<p><strong>ಸಂಭಲ್:</strong> ಉತ್ತರ ಪ್ರದೇಶದ ಸಂಭಲ್ನ ಖಗ್ಗು ಸರೈನಲ್ಲಿರುವ ಕಾರ್ತಿಕೇಯ ಮಹಾದೇವ ದೇವಸ್ಥಾನದಲ್ಲಿ 46 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಹೋಳಿ ಹಬ್ಬ ಆಚರಿಸಲಾಯಿತು.</p><p>1978ರ ಗಲಭೆಯ ನಂತರ ಈ ದೇವಾಲಯ ಮುಚ್ಚಲ್ಪಟ್ಟಿತ್ತು. ಕಳೆದ ವರ್ಷ ಡಿಸೆಂಬರ್ನಲ್ಲಿ ಮತ್ತೆ ತೆರೆಯಲಾಗಿತ್ತು.</p><p>ಹೋಳಿ ಕಾರ್ಯಕ್ರಮದಲ್ಲಿ ಸಾಮಾಜಿಕ ಮತ್ತು ಹಿಂದೂ ಸಂಘಟನೆಗಳು ಉತ್ಸಾಹದಿಂದ ಭಾಗವಹಿಸಿದವು.</p><p>‘ಖಗ್ಗು ಸರೈನಲ್ಲಿರುವ ಕಾರ್ತೀಕೇಯ ಮಹಾದೇವ ದೇವಸ್ಥಾನದಲ್ಲಿ ಹೋಳಿ ಹಬ್ಬವನ್ನು ಶಾಂತಿಯುತವಾಗಿ ಆಚರಿಸಲಾಗುತ್ತಿದೆ. ಯಾರೂ ಚಿಂತಿಸುವ ಅಗತ್ಯವಿಲ್ಲ. ಜನರು ಸುರಕ್ಷಿತ ವಾತಾವರಣದಲ್ಲಿ ಹಬ್ಬವನ್ನು ಆನಂದಿಸುತ್ತಿದ್ದಾರೆ. ಸುಗಮ ಆಚರಣೆಗಾಗಿ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿದೆ’ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶ್ರೀಶ್ ಚಂದ್ರ ತಿಳಿಸಿದ್ದಾರೆ.</p>.<div><blockquote>46 ವರ್ಷಗಳ ಬಳಿಕ, ಕಾರ್ತಿಕೇಯ ಮಹಾದೇವ ದೇವಸ್ಥಾನದಲ್ಲಿ ಹೋಳಿ ಆಡುವ ಭಾಗ್ಯ ನಮಗೆ ಸಿಕ್ಕಿದೆ. ವಿವಿಧ ಸಾಮಾಜಿಕ ಸಂಘಟನೆಗಳ ಜನರು ಇಲ್ಲಿ ಜಮಾಯಿಸಿದ್ದು, ಹೂವುಗಳು ಮತ್ತು ಬಣ್ಣಗಳೊಂದಿಗೆ ಹೋಳಿ ಆಚರಿಸುತ್ತಿದ್ದಾರೆ.</blockquote><span class="attribution">ಆನಂದ್ ಅಗರವಾಲ್, ವಿಶ್ವ ಹಿಂದೂ ಪರಿಷತ್ (ವಿಎಚ್ಪಿ) ಜಿಲ್ಲಾಧ್ಯಕ್ಷ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಂಭಲ್:</strong> ಉತ್ತರ ಪ್ರದೇಶದ ಸಂಭಲ್ನ ಖಗ್ಗು ಸರೈನಲ್ಲಿರುವ ಕಾರ್ತಿಕೇಯ ಮಹಾದೇವ ದೇವಸ್ಥಾನದಲ್ಲಿ 46 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಹೋಳಿ ಹಬ್ಬ ಆಚರಿಸಲಾಯಿತು.</p><p>1978ರ ಗಲಭೆಯ ನಂತರ ಈ ದೇವಾಲಯ ಮುಚ್ಚಲ್ಪಟ್ಟಿತ್ತು. ಕಳೆದ ವರ್ಷ ಡಿಸೆಂಬರ್ನಲ್ಲಿ ಮತ್ತೆ ತೆರೆಯಲಾಗಿತ್ತು.</p><p>ಹೋಳಿ ಕಾರ್ಯಕ್ರಮದಲ್ಲಿ ಸಾಮಾಜಿಕ ಮತ್ತು ಹಿಂದೂ ಸಂಘಟನೆಗಳು ಉತ್ಸಾಹದಿಂದ ಭಾಗವಹಿಸಿದವು.</p><p>‘ಖಗ್ಗು ಸರೈನಲ್ಲಿರುವ ಕಾರ್ತೀಕೇಯ ಮಹಾದೇವ ದೇವಸ್ಥಾನದಲ್ಲಿ ಹೋಳಿ ಹಬ್ಬವನ್ನು ಶಾಂತಿಯುತವಾಗಿ ಆಚರಿಸಲಾಗುತ್ತಿದೆ. ಯಾರೂ ಚಿಂತಿಸುವ ಅಗತ್ಯವಿಲ್ಲ. ಜನರು ಸುರಕ್ಷಿತ ವಾತಾವರಣದಲ್ಲಿ ಹಬ್ಬವನ್ನು ಆನಂದಿಸುತ್ತಿದ್ದಾರೆ. ಸುಗಮ ಆಚರಣೆಗಾಗಿ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿದೆ’ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶ್ರೀಶ್ ಚಂದ್ರ ತಿಳಿಸಿದ್ದಾರೆ.</p>.<div><blockquote>46 ವರ್ಷಗಳ ಬಳಿಕ, ಕಾರ್ತಿಕೇಯ ಮಹಾದೇವ ದೇವಸ್ಥಾನದಲ್ಲಿ ಹೋಳಿ ಆಡುವ ಭಾಗ್ಯ ನಮಗೆ ಸಿಕ್ಕಿದೆ. ವಿವಿಧ ಸಾಮಾಜಿಕ ಸಂಘಟನೆಗಳ ಜನರು ಇಲ್ಲಿ ಜಮಾಯಿಸಿದ್ದು, ಹೂವುಗಳು ಮತ್ತು ಬಣ್ಣಗಳೊಂದಿಗೆ ಹೋಳಿ ಆಚರಿಸುತ್ತಿದ್ದಾರೆ.</blockquote><span class="attribution">ಆನಂದ್ ಅಗರವಾಲ್, ವಿಶ್ವ ಹಿಂದೂ ಪರಿಷತ್ (ವಿಎಚ್ಪಿ) ಜಿಲ್ಲಾಧ್ಯಕ್ಷ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>