<p><strong>ಮೊರಾದಾಬಾದ್(ಉತ್ತರ ಪ್ರದೇಶ):</strong> ಭಯೋತ್ಪಾದಕ ಕೃತ್ಯಗಳಲ್ಲಿ ಭಾಗಿಯಾಗಿದ್ದ ಹಿಜ್ಬುಲ್ ಮುಜಾಹಿದ್ದೀನ್ನ ಉಗ್ರ ಉಲ್ಫತ್ ಹುಸೇನ್ಗೆ ಇಲ್ಲಿನ ನ್ಯಾಯಾಲಯವೊಂದು 10 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿದೆ. </p><p>ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರಾದ ಛಾಯಾ ಶರ್ಮಾ, ಈ ತೀರ್ಪು ನೀಡಿದ್ದು, ₹48,000 ದಂಡವನ್ನೂ ವಿಧಿಸಿದ್ದಾರೆ ಎಂದು ಎಡಿಜಿಸಿ ಸುರೇಶ್ ಸಿಂಗ್ ಹೇಳಿದ್ದಾರೆ. </p><p>ಜಮ್ಮು ಮತ್ತು ಕಾಶ್ಮೀರದ ಪೂಂಛ್ ಜಿಲ್ಲೆಯ ನಿವಾಸಿಯಾದ ಉಲ್ಫತ್ ಹುಸೇನ್ ಅಲಿಯಾಸ್ ಮೊಹಮ್ಮದ್ ಸೈಫುಲ್ ಇಸ್ಲಾಂ, 2002ರಿಂದ ಭಯೋತ್ಪಾದಕ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದು, 2008ರಲ್ಲಿ ಜಾಮೀನು ಪಡೆದ ನಂತರ ತಲೆಮರೆಸಿಕೊಂಡಿದ್ದ ಎಂದು ಸಿಂಗ್ ಹೇಳಿದ್ದಾರೆ.</p><p>ಮೊರಾದಾಬಾದ್ ನ್ಯಾಯಾಲಯವು 2015 ಮತ್ತು 2025ರಲ್ಲಿ ಆತನ ವಿರುದ್ಧ ಶಾಶ್ವತ ವಾರಂಟ್ ಹೊರಡಿಸಿತ್ತು. ಆತನ ಕುರಿತು ಮಾಹಿತಿ ನೀಡಿದವರಿಗೆ ₹25,000 ಬಹುಮಾನವನ್ನು ಘೋಷಿಸಲಾಗಿತ್ತು.</p><p>ಬಳಿಕ, ಈ ವರ್ಷ ಮಾರ್ಚ್ 8ರಂದು ಉತ್ತರ ಪ್ರದೇಶ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಮತ್ತು ಕಟ್ಘರ್ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಆತನನ್ನು ಜಮ್ಮು ಮತ್ತು ಕಾಶ್ಮೀರದ ಪೂಂಛ್ನಲ್ಲಿ ಯಶಸ್ವಿಯಾಗಿ ಬಂಧಿಸಲಾಗಿತ್ತು. ನಂತರ ಮೊರಾದಾಬಾದ್ ಜೈಲಿಗೆ ವರ್ಗಾಯಿಸಲಾಗಿತ್ತು ಎಂದು ಸಿಂಗ್ ಹೇಳಿದ್ದಾರೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೊರಾದಾಬಾದ್(ಉತ್ತರ ಪ್ರದೇಶ):</strong> ಭಯೋತ್ಪಾದಕ ಕೃತ್ಯಗಳಲ್ಲಿ ಭಾಗಿಯಾಗಿದ್ದ ಹಿಜ್ಬುಲ್ ಮುಜಾಹಿದ್ದೀನ್ನ ಉಗ್ರ ಉಲ್ಫತ್ ಹುಸೇನ್ಗೆ ಇಲ್ಲಿನ ನ್ಯಾಯಾಲಯವೊಂದು 10 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿದೆ. </p><p>ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರಾದ ಛಾಯಾ ಶರ್ಮಾ, ಈ ತೀರ್ಪು ನೀಡಿದ್ದು, ₹48,000 ದಂಡವನ್ನೂ ವಿಧಿಸಿದ್ದಾರೆ ಎಂದು ಎಡಿಜಿಸಿ ಸುರೇಶ್ ಸಿಂಗ್ ಹೇಳಿದ್ದಾರೆ. </p><p>ಜಮ್ಮು ಮತ್ತು ಕಾಶ್ಮೀರದ ಪೂಂಛ್ ಜಿಲ್ಲೆಯ ನಿವಾಸಿಯಾದ ಉಲ್ಫತ್ ಹುಸೇನ್ ಅಲಿಯಾಸ್ ಮೊಹಮ್ಮದ್ ಸೈಫುಲ್ ಇಸ್ಲಾಂ, 2002ರಿಂದ ಭಯೋತ್ಪಾದಕ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದು, 2008ರಲ್ಲಿ ಜಾಮೀನು ಪಡೆದ ನಂತರ ತಲೆಮರೆಸಿಕೊಂಡಿದ್ದ ಎಂದು ಸಿಂಗ್ ಹೇಳಿದ್ದಾರೆ.</p><p>ಮೊರಾದಾಬಾದ್ ನ್ಯಾಯಾಲಯವು 2015 ಮತ್ತು 2025ರಲ್ಲಿ ಆತನ ವಿರುದ್ಧ ಶಾಶ್ವತ ವಾರಂಟ್ ಹೊರಡಿಸಿತ್ತು. ಆತನ ಕುರಿತು ಮಾಹಿತಿ ನೀಡಿದವರಿಗೆ ₹25,000 ಬಹುಮಾನವನ್ನು ಘೋಷಿಸಲಾಗಿತ್ತು.</p><p>ಬಳಿಕ, ಈ ವರ್ಷ ಮಾರ್ಚ್ 8ರಂದು ಉತ್ತರ ಪ್ರದೇಶ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಮತ್ತು ಕಟ್ಘರ್ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಆತನನ್ನು ಜಮ್ಮು ಮತ್ತು ಕಾಶ್ಮೀರದ ಪೂಂಛ್ನಲ್ಲಿ ಯಶಸ್ವಿಯಾಗಿ ಬಂಧಿಸಲಾಗಿತ್ತು. ನಂತರ ಮೊರಾದಾಬಾದ್ ಜೈಲಿಗೆ ವರ್ಗಾಯಿಸಲಾಗಿತ್ತು ಎಂದು ಸಿಂಗ್ ಹೇಳಿದ್ದಾರೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>