<p><strong>ನವದೆಹಲಿ</strong>: ಮನೆಯಲ್ಲಿ ತಯಾರಿಸಿದ ಆಹಾರ ಮತ್ತು ಇತರ ವಸ್ತುಗಳನ್ನು ನೀಡುವಂತೆ ನ್ಯಾಯಾಲಯ ನೀಡಿರುವ ಆದೇಶವನ್ನು ಜೈಲಿನ ಅಧಿಕಾರಿಗಳು ಪಾಲಿಸುತ್ತಿಲ್ಲ ಎಂದು ಆರೋಪಿಸಿ ಬಿಆರ್ಎಸ್ ನಾಯಕಿ ಕೆ.ಕವಿತಾ ಅವರು ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿ ತಿಹಾರ್ ಜೈಲಿನ ಅಧಿಕಾರಿಗಳು ಪ್ರತಿಕ್ರಿಯೆ ನೀಡುವಂತೆ ನ್ಯಾಯಾಲಯ ಸೂಚಿಸಿದೆ.</p>.<p>ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಕವಿತಾ ಅವರು, ‘ನನ್ನ ಆರೋಗ್ಯದ ದೃಷ್ಟಿಯಿಂದ ಮನೆಯಲ್ಲಿ ತಯಾರಿಸಿದ ಅಡುಗೆ ಮತ್ತು ಇತರ ವಸ್ತುಗಳನ್ನು ಬಳಸಲು ಅನುಮತಿ ನೀಡಬೇಕು’ ಎಂದು ಮಂಗಳವಾರ ಮನವಿ ಸಲ್ಲಿಸಿದ್ದರು.</p>.<p>ಈ ಹಿನ್ನೆಲೆಯಲ್ಲಿ, ನಿಯಮಗಳ ಅನ್ವಯ ಕವಿತಾ ಅವರಿಗೆ ಮನೆಯಲ್ಲಿ ತಯಾರಿಸಿದ ಅಡುಗೆ, ಚಪ್ಪಲಿ, ಬಟ್ಟೆ, ಹೊದಿಕೆ, ಪುಸ್ತಕ, ಪೆನ್ನು, ಪೇಪರ್, ಒಡವೆ, ಔಷಧ ಮತ್ತಿತರ ವಸ್ತುಗಳನ್ನು ಬಳಸಲು ಅವಕಾಶ ನೀಡುವಂತೆ ವಿಶೇಷ ನ್ಯಾಯಾಧೀಶರು ತಿಹಾರ್ ಜೈಲಿನ ಅಧಿಕಾರಿಗಳಿಗೆ ಸೂಚಿಸಿದ್ದರು.</p>.<p>ಕವಿತಾ ಅವರು ಗುರುವಾರ ಮತ್ತೆ ಹೊಸ ಅರ್ಜಿಯನ್ನು ಸಲ್ಲಿಸಿದ್ದು, ಅದರಲ್ಲಿ ‘ಜೈಲಿನ ಅಧಿಕಾರಿಗಳು ನ್ಯಾಯಲಯದ ಆದೇಶವನ್ನು ಪಾಲಿಸುತ್ತಿಲ್ಲ’ ಎಂದು ಆರೋಪಿಸಿದ್ದಾರೆ. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಜೈಲಿನ ಅಧಿಕಾರಿಗಳಿಂದ ಉತ್ತರ ಬಯಸಿದೆ ಮತ್ತು ವಿಚಾರಣೆಯನ್ನು ಶನಿವಾರಕ್ಕೆ ಮುಂದೂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಮನೆಯಲ್ಲಿ ತಯಾರಿಸಿದ ಆಹಾರ ಮತ್ತು ಇತರ ವಸ್ತುಗಳನ್ನು ನೀಡುವಂತೆ ನ್ಯಾಯಾಲಯ ನೀಡಿರುವ ಆದೇಶವನ್ನು ಜೈಲಿನ ಅಧಿಕಾರಿಗಳು ಪಾಲಿಸುತ್ತಿಲ್ಲ ಎಂದು ಆರೋಪಿಸಿ ಬಿಆರ್ಎಸ್ ನಾಯಕಿ ಕೆ.ಕವಿತಾ ಅವರು ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿ ತಿಹಾರ್ ಜೈಲಿನ ಅಧಿಕಾರಿಗಳು ಪ್ರತಿಕ್ರಿಯೆ ನೀಡುವಂತೆ ನ್ಯಾಯಾಲಯ ಸೂಚಿಸಿದೆ.</p>.<p>ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಕವಿತಾ ಅವರು, ‘ನನ್ನ ಆರೋಗ್ಯದ ದೃಷ್ಟಿಯಿಂದ ಮನೆಯಲ್ಲಿ ತಯಾರಿಸಿದ ಅಡುಗೆ ಮತ್ತು ಇತರ ವಸ್ತುಗಳನ್ನು ಬಳಸಲು ಅನುಮತಿ ನೀಡಬೇಕು’ ಎಂದು ಮಂಗಳವಾರ ಮನವಿ ಸಲ್ಲಿಸಿದ್ದರು.</p>.<p>ಈ ಹಿನ್ನೆಲೆಯಲ್ಲಿ, ನಿಯಮಗಳ ಅನ್ವಯ ಕವಿತಾ ಅವರಿಗೆ ಮನೆಯಲ್ಲಿ ತಯಾರಿಸಿದ ಅಡುಗೆ, ಚಪ್ಪಲಿ, ಬಟ್ಟೆ, ಹೊದಿಕೆ, ಪುಸ್ತಕ, ಪೆನ್ನು, ಪೇಪರ್, ಒಡವೆ, ಔಷಧ ಮತ್ತಿತರ ವಸ್ತುಗಳನ್ನು ಬಳಸಲು ಅವಕಾಶ ನೀಡುವಂತೆ ವಿಶೇಷ ನ್ಯಾಯಾಧೀಶರು ತಿಹಾರ್ ಜೈಲಿನ ಅಧಿಕಾರಿಗಳಿಗೆ ಸೂಚಿಸಿದ್ದರು.</p>.<p>ಕವಿತಾ ಅವರು ಗುರುವಾರ ಮತ್ತೆ ಹೊಸ ಅರ್ಜಿಯನ್ನು ಸಲ್ಲಿಸಿದ್ದು, ಅದರಲ್ಲಿ ‘ಜೈಲಿನ ಅಧಿಕಾರಿಗಳು ನ್ಯಾಯಲಯದ ಆದೇಶವನ್ನು ಪಾಲಿಸುತ್ತಿಲ್ಲ’ ಎಂದು ಆರೋಪಿಸಿದ್ದಾರೆ. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಜೈಲಿನ ಅಧಿಕಾರಿಗಳಿಂದ ಉತ್ತರ ಬಯಸಿದೆ ಮತ್ತು ವಿಚಾರಣೆಯನ್ನು ಶನಿವಾರಕ್ಕೆ ಮುಂದೂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>