ್ಖಾನೆಯ ಸದ್ಯದ ಪರಿಸ್ಥಿತಿಯ ಬಗ್ಗೆ ಸಚಿವರು ಕಳವಳ ವ್ಯಕ್ತಪಡಿಸಿ ಸಮಗ್ರ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.</p>.<p>ಕಾರ್ಖಾನೆಯ ವಹಿವಾಟು, ಲಾಭ, ಸಾಲ, ಬಾಕಿ ಸೇರಿದಂತೆ ಹಣಕಾಸು ಸ್ಥಿತಿಗತಿಗಳ ಬಗ್ಗೆ ಅಂಕಿ ಅಂಶಗಳನ್ನು ಪಡೆದುಕೊಂಡ ಸಚಿವರು; ಕಾರ್ಖಾನೆಯ ನೌಕರರ ಜತೆ ಮಾತುಕತೆ, ಕಾರ್ಮಿಕರ ಯೂನಿಯನ್ ಮುಖಂಡರ ಜತೆ ಚರ್ಚೆ ನಡೆಸಿದರು.</p>.<p>ಸಾರ್ವಜನಿಕ ಸ್ವಾಮ್ಯದ ಕಾರ್ಖಾನೆಯನ್ನು ಉಳಿಸಿ ಬೆಳೆಸುವ ಹೊಣೆ ಎಲ್ಲರದ್ದು. ಎಲ್ಲರೂ ಬದ್ಧತೆ, ಕ್ಷಮತೆಯಿಂದ ಕೆಲಸ ಮಾಡಬೇಕು ಎಂದು ಅಧಿಕಾರಿಗಳು, ಕಾರ್ಮಿಕರಿಗೆ ಕುಮಾರಸ್ವಾಮಿ ಕಿವಿಮಾತು ಹೇಳಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಹರಿಯಾಣದ ಪಿಂಜೋರ್ ನಲ್ಲಿರುವ ಹಿಂದೂಸ್ತಾನ್ ಮಶೀನ್ ಅಂಡ್ ಟೂಲ್ಸ್ (ಎಚ್ಎಂಟಿ) ಕಾರ್ಖಾನೆಗೆ ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಶನಿವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.</p>.<p>ಕಾರ್ಖಾನೆ ವೀಕ್ಷಣೆ ನಂತರ ಉನ್ನತ ಅಧಿಕಾರಿಗಳ ಸಭೆ ನಡೆಸಿ ಸಮಗ್ರ ಮಾಹಿತಿ ಪಡೆದುಕೊಂಡ ಸಚಿವರು; ಕಾರ್ಖಾನೆ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಅಧಿಕಾರಿಗಳ ಬಗ್ಗೆ ಚರ್ಚೆ ನಡೆಸಿದರು.</p>.<p>ಕಾರ್ಖಾನೆ ಹೊಂದಿರುವ ಆಸ್ತಿಗಳು, ಆಸ್ತಿಗಳಿಗೆ ಸಂಬಂಧಪಟ್ಟ ಕೋರ್ಟ್ ವ್ಯಾಜ್ಯಗಳು, ಉದ್ಯೋಗಿಗಳ ಬಿಕ್ಕಟ್ಟುಗಳು ಇತ್ಯಾದಿ ಅಂಶಗಳ ಬಗ್ಗೆ ಸಚಿವರಿಗೆ ಅಧಿಕಾರಿಗಳು ಮಾಹಿತಿ ನೀಡಿದರು. ಕಾರ್ಖಾನೆಯ ಸದ್ಯದ ಪರಿಸ್ಥಿತಿಯ ಬಗ್ಗೆ ಸಚಿವರು ಕಳವಳ ವ್ಯಕ್ತಪಡಿಸಿ ಸಮಗ್ರ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.</p>.<p>ಕಾರ್ಖಾನೆಯ ವಹಿವಾಟು, ಲಾಭ, ಸಾಲ, ಬಾಕಿ ಸೇರಿದಂತೆ ಹಣಕಾಸು ಸ್ಥಿತಿಗತಿಗಳ ಬಗ್ಗೆ ಅಂಕಿ ಅಂಶಗಳನ್ನು ಪಡೆದುಕೊಂಡ ಸಚಿವರು; ಕಾರ್ಖಾನೆಯ ನೌಕರರ ಜತೆ ಮಾತುಕತೆ, ಕಾರ್ಮಿಕರ ಯೂನಿಯನ್ ಮುಖಂಡರ ಜತೆ ಚರ್ಚೆ ನಡೆಸಿದರು.</p>.<p>ಸಾರ್ವಜನಿಕ ಸ್ವಾಮ್ಯದ ಕಾರ್ಖಾನೆಯನ್ನು ಉಳಿಸಿ ಬೆಳೆಸುವ ಹೊಣೆ ಎಲ್ಲರದ್ದು. ಎಲ್ಲರೂ ಬದ್ಧತೆ, ಕ್ಷಮತೆಯಿಂದ ಕೆಲಸ ಮಾಡಬೇಕು ಎಂದು ಅಧಿಕಾರಿಗಳು, ಕಾರ್ಮಿಕರಿಗೆ ಕುಮಾರಸ್ವಾಮಿ ಕಿವಿಮಾತು ಹೇಳಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>